AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cabinet Meeting: 3 ನಿಗಮಗಳ ವಿಲೀನಕ್ಕೆ, 400 ಪಶುವೈದ್ಯರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ

ಅರಣ್ಯ ಅಭಿವೃದ್ಧಿ ನಿಗಮ, ಅರಣ್ಯ ಕೈಗಾರಿಕಾ ನಿಗಮ ಮತ್ತು ಗೇರು ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

Cabinet Meeting: 3 ನಿಗಮಗಳ ವಿಲೀನಕ್ಕೆ, 400 ಪಶುವೈದ್ಯರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ
ಕಾನೂನು ಸಚಿವ ಜೆಸಿ ಮಾಧುಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 27, 2022 | 5:43 PM

ಬೆಂಗಳೂರು: ಕರ್ನಾಟಕ ಸರ್ಕಾರದ (Karnataka Govt) ಸುಪರ್ದಿಯಲ್ಲಿರುವ ಮೂರು ನಿಗಮಗಳನ್ನು ವಿಲೀನಗೊಳಿಸಲು ಸಚಿವ ಸಂಪುಟ ಒಪ್ಪಿಗೆ (Karnataka Cabinet Meeting) ಸೂಚಿಸಿದೆ. ಅರಣ್ಯ ಅಭಿವೃದ್ಧಿ ನಿಗಮ, ಅರಣ್ಯ ಕೈಗಾರಿಕಾ ನಿಗಮ ಮತ್ತು ಗೇರು ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದು ಸಚಿವ ಸಂಪುಟ ಸಭೆಯ ವಿವರಗಳನ್ನು ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy) ತಿಳಿಸಿದರು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾವಿಕಾಸ ಕಾರ್ಯಕ್ರಮದ ಸಮವಸ್ತ್ರಕ್ಕೆ ₹ 73.63 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದರು.

ಲೋಕಾಯುಕ್ತದಲ್ಲಿ ಇನ್ನೂ ಸ್ವಲ್ಪ ದಿನ ಮೂರ್ನಾಲ್ಕು ಸಿಬ್ಬಂದಿಯನ್ನು ಮುಂದುವರಿಸುತ್ತೇವೆ. ಸನ್ನಡತೆ ಅಧಾರದಲ್ಲಿ 166 ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಮೂಲಸೌಕರ್ಯಕ್ಕೆ ₹ 92.81 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟದಲ್ಲಿ ಸ್ವಾಮಿತ್ವ ಯೋಜನೆಗೆ ₹ 287 ಕೋಟಿ ಅನುದಾನ ನೀಡಲಾಗಿದೆ. ಗ್ರಾಮೀಣ ವಸತಿ ಹಕ್ಕು, ಕೃಷಿ ಭೂಮಿಯ ಹಕ್ಕುಗಳ ದಾಖಲೆಗಳನ್ನು ಹಾಗೂ ಪಟ್ಟಣ, ನಗರದ ಆಸ್ತಿಗಳ ದಾಖಲೆ ಸಿದ್ಧಪಡಿಸಲು ಸಮೀಕ್ಷೆ ನೆರವಾಗಲಿದೆ ಎಂದರು. ಕೆಟಿಪಿಪಿ ಕಾಯ್ದೆಯ ಅನ್ವಯ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋಣ್ ಮೂಲಕ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ₹ 287 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುದಾನ ಸಿಕ್ಕಿದೆ ಎಂದರು.

ಶಿವರಾಮ ಕಾರಂತ ಬಡಾವಣೆಗಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 400 ಎಕರೆ ಜಮೀನು ನಿಗದಿಪಡಿಸಲಾಗಿದೆ. ಈ ಪೈಕಿ 66.17 ಎಕರೆ ಹಸ್ತಾಂತರ ಮಾಡಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲಲ್ಲಿ ವಿಸ್ತರಿಸಲಾಗುವುದು. 32 ಗ್ರಾಮಗಳಿಗೆ ವಿಸ್ತರಿಸುವ ಈ ಯೋಜನೆಗೆ ₹22 ಕೋಟಿಯ ಅಂದಾಜು ಮೊತ್ತ ನಿಗದಿಪಡಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ವಸತಿ ಬಡಾವಣೆಗೆ ₹30.50 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಆರ್ಯಭಟ ಐಟಿ ಪಾರ್ಕ್​​ನಲ್ಲಿ ಬಾಕಿ ಉಳಿದ 3 ಎಕರೆ ಭೂಮಿಯನ್ನು 3 ಐಟಿ-ಬಿಟಿ ಕಂಪನಿಗಳಿಗೆ ಹಂಚಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ. 400 ಪಶುವೈದ್ಯರ ಇಲಾಖಾ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸಂಪುಟ ಸಭೆಯಲ್ಲಿ ಕೊವಿಡ್ ನಿಯಮಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ, ಅಂದರೆ (2022-2023ರಲ್ಲಿ) 60 ಲಕ್ಷ ಮೀಟರ್ ಬಟ್ಟೆ ಖರೀದಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಒದಗಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರ ವಿಚಾರ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಉಸ್ತುವಾರಿ ಸಿಕ್ಕಿಲ್ಲ ಅಂತ ನೋವಾಗುತ್ತೆ ನನಗೆ ಜಿಲ್ಲಾ ಉಸ್ತುವಾರಿ ಸಿಕ್ಕಿಲ್ಲ ಎಂದು ನೋವಾಗುವುದು ಸಹಜ. ಆದರೆ ಮಂತ್ರಿ ಸ್ಥಾನವೇನೂ ಹೋಗಿಲ್ಲವಲ್ಲ. ನನಗೂ ಬೇರೆ ಜಿಲ್ಲೆ ನೋಡಿಕೊಳ್ಳಿ ಎಂದರು. ಬೇರೆ ಜಿಲ್ಲೆಗೆ ಹೋಗಿ ತಳವೂರಿ ಅಲ್ಲಿಯದೆಲ್ಲ ಅರ್ಥ ಮಾಡಿಕೊಳ್ಳೋಕೆ ಒಂದು ವರ್ಷದಲ್ಲಿ ಆಗುತ್ತೆ ಅಂತ ನನಗೆ ಅನ್ನಿಸಲಿಲ್ಲ. ಹೀಗಾಗಿ ನನಗೆ ಬೇಡ ಎಂದು ಹೇಳಿದೆ. ಮುಖ್ಯಮಂತ್ರಿಯವರು ನನ್ನನ್ನು ಹಾಗೂ ಆರ್.ಅಶೋಕ ಅವರನ್ನು ದೂರ ಇಟ್ಟಿಲ್ಲ ಎಂದು ನುಡಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ ದಿನ ಧ್ವಜಾರೋಹಣ ಕಾರ್ಯಕ್ರಮದಿಂದ ದೂರ ಉಳಿದ ಸಚಿವ ಮಾಧುಸ್ವಾಮಿ ಇದನ್ನೂ ಓದಿ: ಸಚಿವ ಜೆಸಿ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ; ಕರ್ನಾಟಕ ಸರ್ಕಾರಕ್ಕೆ ಬೆಂಬಲಿಗರಿಂದ ಒತ್ತಾಯ

Published On - 5:43 pm, Thu, 27 January 22

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ