AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ

ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಲಸಿಕೆ ಸುರಕ್ಷೆಗೆ ಅಗತ್ಯ ಕ್ರಮವಹಿಸಲು ಖಾಸಗಿ ಆಸ್ಪತ್ರೆಗಳಿಗೆ ಕರ್ನಾಟಕ ಸರ್ಕಾರ ಸೂಚನೆ
ಕೊವಿಡ್​ 19 ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 28, 2021 | 6:38 PM

Share

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ತೆರೆದ ವೈಯಲ್ ಬಳಸುವುದರಿಂದ ಲಸಿಕೆಗಳ ಪರಿಣಾಮ ಕಡಿಮೆಯಾಗಬಹುದು ಎಂಬ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಒಮ್ಮೆ ತೆರೆದ ಲಸಿಕೆಯ ವಯಲ್​ (ಬಾಟಲಿ) ಮರುಬಳಕೆ ಮಾಡಬಾರದು. ಬಾಟಲಿ ತೆರೆದ 4 ಗಂಟೆಯೊಳಗೆ ಬಳಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ ಹೊರಡಿಸಿದೆ. ಒಮ್ಮೆ ತೆರೆದ ಬಾಟಲಿಯನ್ನು 4 ಗಂಟೆ ಬಳಿಕ ಬಳಸದಂತೆ ನಿರ್ದೇಶನ ನೀಡಲಾಗಿದೆ. ತೆರೆದ ಲಸಿಕಾ ಬಾಟಲಿಗಳನ್ನು ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಒಮ್ಮೆ ತೆರೆದ ಲಸಿಕೆಯ ವಯಲ್​ಗಳನ್ನು ಮತ್ತೆ ಬಳಸಬಾರದು ಲಸಿಕೆಯ ಬಾಟಲಿ ತೆರೆದಿದ್ದರೆ ಅದರ ಗುಣಮಟ್ಟ ಖಚಿತಪಡಿಸಿಕೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಈ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಕೋವಾಕ್ಸಿನ್ ಲಸಿಕೆಗೆ ಓಪನ್-ವೈಯಲ್ ನೀತಿಯನ್ನು ಅನುಮತಿಸಲು ಆಗುವುದಿಲ್ಲ ಕೇಂದ್ರ ಸರ್ಕಾರವು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡಿತ್ತು. ಅದರಂತೆ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ನಿರ್ಬಂಧ ವಿಧಿಸಲಾಗಿದೆ.

ಈ ಹಿಂದೆ ಕೋವಾಕ್ಸಿನ್ ತಯಾರಕ ಭಾರತ್ ಬಯೋಟೆಕ್ ಒಪನ್ ಬಾಟಲ್ ಸ್ಥಿರತೆ ಹಾಗು ಬಳಕೆ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿತ್ತು. ಈ ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಒಮ್ಮೆ ತೆರೆದ ಕೋವಾಕ್ಸಿನ್ ಬಾಟಲಿಗಳನ್ನು 2ರಿಂದ 8 ಡಿಗ್ರಿ ಉಷ್ಣಾಂಶದಲ್ಲಿ ಸಂಗ್ರಹಿಸಿದರೆ 28 ದಿನಗಳವರೆಗೆ ಬಳಸಬಹುದು ಎಂಬ ಮಾಹಿತಿ ಇತ್ತು. ಒಂದು ವೇಳೆ ಬಾಟಲಿಯಲ್ಲಿ ಲಸಿಕೆಯು ಉಳಿದರೆ ತಕ್ಷಣ ಅಥವಾ ಪ್ರತಿರಕ್ಷಣೆ ಅವಧಿಯ ಕೊನೆಯಲ್ಲಿ ತಿರಸ್ಕರಿಸಬೇಕಾಗಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿತ್ತು.

ಭಾರತ್ ಬಯೊಟೆಕ್ ನೀಡಿದ್ದ ಮಾರ್ಗದರ್ಶಿ ಸೂತ್ರದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟನೆ ಕೇಳಿತ್ತು. ಲಸಿಕೆಯ ಸೀಸೆಯು ನಿಗಾವಣೆ ಇರದಿದ್ದರೆ ಗುಣಮಟ್ಟದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಬಾಟಲಿ ನೀತಿ ಅನುಸರಿಸದಂತೆ ಖಾಸಗಿ ಆಸ್ಪತ್ರೆಗಳಗೆ ರಾಜ್ಯ ಸರ್ಕಾರವು ಸುತ್ತೋಲೆಯಲ್ಲಿ ಸೂಚಿಸಿದೆ.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ ಇದನ್ನೂ ಓದಿ: Good News: ಭಾರತದಲ್ಲಿ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ಲಸಿಕೆ, ​ಮೊಲ್ನುಪಿರವಿರ್ ಔಷಧ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?