AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿಮಾನ ನಿಲ್ದಾಣ ಅದಾನಿ ಸಮೂಹಕ್ಕೆ ಹಸ್ತಾಂತರಿಸುವುದು ಬೇಡ, ನಾವೇ ನಿರ್ವಹಿಸುತ್ತೇವೆ – ಕೇಂದ್ರಕ್ಕೆ ಪತ್ರ ಬರೆಯಲು ಕರ್ನಾಟಕ ಚಿಂತನೆ

Mangaluru International Airport: ಹೊಸ ವಿಮಾನ ನಿಲ್ದಾಣಗಳನ್ನು ಕೆಎಸ್‌ಐಐಡಿಸಿ ಅಧೀನದಡಿ ತರಲು ಸರ್ಕಾರ ಯೋಜಿಸುತ್ತಿದೆ. ಇದರಿಂದ ಅವುಗಳನ್ನು ರಾಜ್ಯ ಸರ್ಕಾರವೇ ನಿರ್ವಹಿಸಬಹುದು ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಅದಾನಿ ಸಮೂಹಕ್ಕೆ ಹಸ್ತಾಂತರಿಸುವುದು ಬೇಡ, ನಾವೇ ನಿರ್ವಹಿಸುತ್ತೇವೆ - ಕೇಂದ್ರಕ್ಕೆ ಪತ್ರ ಬರೆಯಲು ಕರ್ನಾಟಕ ಚಿಂತನೆ
ಮಂಗಳೂರು ವಿಮಾನ ನಿಲ್ದಾಣ ಅದಾನಿ ಸಮೂಹಕ್ಕೆ ಹಸ್ತಾಂತರಿಸುವುದು ಬೇಡ, ನಾವೇ ನಿರ್ವಹಿಸುತ್ತೇವೆ
ಸಾಧು ಶ್ರೀನಾಥ್​
|

Updated on:Jun 15, 2023 | 5:32 PM

Share

ಮಂಗಳೂರು ವಿಮಾನ ನಿಲ್ದಾಣವನ್ನು (Mangaluru International Airport) ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ (O&M) ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI) ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆಯಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ರಾಜ್ಯದಲ್ಲಿರುವ ಎಲ್ಲಾ ಹೊಸ ವಿಮಾನ ನಿಲ್ದಾಣಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸಹ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.

ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಎಎಐ ರಾಜ್ಯವನ್ನು ಸಂಪರ್ಕಿಸಿಲ್ಲ. ಈ ಬಗ್ಗೆ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದೇ ವೇಳೆ, AAI ರಾಜ್ಯಗಳ ಸಂಪನ್ಮೂಲಗಳನ್ನು ಬಳಸಿಕೊಳ್ಳುವಾಗ ರಾಜ್ಯದೊಂದಿಗೆ ಆದಾಯವನ್ನು ಹಂಚಿಕೊಳ್ಳದ ಕೇಂದ್ರದ ನೀತಿಯ ಬಗ್ಗೆ ಪಾಟೀಲ್ ಕಳವಳ ವ್ಯಕ್ತಪಡಿಸಿದರು. ರಾಜ್ಯವು ಆರರಿಂದ ಎಂಟು ಕೋಟಿ ರೂಪಾಯಿ ವೆಚ್ಚವನ್ನು ಭರಿಸುತ್ತದೆ. ನೀರು, ವಿದ್ಯುತ್ ಮತ್ತು ಇತರ ಮೂಲಭೂತ ಸೌಕರ್ಯಗಳ ವೆಚ್ಚವನ್ನು ಸಹ ಭರಿಸುತ್ತದೆ ಎಂದು ಅವರು ಹೇಳಿದರು.

ಹೊಸ ವಿಮಾನ ನಿಲ್ದಾಣಗಳನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಐಐಡಿಸಿ) ಅಡಿಯಲ್ಲಿ ತರಲು ಸರ್ಕಾರ ಯೋಜಿಸುತ್ತಿದೆ ಎಂದು ಸಚಿವರು ಹೇಳಿದರು. ಇದರಿಂದ ಅವುಗಳನ್ನು ರಾಜ್ಯ ಸರ್ಕಾರವೇ ನಿರ್ವಹಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಆದಾಯ ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ, ವಿಜಯಪುರ ಮತ್ತು ಹಾಸನದಂತಹ ಹೊಸ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯೋಜಿಸುತ್ತಿದೆ ಎಂದು ಪಾಟೀಲ್ ಹೇಳಿದರು.

ರಾಜ್ಯದಲ್ಲಿ ಇನ್ನೂ ಐದು ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಸರ್ಕಾರ ಯೋಜಿಸುತ್ತಿದೆ. ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳು ನಿರ್ಮಾಣ ಹಂತದಲ್ಲಿದ್ದು, ರಾಯಚೂರಿನಲ್ಲಿ ಕಾಮಗಾರಿ ಶೀಘ್ರ ಆರಂಭವಾಗಲಿದೆ.

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:18 pm, Thu, 15 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!