AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೆಸರಲಿ ಐ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಚಿಂತನೆ

ಸರ್ಕಾರ ಐ ಡೋನೇಶನ್ ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ದಿವಗಂತ ನಟ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಐ ಬ್ಯಾಂಕ್ ಓಪನ್ ಮಾಡಲು ಚಿಂತನೆ ನಡೆಸಿದೆ. ಈ ಬಗ್ಗೆ ರಾಜಕುಮಾರ್ ಐ ಬ್ಯಾಂಕ್ ಸಂಘಟನೆಯಿಂದಲೂ ಸರ್ಕಾರಕ್ಕೆ ಮನವಿ ಕೇಳಿ ಬಂದಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೆಸರಲಿ ಐ ಬ್ಯಾಂಕ್ ಸ್ಥಾಪನೆಗೆ  ಸರ್ಕಾರ ಚಿಂತನೆ
ಪುನೀತ್ ರಾಜ್​ಕುಮಾರ್
Vinay Kashappanavar
| Edited By: |

Updated on: Oct 23, 2023 | 2:54 PM

Share

ಬೆಂಗಳೂರು, ಅ.23: ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ (Eye Donation). ಸಾವಿರಾರು ಜನರು ದೃಷ್ಠಿ ದೋಷದಿಂದ ಕಣ್ಣು ಕಳೆದುಕೊಂಡವರು ಪ್ರಪಂಚ ನೋಡಲು ಆಗದೆ ಕಣ್ಣು ಪಡೆಯಲು ಕ್ಯೂನಲ್ಲಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ದಿವಗಂತ ನಟ ಪುನೀತ್ ರಾಜ್​​ಕುಮಾರ್ (Puneeth Rajkumar) ಹೆಸರಲ್ಲಿ ಐ ಬ್ಯಾಂಕ್ (Eye Bank) ಓಪನ್ ಮಾಡಲು ಚಿಂತನೆ ನಡೆದಿದೆ.

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಐ ಬ್ಯಾಂಕ್ ತೆರೆಯಲು ಪ್ಲಾನ್

ರಾಜ್ಯದಲ್ಲಿ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ. ಅನೇಕ ಕಾರಣಗಳಿಂದ ಕಣ್ಣು ಕಳೆದುಕೊಂಡವರು, ದೃಷ್ಠಿ ದೋಷದಿಂದ ಬಳಲುತ್ತಿರುವವರು ಜಗತ್ತು ನೋಡಲು ಕಣ್ಣುಪಡೆಯಲು ಕಾಯುತ್ತಿದ್ದಾರೆ. ಇಂತವರಿಗೆ ದೃಷ್ಠಿ ಭಾಗ್ಯ ನೀಡುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಣ್ಣು ದಾನ ಹೆಚ್ಚಿಸಲು ಮುಂದಾಗಿದೆ. ಹೀಗಾಗಿ ಸ್ಯಾಂಡಲ್​ವುಡ್​ ಯುವರತ್ನ ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಐ ಬ್ಯಾಂಕ್ ತೆರೆಯಲು ಸರ್ಕಾರ ಚಿಂತನೆ ಮಾಡಿದೆ.

ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಮರಾಜನಗರದ ಯುವಕ; ಮೃತನ ಆಸೆಯಂತೆ ಕುಟುಂಬಸ್ಥರಿಂದ ನೇತ್ರದಾನ

ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೆಸರಲಿ ಐ ಬ್ಯಾಂಕ್ ತೆರೆಯಲು ಚಿಂತನೆ ನಡೆದಿದೆ. ಈಗಾಗಲೇ ರಾಜ್ಯದಲ್ಲಿ ಸಾವಿರಾರು ಜನರು ದೃಷ್ಠಿದೋಷ ಅನುಭವಿಸುತ್ತಿದ್ದಾರೆ. ಸಾವಿರಾರು ಜನರು ಕಣ್ಣಿಗಾಗಿ ಕ್ಯೂನಲ್ಲಿದ್ದಾರೆ. ಹೀಗಾಗಿ ಪುನೀತ್ ರಾಜಕುಮಾರ್ ಹೆಸರಲ್ಲಿ ಆರೋಗ್ಯ ಇಲಾಖೆ ಐ ಬ್ಯಾಂಕ್ ಆರಂಭಿಸಲು ಮುಂದಾಗಿದೆ. ನಟ ಪುನೀತ್ ಹೆಸರಲ್ಲಿ ಐ ಬ್ಯಾಂಕ್ ಶುರು ಮಾಡಿದ್ರೆ ಹೆಚ್ಚು ಜನರು ಕಣ್ಣಿನದಾನಕ್ಕೆ ಮುಂದಾಗುತ್ತಾರೆ. ಜನ ಜಾಗೃತಿಯಾಗುತ್ತೆ ಅನ್ನೋ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಐ ಬ್ಯಾಂಕ್ ಶುರು ಮಾಡುವ ಪ್ಲಾನ್ ಗೆ ಮುಂದಾಗಿದೆ. ಈ ಬಗ್ಗೆ ರಾಜಕುಮಾರ್ ಐ ಬ್ಯಾಂಕ್ ಸಂಘಟನೆಯಿಂದಲೂ ಸರ್ಕಾರಕ್ಕೆ ಮನವಿ ಕೇಳಿ ಬಂದಿದೆ.

ಪುನೀತ್ ರಾಜಕುಮಾರ್ ಹೆಸರಲ್ಲಿ ಐ ಬ್ಯಾಂಕ್ ಮೂಲಕ ಕಣ್ಣಿನ ದಾನ ಹೆಚ್ಚು ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪುನೀತ್ ಹೆಸರಿನ ಮೂಲಕ ಐ ಬ್ಯಾಂಕ್ ಓಪನ್ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಐ ಡೋನೆಷನ್ ಹೆಚ್ಚಿಸಿ ದೃಷ್ಠಿದೋಷವುಳವರ ಬಾಳಿಗೆ ಬೆಳಕು ನೀಡಲು ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್