AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS, KAS ಸೇರಿದಂತೆ ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದು ಪ್ರಸ್ತುತ, ನೂರಾರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ಸೊಸೈಟಿಗಳು, ಟ್ರಸ್ಟ್‌ಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಐಎಎಸ್‌, ಐಪಿಎಸ್‌, ಐಎಫ್‌ ಎಸ್‌, ಕೆಎಎಸ್‌, ಭಾಷಾ ಕೋಚಿಂಗ್‌ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್‌ ನೀಡುವ ಸಂಸ್ಥೆಗಳು ಕಾಲೇಜು ಶಿಕ್ಷಣ ಇಲಾಖೆಗೆ 25 ಸಾವಿರ ರೂ. ಶುಲ್ಕ ಕಟ್ಟಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

IAS, KAS ಸೇರಿದಂತೆ ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jan 16, 2024 | 10:56 AM

ಬೆಂಗಳೂರು, ಜ.16: ರಾಜ್ಯ ಸರ್ಕಾರವು ಐಎಎಸ್ ಮತ್ತು ಕೆಎಎಸ್ ತರಬೇತಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್‌ಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್‌ ಸೆಂಟರ್​ಗಳ ನೋಂದಣಿ ಕಡ್ಡಾಯ. ರಾಜ್ಯದಲ್ಲಿ ಎಗ್ಗಿಲ್ಲದೇ ಕೋಚಿಂಗ್‌ ಸೆಂಟರ್​ಗಳು ತಲೆಯೆತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತೇವೆ ಎಂದು ಅಭ್ಯರ್ಥಿಗಳಿಂದ ಹಣ ಪಡೆಯುತ್ತಿವೆ. ಹೀಗಾಗಿ ಕೋಚಿಂಗ್‌ ಸೆಂಟರ್​ಗಳು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸುತ್ತೋಲೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಸಂಸ್ಥೆಗಳು 15 ದಿನಗಳಲ್ಲಿ 25,000 ರೂಪಾಯಿ ಶುಲ್ಕವನ್ನು ಪಾವತಿಸಿ ನೋಂದಾಯಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆದು ಪ್ರಸ್ತುತ, ನೂರಾರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು, ಸೊಸೈಟಿಗಳು, ಟ್ರಸ್ಟ್‌ಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಐಎಎಸ್‌, ಐಪಿಎಸ್‌, ಐಎಫ್‌ ಎಸ್‌, ಕೆಎಎಸ್‌, ಭಾಷಾ ಕೋಚಿಂಗ್‌ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್‌ ನೀಡುವ ಸಂಸ್ಥೆಗಳು ಕಾಲೇಜು ಶಿಕ್ಷಣ ಇಲಾಖೆಗೆ 25 ಸಾವಿರ ರೂ. ಶುಲ್ಕ ಕಟ್ಟಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

ಇನ್ನು ಕೋಚಿಂಗ್ ಸೆಂಟರ್‌ಗಳು ನಾಯಿಕೊಡೆಗಳಂತೆ ಹರಡುತ್ತಿರುವುದನ್ನು ಪರಿಶೀಲಿಸಲು ಸರ್ಕಾರ ಬಯಸಿದೆ. ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು 2006ರಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗಿತ್ತು. ಆದರೆ ಅದು ಜಾರಿಯಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಅತಿ ಎತ್ತರದ ನಂದಿ ವಿಗ್ರಹಗಳು ಎಲ್ಲೆಲ್ಲಿವೆ ಗೊತ್ತಾ?

ಕೋಚಿಂಗ್ ಸೆಂಟರ್​ಗಳಿಗೆ ಭೇಟಿ ನೀಡಿ ಪರಿಶೀಲನೆ

ರಾಜ್ಯಾದ್ಯಂತ ಕೋಚಿಂಗ್ ಸೆಂಟರ್​ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಇಲಾಖೆ ಯೋಜಿಸುತ್ತಿದೆ. ತರಬೇತಿ ಗುಣಮಟ್ಟ ಕಾಳಜಿಯ ವಿಷಯವಾಗಿದೆ. ಕೆಲವು ಸಂಸ್ಥೆಗಳು ವಿದ್ಯಾರ್ಥಿಗಳಿಂದ ಹಣ ಪಡೆದು ಕುಡಿಯುವ ನೀರು, ಶೌಚಾಲಯದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವ ಬಗ್ಗೆ ವರದಿಗಳಾಗಿವೆ. ಸರ್ಕಾರ ನೀಡಿರುವ ನೋಂದಣಿ ಗಡುವು ಮುಗಿದ ನಂತರ, ಅಂತಹ ಕೇಂದ್ರಗಳಿಗೆ ಭೇಟಿ ನೀಡಲು ಮತ್ತು ಅವು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸಲು ಇಲಾಖೆಯು ತಂಡವನ್ನು ರಚಿಸುತ್ತಿದೆ ಎಂದು ಅಧಿಕಾರಿ ಹೇಳಿದರು.

ಕೋಚಿಂಗ್ ಸೆಂಟರ್​ಗಳು ಪೂರೈಸಬೇಕಾದ ಷರತ್ತುಗಳನ್ನು ಇಲಾಖೆ ಪಟ್ಟಿ ಮಾಡಿದೆ. ಅವುಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ, ಕುಡಿಯುವ ನೀರು, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳು, ಸುಸಜ್ಜಿತ ಗ್ರಂಥಾಲಯ, ವಿಶಾಲವಾದ ತರಗತಿ ಕೊಠಡಿಗಳು, ಫ್ಯಾನ್ ಮತ್ತು ಜಿಎಸ್‌ಟಿ ಸಂಖ್ಯೆ, ಅರ್ಹ ಬೋಧಕ ಸಿಬ್ಬಂದಿ, ವಿಕಲಚೇತನರಿಗೆ ಸೌಲಭ್ಯಗಳು, ಆದಾಯ ತೆರಿಗೆ ರಿಟರ್ನ್ಸ್ ವಿವರಗಳು ಇತ್ಯಾದಿ.

ಐಎಎಸ್ ಮತ್ತು ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಪೂರ್ವ ವಿಶ್ವವಿದ್ಯಾಲಯದ ನಂತರ ನೀಡಲಾಗುವುದರಿಂದ, ಸಂಸ್ಥೆಗಳು ಕಾಲೇಜು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು. CET ಮತ್ತು NEET ನಂತಹ ಪ್ರವೇಶ ಪರೀಕ್ಷೆಗಳನ್ನು ಒಳಗೊಂಡ ಕೋಚಿಂಗ್ ಸೆಂಟರ್‌ಗಳು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಆದರೆ, ಹೆಚ್ಚಿನವರು ನೋಂದಣಿ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೃಷಿಕ್ ಸರ್ವೋದಯ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ವೈ ಕೆ ಪುಟ್ಟಸೋಮೇಗೌಡ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ