AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಸರ್ಕಾರ ಆದೇಶ; ಸದ್ಯಕ್ಕಿಲ್ಲ ಅರ್ಜಿ ಸಲ್ಲಿಕೆ

ಶೀಘ್ರದಲ್ಲೇ ಹೊಸ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆಎಚ್​ ಮುನಿಯಪ್ಪ ಅವರು ಹೇಳಿದ್ದರು. ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶಿಸಲಾಗಿದ್ದು, ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ. ‌

ಬೆಂಗಳೂರು: ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಸರ್ಕಾರ ಆದೇಶ; ಸದ್ಯಕ್ಕಿಲ್ಲ ಅರ್ಜಿ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ
Poornima Agali Nagaraj
Poornima Agali Nagaraj| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 10, 2023 | 6:27 PM

Share

ಬೆಂಗಳೂರು, ಆ.10: ಕಳೆದ ಎರಡು ದಿನಗಳ‌ ಹಿಂದೆಯಷ್ಟೇ ಹೊಸ ರೇಷನ್​ ಕಾರ್ಡ್(Ration Card)​ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವುದಾಗಿ ಆಹಾರ ಇಲಾಖೆ ಸಚಿವ ಕೆಎಚ್​ ಮುನಿಯಪ್ಪ(KH Muniyappa) ಹೇಳಿದ್ದರು. ಇದೀಗ ಉಲ್ಟಾ ಹೊಡೆದಿರುವ ಸಚಿವರು ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಆದೇಶ ಹೊರಡಿಸಿದ್ದಾರೆ. ಹೌದು, ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶಿಸಲಾಗಿದ್ದು, ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ. ‌

ಶೀಘ್ರದಲ್ಲೇ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದಿದ್ದ ಆಹಾರ ಸಚಿವ ಕೆಎಚ್​ ಮುನಿಯಪ್ಪ

ಹೌದು, ಆಗಸ್ಟ್​ 7ರಂದು ಟಿವಿ9ಗೆ ಪ್ರತಿಕ್ರಿಯಿಸಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆಎಚ್​ ಮುನಿಯಪ್ಪ ಅವರು ‘ಶೀಘ್ರದಲ್ಲೇ ಕರ್ನಾಟಕದಲ್ಲಿ ಬಿಪಿಎಲ್ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಹೇಳಿದ್ದರು. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದಗಿನಿಂದ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸ್ವೀಕರಿಸುವುದನ್ನು ಆಹಾರ ಇಲಾಖೆ ಸ್ಥಗಿತಗೊಳಿಸಿತ್ತು. ಇದಾದ ಬಳಿಕ ಸದ್ಯದಲ್ಲೇ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದಿದ್ದರು. ಇದೀಗ ಉಲ್ಟಾ ಹೊಡೆದಿರುವ ಸಚಿವರು, ಸಧ್ಯ ಹೊಸ ರೇಷನ್​ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದಿದ್ದಾರೆ.

ಇದನ್ನೂ ಓದಿ:ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?

ಇನ್ನು ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕೆಂದು, ಅದರಂತೆ ಈ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆಗೆ ಹಣ ಜಮೆಯಾಗುತ್ತಿದೆ. ಈವರೆಗೆ ಒಂದು ಕೋಟಿ ಕುಟುಂಬಕ್ಕೆ ಇಲಾಖೆಯಿಂದ ಸುಮಾರು 556 ಕೋಟಿ ಹಣ ಹಾಕಲಾಗಿದೆ. ರಾಗಿ, ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿದ್ದೇವೆಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ತಿಳಿಸಿದ್ದರು.

ಜೊತೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನೀಡಲು ಮುಂದಾಗಿದ್ದು, 34 ರೂಪಾಯಿ ದರದಲ್ಲಿ ನೀಡಿದರೆ, ಅಕ್ಕಿ ಖರೀದಿ ಮಾಡಲು ಸಿದ್ಧವಿದ್ದೇವೆ. ಈ ಕುರಿತಾಗಿ ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. ಜೊತೆಗೆ ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದ್ದು, ಸೆಪ್ಟೆಂಬರ್​ ತಿಂಗಳಿನಲ್ಲಿ 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎನ್ನುವ ಭರವಸೆಯ ಮಾತುಗಳನ್ನಾಡಿದ್ದರು. ಇದೀಗ ಹೊಸ ಕಾರ್ಡ್​ಗೆ ಅಪ್ಲಿಕೇಶನ್​ ಹಾಕಲು ಉತ್ಸುಕರಾಗಿದ್ದವರಿಗೆ ಸರ್ಕಾರ ಶಾಕ್​ ನೀಡಿದೆ. ಮುಂದಿನ ಆದೇಶದವರೆಗೂ ಹೊಸ ಕಾರ್ಡ್ ಅಪ್ಲಿಕೇಶನ್​ಗೆ ಅವಕಾಶವಿಲ್ಲವೆಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Thu, 10 August 23

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!