AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಜಂಟಿಯಾಗಿ ಹಲವು ಅಂಶಗಳನ್ನು ಒಳಗೊಂಡ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿವೆ.

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ
Follow us
ವಿವೇಕ ಬಿರಾದಾರ
|

Updated on:Sep 06, 2023 | 11:29 AM

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು (Government Vehicle) ಬಳಸಲು ಮತ್ತು ಖಾಸಗಿ ವಾಹನಗಳ (Private Vehicle) ಬಳಕೆ ಕಡಿಮೆ ಮಾಡುವಂತೆ ಜನರನ್ನು ಉತ್ತೇಜಿಸಲು ಮತ್ತು ನಗರದಲ್ಲಿ ಸಂಚಾರ ದಟ್ಟಣೆ (Bengaluru Traffic) ಹೆಚ್ಚಿರುವ ರಸ್ತೆಗಳಲ್ಲಿ ವಾಹನ ಸವಾರರಿಂದ ದಟ್ಟಣೆ ಶುಲ್ಕವನ್ನು ವಸೂಲಿಗೆ ಕರ್ನಾಟಕ ಸರ್ಕಾರ ಚಿಂತಿಸುತ್ತಿದೆ. ಈ ಕ್ರಮವು ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಅಭಿವೃದ್ಧಿಪಡಿಸಲು ಸರಕಾರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (IISC) ಮತ್ತು ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (RIM) ಜಂಟಿಯಾಗಿ ವರದಿ ಸಲ್ಲಿಸಿವೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ. ಪಾರ್ಕಿಂಗ್ ನೀತಿ ಜಾರಿ, ಜನನಿಬಿಡ ರಸ್ತೆಗಳಲ್ಲಿ ವಾಹನ ಸವಾರರಿಂದ ಶುಲ್ಕ ವಸೂಲಿ ಮತ್ತು ಸಮಗ್ರ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಮಾಸ್ಟರ್ ಪ್ಲಾನ್ ರಚಿಸುವುದು ಸೇರಿದಂತೆ ವಿವಿಧ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಲಾಗಿದೆ.

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಸಾರ್ವಜನಿಕ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಈ ಸಲಹೆಗಳನ್ನು ಒಟ್ಟುಗೂಡಿಸಿ ಪ್ರತ್ಯೇಕ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಐಐಎಸ್​ಸಿ ಮತ್ತು ಆರ್​ಆಯ್​ಎಮ್​ಗೆ ರಾಜ್ಯ ಸರ್ಕಾರ ಸೂಚಿಸಿತ್ತು. ಅದರಂತೆ ಐಐಎಸ್‌ಸಿನ ಪ್ರೊಫೆಸರ್ ಆಶಿಶ್ ವರ್ಮಾ ಮತ್ತು ಆರ್‌ಆಯ್​ಎಂನ ಪ್ರೊಫೆಸರ್ ಮೇಘನಾ ವರ್ಮಾ ಅವರು ವರದಿ ಸಿದ್ದಪಡಿಸಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವರ್ಸಸ್ ಹೈದರಾಬಾದ್: ಯಾವ ನಗರ ಅತಿ ವೆಚ್ಚದಾಯಕ? ಟ್ವಿಟರ್​ನಲ್ಲಿ ವೈರಲ್​ ಆಗುತ್ತಿವೆ ಪೋಸ್ಟ್​​ಗಳು

ವರದಿಯು ಜೂನ್ ಮತ್ತು ಆಗಸ್ಟ್ ನಡುವೆ ಸಾರ್ವಜನಿಕರಿಂದ ಒಟ್ಟು 10,479 ಸಲಹೆ, ಸೂಚನೆಗಳನ್ನು ಸ್ವೀಕರಿಸಿದೆ. ಅಪ್ರಸ್ತುತ ಸಲ್ಲಿಕೆಗಳನ್ನು ತೆಗೆದುಹಾಕಿದ ನಂತರ ಕೊನೆಯದಾಗಿ 6,075 ಸಲಹೆ, ಸೂಚನೆಗಳನ್ನು ಪರಿಗಣಿಸಲಾಗಿದೆ.

ಮುಂಬರುವ ವರ್ಷಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನ ಹಾಗೂ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಪರಿಹರಿಸಲು, ಸೂಕ್ತವಾದ ಮಾಸ್ಟರ್​ಪ್ಲಾನ್ ಹಾಗೂ ಅನ್ವಯವಾಗುವ ಸಾರಿಗೆ ಯೋಜನೆಯನ್ನು ಅಭಿವೃದ್ಧಿಪಡಿಸಬೇಕಿದೆ. ಹಾಗೇ ಇದನ್ನು ಕಾಲಕಾಲಕ್ಕೆ ನವೀಕರಿಸಬೇಕು. ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಯೋಜನೆಗಳು ಅತ್ಯಗತ್ಯ. ಇದಲ್ಲದೆ, ವರದಿಯು ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ, ವಾಹನ ನಿಲುಗಡೆ ನೀತಿಯನ್ನು ಸಮಗ್ರವಾಗಿ ಜಾರಿ ಮತ್ತು ಪಾರ್ಕಿಂಗ್ ಶುಲ್ಕವನ್ನು ಸಂಗ್ರಹ ಮಾಡಬೇಕು.

ವರದಿಯು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ (BMLTA) ಪರಿಣಾಮಕಾರಿ ಅನುಷ್ಠಾನದ ಅಗತ್ಯವನ್ನು ಒತ್ತಿಹೇಳುತ್ತದೆ. ಮತ್ತು ಎಲೆಕ್ಟ್ರಿಕ್ ವಾಹನಗಳು, ಸೈಕಲ್‌ಗಳು, ಬಸ್‌ಗಳು ಮತ್ತು ಮೆಟ್ರೋದಂತಹ ಪರಿಸರ ಸ್ನೇಹಿ ಸಾರಿಗೆ ಬಳಸುವಂತೆ ಪ್ರೋತ್ಸಾಹಿಸುತ್ತದೆ.

ಲಂಡನ್‌ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ದಟ್ಟಣೆ ಶುಲ್ಕದ ಮಾದರಿಯನ್ನು ಇಲ್ಲಿ ಅಳವಡಿಸುವಂತೆ ವರದಿಯಲ್ಲಿ ಹೇಳಲಾಗಿದೆ. ಅಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ವಾಹನಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದರಿಂದ ಸಂಚಾರ ದಟ್ಟಣೆ ನಿವಾರಣೆಯಾಗಿದೆ

ವರದಿಯ ಪ್ರಮುಖ ಶಿಫಾರಸುಗಳು:

  1. ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಉತ್ತೇಜಿಸುವುದು
  2. ಫೀಡರ್ ಸೇವೆಗಳನ್ನು ಸುಧಾರಿಸಲು ಬಿಎಂಟಿಸಿ ಮತ್ತು ಮೆಟ್ರೋ ನಡುವೆ ಆದಾಯ ಹಂಚಿಕೆ ವ್ಯವಸ್ಥೆಯನ್ನು ಜಾರಿ ಮಾಡಬೇಕು.
  3. ಬಸ್ ಸೇವೆಯ ವೇಗವನ್ನು ಹೆಚ್ಚಿಸಲು ಬಸ್ ಟ್ರಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು
  4. ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಸುತ್ತಲಿನ ಪ್ರದೇಶಗಳಿಗೆ ವಿಸ್ತರಿಸುವುದು
  5. ಮೋಟಾರು ವಾಹನಗಳಿಗೆ ಪರ್ಯಾಯವಾಗಿ ಬೈಸಿಕಲ್ ಬಳಕೆಗೆ ಪ್ರೋತ್ಸಾಹ.
  6. ಶಾಪಿಂಗ್ ಮತ್ತು ಇನ್ನಿತರ ಕಾರ್ಯಕ್ಕಾಗಿ ಜನರ ಓಡಾಟ ತಪ್ಪಿಸಲು ಮಿಶ್ರ ಭೂ-ಬಳಕೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು.
  7. ಟ್ರಾಫಿಕ್ ಸಿಗ್ನಲ್‌ಗಳನ್ನು ನವೀಕರಿಸುವುದು.
  8. ಪಾದಚಾರಿ ಸ್ನೇಹಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Wed, 6 September 23

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ