AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ.

ಐಎಎಸ್ ಅಧಿಕಾರಿಗಳ ಬೆನ್ನಲ್ಲೇ 53 ಐಪಿಎಸ್​ ಅಧಿಕಾರಿಗಳಿಗೆ ನ್ಯೂ ಇಯರ್​ ಗಿಫ್ಟ್​​ ನೀಡಿದ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Dec 31, 2022 | 6:20 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೆಲ ಗಂಟೆಗಳ ಹಿಂದೆ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈಗ 53 ಐಪಿಎಸ್ (IPS)​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್​ ಗಿಫ್ಟ್​​ ಕೊಟ್ಟಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ಪಡೆದ ಅಧಿಕಾರಿಗಳು

  1. ಅಲೋಕ್ ಮೋಹನ್ ಡಿಜಿಪಿ (ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್)
  2.  ಸಿ ಹೆಚ್ ಪ್ರತಾಪ್ ರೆಡ್ಡಿ ಡಿಜಿಪಿ ಬೆಂಗಳೂರು ನಗರ
  3. ಮನೀಶ್ ಖಾರ್ಬಿಕರ್ ಡಿಜಿಪಿ (ಕಾರಾಗೃಹಗಳು) ಕಲಬುರಗಿ
  4. ಎನ್ ಸತೀಶ್ ಕುಮಾರ್ ಕಲಬುರಗಿ ಈಶಾನ್ಯ ರೇಂಜ್‌ ಐಜಿಪಿ
  5. ಸೌಮೇಂದು ಮುಖರ್ಜಿ ಎಡಿಜಿಪಿ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ
  6. ಎಂ ಚಂದ್ರಶೇಖರ್ ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್
  7. ರಮಣ್ ಗುಪ್ತಾ ಐಜಿಪಿ ಬೆಂಗಳೂರು ಉತ್ತರ ವಲಯ
  8. ಬಿ ಆರ್ ರವಿಕಾಂತೇಗೌಡ ಐಜಿಪಿ ಬೆಂಗಳೂರು ಕೇಂದ್ರ ವಲಯ
  9. ಬಿ ಎಸ್ ಲೋಕೇಶ್ ಕುಮಾರ್ ಐಜಿಪಿ ಬಳ್ಳಾರಿ ವಲಯ

ಇನ್ನು ಈ ಬಡ್ತಿ ಪಡೆಯುವ ಪಟ್ಟಿಯಲ್ಲಿ ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ ಹೆಸರು ಸಹ ಇತ್ತು. ಆದ್ರೆ, ಅವರ ಮೇಲೆ ಕೆಲ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರ ಬಡ್ತಿಯನ್ನು ತಡೆ ಹಿಡಿದಿದೆ ಎಂದು ತಿಳಿದುಬಂದಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ 2021ರಲ್ಲಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 31 December 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್