AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್​ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ಇಂದು(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನೊಳಗೊಂಡ ಒಂದು ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಲಾಗಿದೆ.

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ
ಸಿದ್ದರಾಮಯ್ಯ
Vinay Kashappanavar
| Edited By: |

Updated on: Sep 18, 2024 | 9:23 PM

Share

ಬೆಂಗಳೂರು, (ಸೆಪ್ಟೆಂಬರ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್​ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಡ್ರಗ್ಸ್​​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಮಿತಿ ಸದಸ್ಯರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ರಾಜ್ಯ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನು ಈ ಡ್ರಗ್ಸ್​​ಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಅವರು ಇಂದು (ಸೆಪ್ಟೆಂಬರ್ 18) ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಸಿಎಂ, ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!