AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ

ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ
ಕೊವಿಡ್​ 19 ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 28, 2021 | 6:38 PM

Share

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ತೆರೆದ ವೈಯಲ್ ಬಳಸುವುದರಿಂದ ಲಸಿಕೆಗಳ ಪರಿಣಾಮ ಕಡಿಮೆಯಾಗಬಹುದು ಎಂಬ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಒಮ್ಮೆ ತೆರೆದ ಲಸಿಕೆಯ ವಯಲ್​ (ಬಾಟಲಿ) ಮರುಬಳಕೆ ಮಾಡಬಾರದು. ಬಾಟಲಿ ತೆರೆದ 4 ಗಂಟೆಯೊಳಗೆ ಬಳಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ ಹೊರಡಿಸಿದೆ. ಒಮ್ಮೆ ತೆರೆದ ಬಾಟಲಿಯನ್ನು 4 ಗಂಟೆ ಬಳಿಕ ಬಳಸದಂತೆ ನಿರ್ದೇಶನ ನೀಡಲಾಗಿದೆ. ತೆರೆದ ಲಸಿಕಾ ಬಾಟಲಿಗಳನ್ನು ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಒಮ್ಮೆ ತೆರೆದ ಲಸಿಕೆಯ ವಯಲ್​ಗಳನ್ನು ಮತ್ತೆ ಬಳಸಬಾರದು ಲಸಿಕೆಯ ಬಾಟಲಿ ತೆರೆದಿದ್ದರೆ ಅದರ ಗುಣಮಟ್ಟ ಖಚಿತಪಡಿಸಿಕೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಈ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಕೋವಾಕ್ಸಿನ್ ಲಸಿಕೆಗೆ ಓಪನ್-ವೈಯಲ್ ನೀತಿಯನ್ನು ಅನುಮತಿಸಲು ಆಗುವುದಿಲ್ಲ ಕೇಂದ್ರ ಸರ್ಕಾರವು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡಿತ್ತು. ಅದರಂತೆ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ನಿರ್ಬಂಧ ವಿಧಿಸಲಾಗಿದೆ.

ಈ ಹಿಂದೆ ಕೋವಾಕ್ಸಿನ್ ತಯಾರಕ ಭಾರತ್ ಬಯೋಟೆಕ್ ಒಪನ್ ಬಾಟಲ್ ಸ್ಥಿರತೆ ಹಾಗು ಬಳಕೆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿತ್ತು. ಈ ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಒಮ್ಮೆ ತೆರೆದ ಕೋವಾಕ್ಸಿನ್ ಬಾಟಲಿಗಳನ್ನು 2ರಿಂದ 8 ಡಿಗ್ರಿ ಉಷ್ಣಾಂಶದಲ್ಲಿ ಸಂಗ್ರಹಿಸಿದರೆ 28 ದಿನಗಳವರೆಗೆ ಬಳಸಬಹುದು ಎಂಬ ಮಾಹಿತಿ ಇತ್ತು. ಒಂದು ವೇಳೆ ಬಾಟಲಿಯಲ್ಲಿ ಲಸಿಕೆಯು ಉಳಿದರೆ ತಕ್ಷಣ ಅಥವಾ ಪ್ರತಿರಕ್ಷಣೆ ಅವಧಿಯ ಕೊನೆಯಲ್ಲಿ ತಿರಸ್ಕರಿಸಬೇಕಾಗಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿತ್ತು.

ಭಾರತ್ ಬಯೊಟೆಕ್ ನೀಡಿದ್ದ ಮಾರ್ಗದರ್ಶಿ ಸೂತ್ರದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟನೆ ಕೇಳಿತ್ತು. ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ ಇದನ್ನೂ ಓದಿ: Good News: ಭಾರತದಲ್ಲಿ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ಲಸಿಕೆ, ​ಮೊಲ್ನುಪಿರವಿರ್ ಔಷಧ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ