AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್​ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ಇಂದು(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನೊಳಗೊಂಡ ಒಂದು ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಲಾಗಿದೆ.

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ
ಸಿದ್ದರಾಮಯ್ಯ
ವಿನಯ್​ ಕಾಶಪ್ಪನವರ್​
| Edited By: |

Updated on: Sep 18, 2024 | 9:23 PM

Share

ಬೆಂಗಳೂರು, (ಸೆಪ್ಟೆಂಬರ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್​ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಡ್ರಗ್ಸ್​​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಮಿತಿ ಸದಸ್ಯರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ರಾಜ್ಯ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನು ಈ ಡ್ರಗ್ಸ್​​ಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಅವರು ಇಂದು (ಸೆಪ್ಟೆಂಬರ್ 18) ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಸಿಎಂ, ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!