AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 75 ನೇತಾಜಿ ಅಮೃತ ಶಾಲೆಗಳ ಸ್ಥಾಪನೆಗೆ 9 ಕೋಟಿ ಅನುದಾನ

ಜನವರಿ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತಾಜಿ ಶಾಲೆಗಳನ್ನು ಘೋಷಿಸಿದ್ದರು. ನೇತಾಜಿ ಶಾಲೆಗಳಿಗೆ ₹ 9 ಕೋಟಿ ಅನುದಾನವನ್ನೂ ಮಂಜೂರು ಮಾಡಿದ್ದರು

ಕರ್ನಾಟಕದಲ್ಲಿ 75 ನೇತಾಜಿ ಅಮೃತ ಶಾಲೆಗಳ ಸ್ಥಾಪನೆಗೆ 9 ಕೋಟಿ ಅನುದಾನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಎನ್​ಸಿಸಿ ಕೆಡೆಟ್​ಗಳು
TV9 Web
| Edited By: |

Updated on: Jan 25, 2022 | 6:23 PM

Share

ಬೆಂಗಳೂರು: ಕರ್ನಾಟಕದಲ್ಲಿ 75 ನೇತಾಜಿ ಅಮೃತ ಶಾಲೆಗಳನ್ನು ಘೋಷಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಜನವರಿ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaja Bommai) ನೇತಾಜಿ ಶಾಲೆಗಳನ್ನು ಘೋಷಿಸಿದ್ದರು. ನೇತಾಜಿ ಶಾಲೆಗಳಿಗೆ ₹ 9 ಕೋಟಿ ಅನುದಾನವನ್ನೂ ಮಂಜೂರು ಮಾಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದ ಹಿನ್ನೆಲೆಯಲ್ಲಿ 75 ಎನ್​ಸಿಸಿ ಯುನಿಟ್ (NCC Cadets) ಆರಂಭಿಸಿ 7,500 ಕೆಡೆಟ್‌ಗಳಿಗೆ ಅವಕಾಶ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದರು.

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಈಚೆಗೆ ಜಕ್ಕೂರಿನ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬೊಮ್ಮಾಯಿ, ಎನ್‌ಸಿಸಿ ಸೇರಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ಸರ್ಕಾರವು ಈ ತೀರ್ಮಾನಕ್ಕೆ ಬಂದಿದೆ. 7,500 ವಿದ್ಯಾರ್ಥಿಗಳಿಗೆ ವರ್ಷಕ್ಕೆ ತಲಾ ₹ 12 ಸಾವಿರ ಖರ್ಚಾಗಲಿದೆ. ಈ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದರು.

ಕರ್ನಾಟಕದ ವಿವಿಧ ಶಾಲೆಗಳಲ್ಲಿ 44 ಸಾವಿರ ಕೆಡೆಟ್‌ಗಳಿದ್ದಾರೆ. ಇವರನ್ನು ಕಾಲೇಜುಗಳ ಜೊತೆ ವಿಲೀನಗೊಳಿಸಿ ಕೆಡೆಟ್‌ಗಳ ಸಂಖ್ಯೆಯನ್ನು 50 ಸಾವಿರಕ್ಕೆ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ ಇದಕ್ಕೆ ರಕ್ಷಣಾ ಇಲಾಖೆ ಅನುಮತಿ ಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ; ಸಿಎಂ ಬೊಮ್ಮಾಯಿ ಮಾತು ಇದನ್ನೂ ಓದಿ: 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ