AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಕರ್ತವ್ಯ ಹುದ್ದೆ ಸೃಷ್ಟಿಸಿದ ಸರ್ಕಾರ: ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ LK ಅತೀಕ್ ನೇಮಕ

ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಹುದ್ದೆ ಸೃಷ್ಟಿಸಿದೆ.

ವಿಶೇಷ ಕರ್ತವ್ಯ ಹುದ್ದೆ ಸೃಷ್ಟಿಸಿದ ಸರ್ಕಾರ: ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ LK ಅತೀಕ್ ನೇಮಕ
ಎಲ್​ಕೆ ಅತೀಕ್
ರಮೇಶ್ ಬಿ. ಜವಳಗೇರಾ
|

Updated on: May 31, 2023 | 1:45 PM

Share

ಬೆಂಗಳೂರು: ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಮೇಲೆ ಎಲ್​ಕೆ ಅತಿಕ್(LK Atheeq )ಅವರನ್ನು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ವಿಶೇಷ ಕರ್ತವ್ಯದ ಮೇಲೆ ಜೂನ್ 30ರ ವರೆಗೆ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ(finance department additional chief secretary )ಎಲ್​ಕೆ ಅತಿಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಜೂನ್ 30ರಿಂದ ಹಣಕಾಸು ಇಲಾಖೆ ಅಡಿಷನಲ್ ಚೀಫ್ ಸೆಕ್ರೆಟರಿಯಾಗಿ ಎಲ್​ಕೆ ಅತೀಕ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಬೆಂಗಳೂರು ನೂತನ ಕಮಿಷನರ್ ಆಗಿ ದಯಾನಂದ್ ಅಧಿಕಾರ ಸ್ವೀಕಾರ

ಬೆಂಗಳೂರು: ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ ದಯಾನಂದ್ ಅವರು ಇಂದು(ಮೇ 31) ಅಧಿಕಾರ ವಹಿಸಿಕೊಂಡರು. ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಹಿಂದಿನ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಬೆಂಗಳೂರು ನೂತನ ಕಮಿಷನರ್ ದಯಾನಂದ್, ಸಿಎಂ ಸಿದ್ದರಾಮಯ್ಯ ,ಸೇರಿದಂತೆ ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ತೆರೆಯ ಹಿಂದೆ ಮಾತನಾಡುತ್ತಿದೆ. ಈಗ ತೆರೆಯ ಮುಂದೆ ಮಾತನಾಡುತ್ತೀದ್ದೇನೆ. ನಾನು ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಮಗ. ಬಹಳಷ್ಟು ಚಾಲೆಂಜಸ್ ಇದ್ದಾವೆ. ಅದನ್ನು ಎದರಿಸಲು ಎಲ್ಲಾ ಸಿಬ್ಬಂದಿಯನ್ನು ಗಮನಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಬೆಂಗಳೂರು ಬದಲಾವಣೆ ಬಗ್ಗೆ ಹೆಚ್ಚಿನ ಹೊತ್ತು ನೀಡುತ್ತೇನೆ. ಕಮಲ್ ಪಂತ್ ,ಪ್ರತಾಪ್ ರೆಡ್ಡಿ ಸೇರಿದಂತೆ ನಗರದಲ್ಲಿ ಹಿರಿಯ ಅಧಿಕಾರಿಗಳು ಬಂದು ಹೋಗಿದ್ದಾರೆ. ನಗರದಲ್ಲಿ ನಾಗರಿಕರು ಇಲಾಖೆ ಮೇಲೆ ಅಪಾರವಾಗಿ ವಿಶ್ವಾಸ ಮತ್ತು ನಂಬಿಕೆ ಇಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳವ ಕೆಲಸ ಮಾಡುತ್ತೇನೆ ಎಂದರು.

ಇದೇ ವೇಳೆ ಟೋಯಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದು, ಮುಂದೆ ಅದನ್ನು ನೋಡಬೇಕು. ಈ ಬಗ್ಗೆ ಚರ್ಚೆ ಮಾಡಬೇಕು. ಇಂಟಲಿಜೆನ್ಸಿ ಪೊಲೀಸ್ ಇಲಾಖೆಯ ಬ್ಯಾಕ್ ಬೋನ್. ಅದನ್ನು ಹೆಚ್ಚು ಬಲವರ್ಧನೆ ಮಾಡಬೇಕು. ಇವತ್ತಿನ ಪೊಲೀಸ್ ವ್ಯವಸ್ಥೆಗೆ ಅನುಗುಣವಾಗಿ ಇರಬೇಕು. ಟೆಕ್ನಾಲಜಿ ಹಾಗೂ ಸೈಬರ್ ಬಗ್ಗೆ ಕೆಲಸ ಆಗಬೇಕು: ಮಾತಾಡುವಾಗ ಮೊದಲಿಗೆ ನಾನು ಬೆಂಗಳೂರಿಗ ಎಂದು ಹೇಳುತ್ತೇನೆ. ಬೆಂಗಳೂರು ನಗರ ನಾನು ಹುಟ್ಟಿ ಬೆಳೆದ ಸ್ಥಳ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳನ್ನು ಜೊತೆಗೊಂಡಂತೆ‌ ಕೆಲಸ ಮಾಡುತ್ತೇವೆ. ಚಿಕ್ಕಂದಿನಿಂದ ನಗರ ಹಾಗೂ ಪೊಲೀಸ್ ಇಲಾಖೆಯನ್ನು ನೋಡಿದ್ದೇನೆ. ಬದಲಾವಣೆ ಪ್ರಕೃತಿ ನಿಯಮ. ಬದಲಾವಣೆ ಜೊತೆಗೆ ಐತಿಹಾಸಿಕ ವ್ಯವಸ್ಥೆಗಳನ್ನು ನೋಡುತ್ತೇವೆ. ಸಾಕಷ್ಟು ಹಿರಿಯ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಮಾಡಿರುವಂತಹ ವ್ಯವಸ್ಥೆ ಹಾಗೂ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಬದಲಾವಣೆ ಅವಶ್ಯಕತೆ ಇರುವ ಕಡೆ ಬದಲಾವಣೆ ಮಾಡಬೇಕು. ಟೆಕ್ನಾಲಜಿ ಹಾಗು ಸೈಬರ್ ಬಗ್ಗೆ ಕೆಲಸ ಆಗಬೇಕು ಎಂದು ಹೇಳಿದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು