AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ
ವಿವೇಕ ಬಿರಾದಾರ
|

Updated on: Aug 05, 2023 | 7:54 AM

Share

ಬೆಂಗಳೂರು: ಬಿಬಿಎಂಪಿಯ (BBMP) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. 2021ರ ಜನವರಿ 29ರಂದು ಅಂದಿನ ಬಿಜೆಪಿ (BJP) ಸರ್ಕಾರ ಬಿಬಿಎಂಪಿಯ ವಾರ್ಡ್ (Ward) ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಈ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ. ಪಾಲಿಕೆ ಅಧಿನಿಯಮ 2020ರ ಸೆಕ್ಷನ್ 7 ವಾರ್ಡ್​​ ಮರುವಿಂಗಡಣೆಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಸರ್ಕಾರಿ ಆದೇಶದ ಅನುಸಾರ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದ ಸಮಿತಿಯು – 2011 ರ ಜನಗಣತಿಯ ಆಧಾರದ ಮೇಲೆ ವಾರ್ಡ್‌ಗಳ ವಿಂಗಡಣೆಯ ಹೊಸ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. 243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru News: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರ್​ಐ

ಜುಲೈ 22 ರಂದು ರಾಜ್ಯ ಸರ್ಕಾರವು ರಚಿಸಿದ ಸಮಿತಿಯು ನಗರಾಭಿವೃದ್ಧಿ ಇಲಾಖೆಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಸಿಗದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಒಟ್ಟು 243 ವಾರ್ಡ್‌ಗಳಿವೆ.

10 ದಿನ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಇನ್ನು ನಗರದ ನಗರಾಭಿವೃದ್ಧಿ ಇಲಾಖೆ ಸಮಿತಿ ಸಲ್ಲಿಕೆ ಮಾಡಿದ ವಾರ್ಡ್ ನಕ್ಷೆ ಮತ್ತು ಗಡಿ ನಿಗದಿಪಡಿಸಿದ ವರದಿಯನ್ನು ರಾಜ್ಯಪತ್ರ ಹೊರಡಿಸುವ ಮೂಲಕ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕೋರಲಾಗುತ್ತದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಎನಿಸಿದರೆ, ವಾರ್ಡ್ ರಚನೆ, ಗಡಿ ಹಾಗೂ ನಕ್ಷೆ ಬದಲಾವಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ.

2021ರಲ್ಲಿ ರಚನೆ ಮಾಡಿದ 243 ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಮತ್ತಿತರ ಮುಖಂಡರು ಹೈಕೋರ್ಟ್‌ನ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್ 19ರಂದು ಹೊಸದಾಗಿ ವಾರ್ಡ್‌ ಪುನರ್ ವಿಂಗಡಣೆಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು. ಈಗಾಗಲೇ ಬಹುತೇಕ ಆರು ವಾರ ಪೂರ್ಣಗೊಂಡಿದೆ. ಉಳಿದ ಪ್ರಕ್ರಿಯೆಯನ್ನು ಇನ್ನಾರು ವಾರದಲ್ಲಿ ಪೂರ್ಣಗೊಳಿಸಬೇಕಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಬಿಎಂಪಿ ಚುನಾವಣೆಗೆ ಹಿಡಿದ ಗ್ರಹಣ ಬಿಡಿಸುವ ಲೆಕ್ಕಾಚಾರದಲ್ಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಲೋಕಸಭಾ ಚುನಾವಣೆ ಮುನ್ನ, ಅಂದರೆ ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್