AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ

ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ
ಕೊವಿಡ್​ 19 ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 28, 2021 | 6:38 PM

Share

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ತೆರೆದ ವೈಯಲ್ ಬಳಸುವುದರಿಂದ ಲಸಿಕೆಗಳ ಪರಿಣಾಮ ಕಡಿಮೆಯಾಗಬಹುದು ಎಂಬ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಒಮ್ಮೆ ತೆರೆದ ಲಸಿಕೆಯ ವಯಲ್​ (ಬಾಟಲಿ) ಮರುಬಳಕೆ ಮಾಡಬಾರದು. ಬಾಟಲಿ ತೆರೆದ 4 ಗಂಟೆಯೊಳಗೆ ಬಳಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ ಹೊರಡಿಸಿದೆ. ಒಮ್ಮೆ ತೆರೆದ ಬಾಟಲಿಯನ್ನು 4 ಗಂಟೆ ಬಳಿಕ ಬಳಸದಂತೆ ನಿರ್ದೇಶನ ನೀಡಲಾಗಿದೆ. ತೆರೆದ ಲಸಿಕಾ ಬಾಟಲಿಗಳನ್ನು ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಒಮ್ಮೆ ತೆರೆದ ಲಸಿಕೆಯ ವಯಲ್​ಗಳನ್ನು ಮತ್ತೆ ಬಳಸಬಾರದು ಲಸಿಕೆಯ ಬಾಟಲಿ ತೆರೆದಿದ್ದರೆ ಅದರ ಗುಣಮಟ್ಟ ಖಚಿತಪಡಿಸಿಕೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಈ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಕೋವಾಕ್ಸಿನ್ ಲಸಿಕೆಗೆ ಓಪನ್-ವೈಯಲ್ ನೀತಿಯನ್ನು ಅನುಮತಿಸಲು ಆಗುವುದಿಲ್ಲ ಕೇಂದ್ರ ಸರ್ಕಾರವು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡಿತ್ತು. ಅದರಂತೆ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ನಿರ್ಬಂಧ ವಿಧಿಸಲಾಗಿದೆ.

ಈ ಹಿಂದೆ ಕೋವಾಕ್ಸಿನ್ ತಯಾರಕ ಭಾರತ್ ಬಯೋಟೆಕ್ ಒಪನ್ ಬಾಟಲ್ ಸ್ಥಿರತೆ ಹಾಗು ಬಳಕೆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿತ್ತು. ಈ ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಒಮ್ಮೆ ತೆರೆದ ಕೋವಾಕ್ಸಿನ್ ಬಾಟಲಿಗಳನ್ನು 2ರಿಂದ 8 ಡಿಗ್ರಿ ಉಷ್ಣಾಂಶದಲ್ಲಿ ಸಂಗ್ರಹಿಸಿದರೆ 28 ದಿನಗಳವರೆಗೆ ಬಳಸಬಹುದು ಎಂಬ ಮಾಹಿತಿ ಇತ್ತು. ಒಂದು ವೇಳೆ ಬಾಟಲಿಯಲ್ಲಿ ಲಸಿಕೆಯು ಉಳಿದರೆ ತಕ್ಷಣ ಅಥವಾ ಪ್ರತಿರಕ್ಷಣೆ ಅವಧಿಯ ಕೊನೆಯಲ್ಲಿ ತಿರಸ್ಕರಿಸಬೇಕಾಗಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿತ್ತು.

ಭಾರತ್ ಬಯೊಟೆಕ್ ನೀಡಿದ್ದ ಮಾರ್ಗದರ್ಶಿ ಸೂತ್ರದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟನೆ ಕೇಳಿತ್ತು. ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ ಇದನ್ನೂ ಓದಿ: Good News: ಭಾರತದಲ್ಲಿ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ಲಸಿಕೆ, ​ಮೊಲ್ನುಪಿರವಿರ್ ಔಷಧ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ