AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು; ರೈತರಿಂದ ನೇರವಾಗಿ ಹಣ್ಣನ್ನು ಖರೀದಿಸಲು ಈ ವೆಬ್​ಸೈಟ್​ಗೆ ಭೇಟಿ ನೀಡಿ

ಇಂದಿನಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆ ಬಾಗಿಲಿಗೆ ಬರಲಿದೆ ಮಾವಿನ ಹಣ್ಣು; ರೈತರಿಂದ ನೇರವಾಗಿ ಹಣ್ಣನ್ನು ಖರೀದಿಸಲು ಈ ವೆಬ್​ಸೈಟ್​ಗೆ ಭೇಟಿ ನೀಡಿ
ಮಾವಿನ ಹಣ್ಣು
TV9 Web
| Updated By: sandhya thejappa|

Updated on:May 16, 2022 | 1:18 PM

Share

ಬೆಂಗಳೂರು: ಮಳೆ ಶುರುವಾಗುತ್ತಿದ್ದಂತೆ ಮಾವಿನ (Mango) ಸೀಸನ್ ಕೂಡಾ ಆರಂಭವಾಗುತ್ತದೆ. ಅಂಗಡಿಗಳಲ್ಲಿ ಹಣ್ಣಿನ ರಾಜ ಮಾವಿನ ಹಣ್ಣಿನ ವ್ಯಾಪಾರ ಜೋರಾಗಿದೆ. ಈ ನಡುವೆ ರಾಜ್ಯದ ಜನರಿಗೆ ಖುಷಿ ಸುದ್ದಿಯೊಂದಿದೆ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಅಂಗಡಿಗೆ ಹೋಗಿ ಖರೀದಿಸಬೇಕು ಅಂತ ಇಲ್ಲ. ನಿಮಗೆ ಬೇಕಾಗುವ ನಾನಾ ತಳಿಯ ಮಾವಿನ ಹಣ್ಣನ್ನು ಆನ್​ಲೈನ್​ನಲ್ಲಿ (Online) ಬುಕ್ ಮಾಡಿದರೆ ಸಾಕು ಮನೆ ಬಾಗಿಲಿಗೆ ಬಂದು ತಲುಪುತ್ತದೆ. ಇಂದಿನಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (KSMDMCL) ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಕ್ ಮಾಡಲು ನಿಗಮದ www.karsirimangoes.karnataka.gov.in ವೆಬ್​ಸೈಟ್​ಗೆ ಹೋಗಬೇಕು. ನಂತರ ತಮಗೆ ಬೇಕಾಗುವ ತಳಿ ಹಣ್ಣನ್ನು ಆರ್ಡರ್ ಮಾಡಬಹುದು. ಹೀಗೆ ಬುಕ್ ಮಾಡಿದ ಹಣ್ಣು ನೇರವಾಗಿ ರೈತರಿಂದ ಗ್ರಾಹಕರ ಕೈಗೆ ಸೇರುತ್ತದೆ. ಕೊರೊನಾ ಕಾರಣದಿಂದ ರೈತರು ಬೆಳೆದ ಮಾವಿನ ಹಣ್ಣಿಗೆ ಬೇಡಿಕೆ ಇರಲಿಲ್ಲ. ಹೀಗಾಗಿ 2020 ರಲ್ಲಿ ರಾಜ್ಯ ಸರ್ಕಾರ ಮತ್ತು ಭಾರತ ಅಂಚೆ ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಂದ ಗ್ರಾಹಕರಿಗೆ ಆನ್​ಲೈನ್​ ಮೂಲಕ ತಲುಪಿಸುವ ಸೇವೆಗಳನ್ನ ಆರಂಭಿಸಿತು.

ಕಳೆದ ಬಾರಿ ಭರ್ಜರಿ ವ್ಯಾಪಾರ: ಕಳೆದ ಬಾರಿ ಯಶಸ್ಸು ಕಂಡ ನಂತರ KSMDMCL ಈ ಬಾರಿಯೂ ಆನ್​ಲೈನ್​ ಶಾಪ್​ನ ಮುಂದುವರಿಸಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ KSMDMCLನ ವ್ಯವಸ್ಥಾಪಕ ನಿರ್ದೇಶಕ ಸಿಜಿ ನಾಗರಾಜು, ಕಳೆದ ಎರಡು ವರ್ಷಗಳಲ್ಲಿ ರೈತರು ಮತ್ತು ಗ್ರಾಹಕರಿಗೆ ಹೆಚ್ಚು ಉಪಯುಕ್ತವಾಗಿದೆ. 2020ರಲ್ಲಿ ರಾಜ್ಯಾದ್ಯಂತ 35 ಸಾವಿರ ಗ್ರಾಹಕರಿಗೆ ಒಟ್ಟು 100 ಟನ್ ಮಾವು ಪೂರೈಕೆಯಾಗಿದ್ದು, 2021ರಲ್ಲಿ ಕಡಿಮೆ ಇಳುವರಿ ಬಂದರೂ 45 ಸಾವಿರ ಗ್ರಾಹಕರಿಗೆ 79 ಟನ್ ಮಾವು ಮಾರಾಟವಾಗಿದೆ. ಈ ಮೂಲಕ ಗ್ರಾಹಕರು ಆನ್‌ಲೈನ್‌ನಲ್ಲಿ ರೈತರಿಂದ ಗುಣಮಟ್ಟದ ಮಾವನ್ನು ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂದು ತಿಳಿಸಿದರು.

ಪೋರ್ಟಲ್​ನಲ್ಲಿ ರೈತರ ಹೆಸರು, ಮೊಬೈಲ್ ಸಂಖ್ಯೆಗಳು ಮತ್ತು ಅವರು ಬೆಳೆದ ಹಣ್ಣುಗಳ ತಳಿಗಳ ಬಗ್ಗೆ ಮಾಹಿತಿ ಲಭ್ಯವಿದೆ. ಗ್ರಾಹಕರು ಆರ್ಡರ್ ಮಾಡಿದ ನಂತರ ರೈತರು ಸಂದೇಶವನ್ನು ಸ್ವೀಕರಿಸುತ್ತಾರೆ. ನಂತರ ರೈತರು ಹಣ್ಣುಗಳನ್ನು ಪ್ಯಾಕ್ ಮಾಡಿ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸ್ (GPO)ಗೆ ಕಳುಹಿಸುತ್ತಾರೆ. ಬಾಕ್ಸ್‌ಗಳನ್ನು GPO ಯಿಂದ ಆಯಾ ಸ್ಥಳಗಳಿಗೆ ಕಳುಹಿಸಲಾಗುತ್ತದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Mon, 16 May 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!