Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸರ್ಕಾರ, ಕಾರಣವೇನು?

ರಾಜ್ಯದ ಗೃಹಿಣಿಯರಿಗೆ ಸರ್ಕಾರ ಶಾಕ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿಗಿದ್ದು ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್​ ಮೂಲಕ ಮಾಹಿತಿ ನೀಡಿದೆ. ರಾಜ್ಯದ ಈಗಾಗಲೇ ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ.

ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸರ್ಕಾರ, ಕಾರಣವೇನು?
ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತ
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on:Sep 07, 2023 | 1:59 PM

ಬೆಂಗಳೂರ, ಸೆ.07: ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ(Gruha Lakshmi Scheme) ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಕ್ಸ್(ಹಿಂದಿನ ಟ್ವಿಟರ್) ಮೂಲಕ ಮಾಹಿತಿ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರಾಜ್ಯದ ಈಗಾಗಲೇ ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ.

ಆಗಸ್ಟ್ 30ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಯೋಜನೆ ಜಾರಿಯಾಗಿ ಒಂದೇ ವಾರಕ್ಕೆ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಶೀಘ್ರದಲ್ಲಿಯೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದೆ.

ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಈ ಹಿಂಎದಯೇ ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ಮತ್ತೆ ಹೊಸ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

ಈಗಾಗಲೇ 1.28 ಕೋಟಿ ಫಲಾನುಭವಿಗಳ ಪೈಕಿ 1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಟಿ ಅಪ್ಡೇಟ್ ಮಾಡಿಸಿಲ್ಲ.

ಇದನ್ನೂ ಓದಿ: ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ, 1.2 ಕೋಟಿ ಗೃಹಿಣಿಯರ ಖಾತೆಗಳಿಗೆ ತಲಾ ರೂ. 2,000 ಡಿಬಿಟಿ ಮೂಲಕ ಜಮಾ!

ಏನಿದು ಗೃಹಲಕ್ಷ್ಮಿ ಯೋಜನೆ?’

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಂಚ ಯೋಜನೆಗಳನ್ನು ಘೋಷಿಸಿತ್ತು. ಈ ಪಂಚ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದಾದ ಬಳಿಕ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಪಂಚ ಯೋಜನಗಳಿಗೆ ಚಾಲನೆ ನೀಡಲಾಗುತ್ತಿದೆ. ಕಳೆದ ಆಗಸ್ಟ್ 30ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:33 pm, Thu, 7 September 23

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ