AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಚಿವ ಸಂಪುಟ ಉಪಸಮಿತಿ; ಆರ್ ಅಶೋಕ್ ಅಧ್ಯಕ್ಷತೆ

ಸರ್ಕಾರಿ ಸ್ವಾಮ್ಯದ ಗೋಮಾಳ, ಗಾಯರಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ನೀತಿಯನ್ನು ರೂಪಿಸಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಚಿವ ಸಂಪುಟ ಉಪಸಮಿತಿ; ಆರ್ ಅಶೋಕ್ ಅಧ್ಯಕ್ಷತೆ
ಆರ್. ಆಶೋಕ
TV9 Web
| Edited By: |

Updated on:Jan 29, 2022 | 8:59 PM

Share

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿಯನ್ನ ರಚಿಸಿ ಸರ್ಕಾರ ಆದೇಶ ನೀಡಿದೆ. ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಉಪ ಸಮಿತಿ ರಚನೆ ಮಾಡಲಾಗಿದೆ. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ, ಸಚಿವ ಪ್ರಭು ಚೌಹಾಣ್ ನೇಮಕ ಮಾಡಲಾಗಿದೆ.

ಸರ್ಕಾರಿ ಸ್ವಾಮ್ಯದ ಗೋಮಾಳ, ಗಾಯರಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ನೀತಿಯನ್ನು ರೂಪಿಸಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಗೋವುಗಳನ್ನು ದತ್ತು ಪಡೆಯಲು ಪ್ರಭು ಚೌಹಾಣ್ ಮನವಿ

ಗೋವುಗಳನ್ನು ದತ್ತು ಪಡೆಯುವಂತೆ ಸಚಿವರು, ಸಂಸದರು, ಶಾಸಕರಿಗೆ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಗೋವುಗಳನ್ನು ಸಂರಕ್ಷಿಸಲು ಸಚಿವರು, ಜನಪ್ರತಿನಿಧಿಗಳು, ಚಿತ್ರರಂಗದ ಕಲಾವಿದರು, ಉದ್ಯಮಿಗಳು, ಸಂಘ-ಸಂಸ್ಥೆಗಳು ಗೋವುಗಳನ್ನು ದತ್ತು ಪಡೆದು ಪೋಷಣೆಗೆ ಮುಂದಾಗಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ (Prabhu Chauhan) ಮನವಿ ಮಾಡಿದ್ದಾರೆ. ಈಗಾಗಲೇ ಗೋವುಗಳನ್ನು ದತ್ತು ಪಡೆಯುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನದಲ್ಲಿ ಗೋ ಮಾತೆಯನ್ನು ರಕ್ಷಿಸಲು ಗೋ ಪ್ರೇಮಿಗಳಾದ ಎಲ್ಲರೂ ಗೋವುಗಳನ್ನು ದತ್ತು ಪಡೆದು, ಹಸುಗಳ ಪೋಷಣೆ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಭು ಚೌಹಾಣ್ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಿನ್ನೆ ತಮ್ಮ ಜನ್ಮದಿನದ ಅಂಗವಾಗಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಗೋವುಗಳನ್ನು ದತ್ತು ಪಡೆಯುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಗೋ ಸಂತತಿಯ ರಕ್ಷಣೆಗೆ ಕರೆ ನೀಡಿದ್ದಾರೆ. ಈ ಆದರ್ಶವನ್ನು ಎಲ್ಲ ಸಂಸದರು, ಶಾಸಕರು, ವಿವಿಧ ವಲಯಗಳ ಗಣ್ಯರು, ಉದ್ಯಮಿಗಳು ಪಾಲಿಸುವ ಮೂಲಕ ಗೋ ಸಂರಕ್ಷಣೆಗೆ ಮುಂದಾಗುವಂತೆ ಅವರು ಕರೆ ನೀಡಿದ್ದಾರೆ.

ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚೌಹಾಣ್ ಮನವಿ

ಇದನ್ನೂ ಓದಿ: ಗೋ ಶಾಲಾ ಆಧರಿತ ಆರ್ಥಿಕತೆ ಅಭಿವೃದ್ದಿಗೆ ಪ್ಲ್ಯಾನ್; ಭಾರತದ ಗೋ ಶಾಲೆಗಳ ಸ್ಥಿತಿಗತಿ ಪರಿಶೀಲನೆ

Published On - 8:55 pm, Sat, 29 January 22

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!