ಸರ್ಕಾರದ ಸುಪರ್ದಿ ಸೇರುತ್ತಾ ಬಿಬಿಎಂಪಿ ಡಿಗ್ರಿ ಕಾಲೇಜ್​ಗಳು? ಪಾಲಿಕೆ ಆಯುಕ್ತರು ಕೊಟ್ರು ಸುಳಿವು

ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ನಿರ್ವಹಣೆಯ ನಿರ್ಲಕ್ಷ್ಯ ಸೇರಿ ವಿವಿಧ ಕಾರಣಗಳಿಂದ ಇತ್ತೀಚೆಗಷ್ಟೇ ಬಿಬಿಎಂಪಿ ಶಾಲೆ-ಪಿಯು ಕಾಲೇಜುಗಳನ್ನ ಸರ್ಕಾರದ ಸುಪರ್ದಿಗೆ ಪಡೆಯೋಕೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ರು. ಅದರಂತೆ ಬಿಬಿಎಂಪಿ ನಿರ್ವಹಣೆಯಲ್ಲಿದ್ದ 142 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 17 ಪಿಯು ಕಾಲೇಜುಗಳನ್ನ ಸರ್ಕಾರ ಸುಪರ್ದಿಗೆ ಪಡೆಯೋ ನಿರ್ಧಾರವಾಗಿತ್ತು. ಇದೀಗ ಡಿಗ್ರಿ ಕಾಲೇಜುಗಳನ್ನ ಕೂಡ ತೆಕ್ಕೆಗೆ ಸೇರಿಸಿಕೊಳ್ಳೊ ಸುಳಿವು ಸಿಗ್ತಿದೆ.

ಸರ್ಕಾರದ ಸುಪರ್ದಿ ಸೇರುತ್ತಾ ಬಿಬಿಎಂಪಿ ಡಿಗ್ರಿ ಕಾಲೇಜ್​ಗಳು? ಪಾಲಿಕೆ ಆಯುಕ್ತರು ಕೊಟ್ರು ಸುಳಿವು
ಪ್ರಾತಿನಿಧಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jan 10, 2024 | 3:16 PM

ಬೆಂಗಳೂರು, ಜ.10: ಇತ್ತೀಚೆಗಷ್ಟೇ ಬಿಬಿಎಂಪಿಯ (BBMP) ಶಾಲಾ-ಕಾಲೇಜುಗಳನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದ ಸರ್ಕಾರ, ಮುಂದಿನ ಶೈಕ್ಷಣಿಕ ವರ್ಷದಿಂದ ಬಿಬಿಎಂಪಿಯ ಶಾಲೆ-ಪಿಯು ಕಾಲೇಜುಗಳನ್ನ ತನ್ನ ಸುಪರ್ದಿಗೆ ತೆಗೆದುಕೊಳ್ಳೋಕೆ ನಿರ್ಧರಿಸಿತ್ತು. ಇದೀಗ ಬಿಬಿಎಂಪಿ ವ್ಯಾಪ್ತಿಯ ಡಿಗ್ರಿ ಕಾಲೇಜುಗಳನ್ನ ಕೂಡ ಸರ್ಕಾರದ (Karnataka Government) ಸುಪರ್ದಿಗೆ ಒಪ್ಪಿಸೋಕೆ ಪಾಲಿಕೆ ತಯಾರಿ ನಡೆಸಿದೆ. ಸದ್ಯದಲ್ಲೇ ಉನ್ನತ ಶಿಕ್ಷಣ ಇಲಾಖೆ ಜೊತೆ ಚರ್ಚಿಸಲು ಸಜ್ಜಾಗಿರೋ ಪಾಲಿಕೆ, ಡಿಗ್ರಿ ಕಾಲೇಜುಗಳನ್ನ ಸೇರಿಸಿಕೊಳ್ಳಲು ಪ್ಲಾನ್ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ನಿರ್ವಹಣೆಯ ನಿರ್ಲಕ್ಷ್ಯ ಸೇರಿ ವಿವಿಧ ಕಾರಣಗಳಿಂದ ಇತ್ತೀಚೆಗಷ್ಟೇ ಬಿಬಿಎಂಪಿ ಶಾಲೆ-ಪಿಯು ಕಾಲೇಜುಗಳನ್ನ ಸರ್ಕಾರದ ಸುಪರ್ದಿಗೆ ಪಡೆಯೋಕೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ರು. ಅದರಂತೆ ಬಿಬಿಎಂಪಿ ನಿರ್ವಹಣೆಯಲ್ಲಿದ್ದ 142 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 17 ಪಿಯು ಕಾಲೇಜುಗಳನ್ನ ಸರ್ಕಾರ ಸುಪರ್ದಿಗೆ ಪಡೆಯೋ ನಿರ್ಧಾರವಾಗಿತ್ತು. ಇದೀಗ ಡಿಗ್ರಿ ಕಾಲೇಜುಗಳನ್ನ ಕೂಡ ತೆಕ್ಕೆಗೆ ಸೇರಿಸಿಕೊಳ್ಳೊ ಸುಳಿವು ಸಿಗ್ತಿದೆ.

ಇದನ್ನೂ ಓದಿ:ಆದಾಯ ಹೆಚ್ಚಳಕ್ಕೆ ಬಿಬಿಎಂಪಿಯಿಂದ ಹೊಸ ಪ್ಲಾನ್; ತನ್ನ ವ್ಯಾಪ್ತಿಯ ಗುತ್ತಿಗೆ, ಲೀಜ್ ಆಸ್ತಿಗಳ ಮಾರಾಟಕ್ಕೆ ಪ್ಲಾನ್

ಸದ್ಯ ಬಿಬಿಎಂಪಿಯ ಶಾಲಾ-ಕಾಲೇಜುಗಳನ್ನ ಸರ್ಕಾರದ ಸುಪರ್ದಿಗೆ ನೀಡೋ ನಿರ್ಧಾರದಿಂದ ಈಗಾಗಲೇ ಬಿಬಿಎಂಪಿ ಶಾಲಾ-ಕಾಲೇಜುಗಳ ಹೊರಗುತ್ತಿಗೆ ಶಿಕ್ಷಕರು ಬೀದಿಗೆ ಬಿದ್ದಿದ್ದಾರೆ. ಇದರ ಮಧ್ಯೆ ಇದೀಗ ಉನ್ನತ ಶಿಕ್ಷಣ ಇಲಾಖೆಯ ಜೊತೆ ಚರ್ಚಿಸಿ ಬಿಬಿಎಂಪಿ ಡಿಗ್ರಿ ಕಾಲೇಜುಗಳನ್ನ ಕೂಡ ಸರ್ಕಾರದ ಸುಪರ್ದಿಗೆ ನೀಡೋಕೆ ಬಿಬಿಎಂಪಿ ಸಜ್ಜಾಗಿದೆ.

ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿರೋ 4 ಡಿಗ್ರಿ ಕಾಲೇಜುಗಳನ್ನ ಕೂಡ ಸರ್ಕಾರದ ಕೈಗೆ ನೀಡಲು ಪಾಲಿಕೆ ನಿರ್ಧಾರ ಮಾಡಿದೆ. ನಿರ್ವಹಣೆ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಥ್ ನೀಡಲು ಪಾಲಿಕೆ ಕೂಡ ಸಜ್ಜಾಗಿದ್ದು, ಈ ಪ್ಲಾನ್ ಎಷ್ಟರಮಟ್ಟಿಗೆ ಫಲ ನೀಡುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ