AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಆರ್​ಐ ಸ್ಕ್ಯಾನಿಂಗ್​ಗೆ ಹೆಚ್ಚು ಹಣ ನೀಡ್ತಿದ್ದೀರಾ? ಬೆಂಗಳೂರಿನ ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಸ್ಕ್ಯಾನಿಂಗ್​ಗೆ ಸರ್ಕಾರ ಚಿಂತನೆ

ಸ್ಕ್ಯಾನಿಂಗ್ ಮಾಡಿಸಲು ಜನರು ಖಾಸಗಿ ಸಂಸ್ಥೆಗಳು, ಖಾಸಗಿ ಡಯೋಗ್ನೋಸ್ಟಿಕ್ ಸೆಂಟರ್​ಗಳ ಮೊರೆ ಹೋಗ್ತಾ ಇದ್ದಾರೆ. ಡಯೋಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ವೆಚ್ಚ ದುಬಾರಿ ಆಗಿದ್ದು ಸಾವಿರಾರೂ ರಾಪಾಯಿ ಖರ್ಚು ಮಾಡಬೇಕಿದೆ. ಹೀಗಾಗಿ ಬೆಂಗಳೂರಿನ ಪ್ರಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ.

ಎಂಆರ್​ಐ ಸ್ಕ್ಯಾನಿಂಗ್​ಗೆ ಹೆಚ್ಚು ಹಣ ನೀಡ್ತಿದ್ದೀರಾ? ಬೆಂಗಳೂರಿನ ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಸ್ಕ್ಯಾನಿಂಗ್​ಗೆ ಸರ್ಕಾರ ಚಿಂತನೆ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Vinay Kashappanavar
| Edited By: |

Updated on: Oct 16, 2023 | 1:10 PM

Share

ಬೆಂಗಳೂರು, ಅ.16: ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗ್ತಿದೆ. ಚಿಕಿತ್ಸಾ ಸೌಲಭ್ಯವೂ ಹೆಚ್ಚಾಗ್ತಿದೆ (Government Hospital). ಆದರೆ ತುಂಬಾ ದಿನಗಳಿಂದ ಕೊರತೆ ಇರುವಂತಹ ಸೌಲಭ್ಯ ಅಂದರೆ ಅದು ಸ್ಕ್ಯಾನಿಂಗ್ ಸೌಲಭ್ಯ (Scanning). ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಸೌಲಭ್ಯ ವಿಲ್ಲದ ಹಿನ್ನಲೆ ರೋಗಿಗಳು ಪರದಾಡುವಂತಾಗಿದ್ದು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಸಾವಿರಾರೂ ರಾಪಾಯಿ ಖರ್ಚುಮಾಡಬೇಕಿತ್ತು. ಈಗ ಆರೋಗ್ಯ ಇಲಾಖೆ ಈ ಸಮಸ್ಯೆಗೂ ಗಡ್ ಬಾಯ್ ಹೇಳಲು ಮುಂದಾಗಿದೆ.

ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ  ಎಂಆರ್​ಐ ಸ್ಕ್ಯಾನಿಂಗ್

ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ನಾನಾ ಖಾಯಿಲೆಗಳಿಂದ ಚಿಕಿತ್ಸೆಗೆ ಬರುತ್ತಾರೆ. ಚಿಕಿತ್ಸೆ ಸರಿಯಾದ ರೀತಿಯಲ್ಲಿ ಸಿಕ್ಕುದ್ರು ಕೂಡ ಖಾಯಿಲೆ ನಿಗೂಢ ತಿಳಿಯೋದು ಕಷ್ಟ ಆಗಿದೆ. ಹೀಗಾಗಿ ಸ್ಕ್ಯಾನಿಂಗ್ ಅವಶ್ಯಕತೆ ಹೆಚ್ಚಾಗಿದೆ. ಆದರೆ ಸ್ಕ್ಯಾನಿಂಗ್ ಮಾಡಿಸಲು ಜನರು ಖಾಸಗಿ ಸಂಸ್ಥೆಗಳು, ಖಾಸಗಿ ಡಯೋಗ್ನೋಸ್ಟಿಕ್ ಸೆಂಟರ್​ಗಳ ಮೊರೆ ಹೋಗ್ತಾ ಇದ್ದಾರೆ. ಡಯೋಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ವೆಚ್ಚ ದುಬಾರಿ ಆಗಿದ್ದು ಸಾವಿರಾರೂ ರಾಪಾಯಿ ಖರ್ಚು ಮಾಡಬೇಕಿದೆ. ಬಡ ರೋಗಿಗಳ ಪಾಲಿಗೆ ಇದು ಆರ್ಥಿಕ ಸಂಕಷ್ಟ ತಂದಿದೆ. ಹೀಗಾಗಿ ಜನರಿಗೆ ಅನುಕೂಲ ಆಗುವುದಕ್ಕೆ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಾದ ಕೆ.ಸಿ. ಜನರಲ್, ಬೌರಿಂಗ್, ಜಯಗರ ಆಸ್ಪತ್ರೆ ಸೇರಿದಂತೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಮಿಷನ್‌ಗಳ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ರಾಜ್ಯದ 20 ಜಿಲ್ಲೆಗಳಲ್ಲಿ ಲಿಂಗ ಅನುಪಾತ ಕುಸಿತ; ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ನಿಗಾ ಇಡುವಂತೆ ಸಿಎಂ ಸೂಚನೆ

ಈಗಾಗಲೇ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಇದೆ. ಆದರೆ ಇದು ಪಿಪಿಪಿ ಮಾಡಲ್ ನಲ್ಲಿದ್ದು ರಿಯಾಯಿತಿ ದರದಲ್ಲಿ ಶುಲ್ಕವಿದೆ. ಜನರು ದುಡ್ಡು ಖರ್ಚು ಮಾಡಲೇ ಬೇಕಿದೆ. ಉಚಿತವಾಗಿಲ್ಲ. 18 ಜಿಲ್ಲಾಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕಾನ್ ಸೌಲಭ್ಯ ಇಲ್ಲದಾಗಿದೆ. ಹೀಗಾಗಿ ಆರಂಭದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಹೊಸ ಮೀಷನ್ ನೀಡಲು ಮುಂದಾಗಿದ್ದು ಇನ್ನೂ ಎಂಆರ್‌ಐ ಗೆ ಆಗುವ ವೆಚ್ಚದ ಬಗ್ಗೆ ನಿರ್ಧಾರ ಆಗಿಲ್ಲ. ಬಿಪಿಎಲ್ ಕಾರ್ಡ್​ದಾರರಿಗೆ ಈ ಸೌಲಭ್ಯ ಉಚಿತ ಆದರೆ ಉಳಿದವರಿಗೆ 100 ರೂಪಾಯಿ ದರ ಇರಲಿದೆ ಎಂದು ಆರೋಗ್ಯ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಒಟ್ನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಇಲ್ಲದೇ ಭಾರೀ ಸಮಸ್ಯೆ ಇದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಖಾಸಗಿ ಡಯೋಗ್ನೋಸ್ಟಿಕ್ ಸೆಂಟರ್‌ಗಳು ದುಪ್ಪಟ್ಟು ಹಣ ಪೀಕುತಾ ಇದ್ದು ಸದ್ಯ ಸರ್ಕಾರದ ಈ ನಿರ್ಧಾರ ಜನ ನಿಟ್ಟುಸಿರು ಬಿಡುವಂತಾಗಿದೆ. ಯಾವಾಗಿಂದ ಈ ಸೌಲಭ್ಯ ಸಿಗಲಿದೆಯೋ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ