ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ

ಕರ್ನಾಟಕ ಸರ್ಕಾರವು ಬೈಕ್ ಟ್ಯಾಕ್ಸಿಗಳ ಪರವಾನಗಿ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸಲು ಸರ್ಕಾರದ ನಿರಾಕರಣೆ ಮತ್ತು ಹೈಕೋರ್ಟ್‌ನ ಪರವಾನಗಿ ನೀಡುವ ನಿರ್ದೇಶನದ ನಡುವೆ ಕಾನೂನು ಹೋರಾಟ ತೀವ್ರಗೊಂಡಿದೆ. ಸಾರಿಗೆ ಇಲಾಖೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಸ್ಪಷ್ಟತೆಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿದೆ.

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ
ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ! ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ
Image Credit source: ANI
Edited By:

Updated on: Apr 19, 2026 | 12:24 PM

ಬೆಂಗಳೂರು, ಏಪ್ರಿಲ್ 19: ಬೈಕ್ ಟ್ಯಾಕ್ಸಿ (Bike Taxi) ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮತ್ತೊಂದು ಹಂತಕ್ಕೆ ತಲುಪಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಲು ಸಿದ್ಧವಾಗಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ನಿಯಮಾವಳಿ ರೂಪಿಸುವ ಉದ್ದೇಶ ಇಲ್ಲವೆಂದು ತಿಳಿಸಿರುವ ಸರ್ಕಾರ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಮುಂದಾಗಿದೆ.

ಏಪ್ರಿಲ್ 23ರೊಳಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ

ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿಗಳನ್ನು ಅನಧಿಕೃತವೆಂದು ಘೋಷಿಸಿ ರಾಜ್ಯದಲ್ಲಿ ನಿಷೇಧಿಸಿತ್ತು. ಆದರೆ ಈ ವರ್ಷದ ಜನವರಿ 23ರಂದು ದ್ವಿಸದಸ್ಯ ಪೀಠವು ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಯೆಲ್ಲೋ ಬೋರ್ಡ್ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಲು ಸೂಚಿಸಿತ್ತು. ಈ ತೀರ್ಪು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿರುವುದರಿಂದ, ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಈ ನಡುವೆ, ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ಟಿವಿ9ಗೆ ಪ್ರತಿಕ್ರಿಯೆ ನೀಡಿ, ಬೈಕ್ ಟ್ಯಾಕ್ಸಿಯ ವಿಷಯದಲ್ಲಿ ಸರ್ಕಾರದ ನಿಲುವು ಸರಿಯಾದದ್ದೇ ಆಗಿದ್ದು, ಕಾನೂನು ಸ್ಪಷ್ಟತೆ ಅಗತ್ಯವಾಗಿದೆ. ಸಾರಿಗೆ ಇಲಾಖೆ ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಏಪ್ರಿಲ್ 23ರೊಳಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Sun, 19 April 26

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us