ಲೋಕಾಯುಕ್ತದಲ್ಲಿ ಇನ್ನೂ ಸ್ವಲ್ಪ ದಿನ ಮೂರ್ನಾಲ್ಕು ಸಿಬ್ಬಂದಿಯನ್ನು ಮುಂದುವರಿಸುತ್ತೇವೆ. ಸನ್ನಡತೆ ಅಧಾರದಲ್ಲಿ 166 ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಮೂಲಸೌಕರ್ಯಕ್ಕೆ ₹ 92.81 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕರ್ನಾಟದಲ್ಲಿ ಸ್ವಾಮಿತ್ವ ಯೋಜನೆಗೆ ₹ 287 ಕೋಟಿ ಅನುದಾನ ನೀಡಲಾಗಿದೆ. ಗ್ರಾಮೀಣ ವಸತಿ ಹಕ್ಕು, ಕೃಷಿ ಭೂಮಿಯ ಹಕ್ಕುಗಳ ದಾಖಲೆಗಳನ್ನು ಹಾಗೂ ಪಟ್ಟಣ, ನಗರದ ಆಸ್ತಿಗಳ ದಾಖಲೆ ಸಿದ್ಧಪಡಿಸಲು ಸಮೀಕ್ಷೆ ನೆರವಾಗಲಿದೆ ಎಂದರು. ಕೆಟಿಪಿಪಿ ಕಾಯ್ದೆಯ ಅನ್ವಯ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋಣ್ ಮೂಲಕ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ₹ 287 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುದಾನ ಸಿಕ್ಕಿದೆ ಎಂದರು.
ಶಿವರಾಮ ಕಾರಂತ ಬಡಾವಣೆಗಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 400 ಎಕರೆ ಜಮೀನು ನಿಗದಿಪಡಿಸಲಾಗಿದೆ. ಈ ಪೈಕಿ 66.17 ಎಕರೆ ಹಸ್ತಾಂತರ ಮಾಡಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲಲ್ಲಿ ವಿಸ್ತರಿಸಲಾಗುವುದು. 32 ಗ್ರಾಮಗಳಿಗೆ ವಿಸ್ತರಿಸುವ ಈ ಯೋಜನೆಗೆ ₹22 ಕೋಟಿಯ ಅಂದಾಜು ಮೊತ್ತ ನಿಗದಿಪಡಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ವಸತಿ ಬಡಾವಣೆಗೆ ₹30.50 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಆರ್ಯಭಟ ಐಟಿ ಪಾರ್ಕ್ನಲ್ಲಿ ಬಾಕಿ ಉಳಿದ 3 ಎಕರೆ ಭೂಮಿಯನ್ನು 3 ಐಟಿ-ಬಿಟಿ ಕಂಪನಿಗಳಿಗೆ ಹಂಚಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ. 400 ಪಶುವೈದ್ಯರ ಇಲಾಖಾ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸಂಪುಟ ಸಭೆಯಲ್ಲಿ ಕೊವಿಡ್ ನಿಯಮಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಲ್ಲಿ, ಅಂದರೆ (2022-2023ರಲ್ಲಿ) 60 ಲಕ್ಷ ಮೀಟರ್ ಬಟ್ಟೆ ಖರೀದಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಒದಗಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರ ವಿಚಾರ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಉಸ್ತುವಾರಿ ಸಿಕ್ಕಿಲ್ಲ ಅಂತ ನೋವಾಗುತ್ತೆ
ನನಗೆ ಜಿಲ್ಲಾ ಉಸ್ತುವಾರಿ ಸಿಕ್ಕಿಲ್ಲ ಎಂದು ನೋವಾಗುವುದು ಸಹಜ. ಆದರೆ ಮಂತ್ರಿ ಸ್ಥಾನವೇನೂ ಹೋಗಿಲ್ಲವಲ್ಲ. ನನಗೂ ಬೇರೆ ಜಿಲ್ಲೆ ನೋಡಿಕೊಳ್ಳಿ ಎಂದರು. ಬೇರೆ ಜಿಲ್ಲೆಗೆ ಹೋಗಿ ತಳವೂರಿ ಅಲ್ಲಿಯದೆಲ್ಲ ಅರ್ಥ ಮಾಡಿಕೊಳ್ಳೋಕೆ ಒಂದು ವರ್ಷದಲ್ಲಿ ಆಗುತ್ತೆ ಅಂತ ನನಗೆ ಅನ್ನಿಸಲಿಲ್ಲ. ಹೀಗಾಗಿ ನನಗೆ ಬೇಡ ಎಂದು ಹೇಳಿದೆ. ಮುಖ್ಯಮಂತ್ರಿಯವರು ನನ್ನನ್ನು ಹಾಗೂ ಆರ್.ಅಶೋಕ ಅವರನ್ನು ದೂರ ಇಟ್ಟಿಲ್ಲ ಎಂದು ನುಡಿದರು.
ಇದನ್ನೂ ಓದಿ: ಗಣರಾಜ್ಯೋತ್ಸವ ದಿನ ಧ್ವಜಾರೋಹಣ ಕಾರ್ಯಕ್ರಮದಿಂದ ದೂರ ಉಳಿದ ಸಚಿವ ಮಾಧುಸ್ವಾಮಿ
ಇದನ್ನೂ ಓದಿ: ಸಚಿವ ಜೆಸಿ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ; ಕರ್ನಾಟಕ ಸರ್ಕಾರಕ್ಕೆ ಬೆಂಬಲಿಗರಿಂದ ಒತ್ತಾಯ