AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ
ವಿವೇಕ ಬಿರಾದಾರ
|

Updated on: Aug 05, 2023 | 7:54 AM

Share

ಬೆಂಗಳೂರು: ಬಿಬಿಎಂಪಿಯ (BBMP) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. 2021ರ ಜನವರಿ 29ರಂದು ಅಂದಿನ ಬಿಜೆಪಿ (BJP) ಸರ್ಕಾರ ಬಿಬಿಎಂಪಿಯ ವಾರ್ಡ್ (Ward) ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಈ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ. ಪಾಲಿಕೆ ಅಧಿನಿಯಮ 2020ರ ಸೆಕ್ಷನ್ 7 ವಾರ್ಡ್​​ ಮರುವಿಂಗಡಣೆಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಸರ್ಕಾರಿ ಆದೇಶದ ಅನುಸಾರ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದ ಸಮಿತಿಯು – 2011 ರ ಜನಗಣತಿಯ ಆಧಾರದ ಮೇಲೆ ವಾರ್ಡ್‌ಗಳ ವಿಂಗಡಣೆಯ ಹೊಸ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. 243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru News: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರ್​ಐ

ಜುಲೈ 22 ರಂದು ರಾಜ್ಯ ಸರ್ಕಾರವು ರಚಿಸಿದ ಸಮಿತಿಯು ನಗರಾಭಿವೃದ್ಧಿ ಇಲಾಖೆಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಸಿಗದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಒಟ್ಟು 243 ವಾರ್ಡ್‌ಗಳಿವೆ.

10 ದಿನ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಇನ್ನು ನಗರದ ನಗರಾಭಿವೃದ್ಧಿ ಇಲಾಖೆ ಸಮಿತಿ ಸಲ್ಲಿಕೆ ಮಾಡಿದ ವಾರ್ಡ್ ನಕ್ಷೆ ಮತ್ತು ಗಡಿ ನಿಗದಿಪಡಿಸಿದ ವರದಿಯನ್ನು ರಾಜ್ಯಪತ್ರ ಹೊರಡಿಸುವ ಮೂಲಕ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕೋರಲಾಗುತ್ತದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಎನಿಸಿದರೆ, ವಾರ್ಡ್ ರಚನೆ, ಗಡಿ ಹಾಗೂ ನಕ್ಷೆ ಬದಲಾವಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ.

2021ರಲ್ಲಿ ರಚನೆ ಮಾಡಿದ 243 ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಮತ್ತಿತರ ಮುಖಂಡರು ಹೈಕೋರ್ಟ್‌ನ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್ 19ರಂದು ಹೊಸದಾಗಿ ವಾರ್ಡ್‌ ಪುನರ್ ವಿಂಗಡಣೆಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು. ಈಗಾಗಲೇ ಬಹುತೇಕ ಆರು ವಾರ ಪೂರ್ಣಗೊಂಡಿದೆ. ಉಳಿದ ಪ್ರಕ್ರಿಯೆಯನ್ನು ಇನ್ನಾರು ವಾರದಲ್ಲಿ ಪೂರ್ಣಗೊಳಿಸಬೇಕಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಬಿಎಂಪಿ ಚುನಾವಣೆಗೆ ಹಿಡಿದ ಗ್ರಹಣ ಬಿಡಿಸುವ ಲೆಕ್ಕಾಚಾರದಲ್ಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಲೋಕಸಭಾ ಚುನಾವಣೆ ಮುನ್ನ, ಅಂದರೆ ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!