AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ತ್ ಎಮರ್ಜೆನ್ಸಿಗೆ ಸರ್ಕಾರದಿಂದ ಏರ್ ಆಂಬ್ಯುಲೆನ್ಸ್​​: ವಿಕ್ಟೋರಿಯಾದಲ್ಲಿ ಹೆಲಿಪ್ಯಾಡ್

ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆ ಸಮಸ್ಯೆಯಿಂದ ಆಂಬ್ಯುಲೆನ್ಸ್​​ನಲ್ಲಿ ಅದೆಷ್ಟೋ ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದಡೆ ಅಂಗಾಂಗ ದಾನದ ಸಂದರ್ಭದಲ್ಲಿ ಅಂಗಾಂಗವನ್ನು ಈ ಟ್ರಾಫಿಕ್‌ನಲ್ಲಿ ಸಾಗಿಸುವುದು ದೊಡ್ಡ ಸವಾಲಾಗಿದೆ ಹೀಗಾಗಿ ಸರ್ಕಾರ ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ತುರ್ತು ಆರೋಗ್ಯ ಸೇವೆ ನೀಡಲು ಹೊಸ ಪ್ಲ್ಯಾನ್ ಮಾಡಿದೆ.

ಹೆಲ್ತ್ ಎಮರ್ಜೆನ್ಸಿಗೆ ಸರ್ಕಾರದಿಂದ ಏರ್ ಆಂಬ್ಯುಲೆನ್ಸ್​​: ವಿಕ್ಟೋರಿಯಾದಲ್ಲಿ ಹೆಲಿಪ್ಯಾಡ್
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Dec 11, 2024 | 10:50 PM

ಬೆಂಗಳೂರು, (ಡಿಸೆಂಬರ್ 11): ಬೆಂಗಳೂರಿನಲ್ಲಿ ಆಕ್ಸಿಡೆಂಟ್‌ನಂತಹ ತುರ್ತು ಪರಿಸ್ಥಿತಿಯಲ್ಲಿ ಹಾಗೂ ಅಂಗಾಂಗ ದಾನದ ಸಂದರ್ಭದಲ್ಲಿ ಅಂಗಾಂಗಳನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವುದು ದೊಡ್ಡ ಸವಾಲಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯಲ್ಲಿ ಬೈಕ್ ಆಂಬ್ಯುಲೆನ್ಸ್​​ ಕೂಡ ಪರಿಚಯಿಸಿತ್ತು. ಆದ್ರೆ ಇದು ದೊಡ್ಡ ಮಟ್ಟದ ಉಪಯೋಗವಾಗದೇ ಯೋಜನೆ ಹಳ್ಳ ಹಿಡಿಯಿತು. ಈಗ ರಾಜ್ಯ ಸರ್ಕಾರ ಹೆಲ್ತ್ ಎಮರ್ಜೆನ್ಸಿಗೆ ಏರ್ ಆಂಬ್ಯುಲೆನ್ಸ್​​ ಪರಿಚಯಿಸುವ ಬ್ಲ್ಯೂ ಪ್ರಿಂಟ್ ರೆಡಿ ಮಾಡಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಗಂಭಿರವಾಗಿ ಚಿಂತನೆ ನಡೆಸುತ್ತಿದ್ದು, ಇದೇ ಮೊದಲ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಮುಂದಾಗಿದೆ.

ವಿಕ್ಟೋರಿಯಾದಲ್ಲಿ ಹೆಲಿಪ್ಯಾಡ್

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಾಂಚ್ ಆಗಲಿದೆ ಹೆಲಿಪ್ಯಾಡ್.. ಹೌದು ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿಯಿಂದ ರೋಗಿಗಳನ್ನ ತುರ್ತು ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿಲ್ಲ. ಹೀಗಾಗಿಯೇ ಸಾಕಷ್ಟು ರೋಗಿಗಳು ಆಸ್ಪತ್ರೆ ತಲುಪುವ ಮುನ್ನವೇ ಸಾಯುತ್ತಿದ್ದಾರೆ. ಅದರಲ್ಲೂ ರಾಜ್ಯದ ಬೇರೆ ಜಿಲ್ಲೆಗಳಿಂದ ಸಾಕಷ್ಟು ತುರ್ತು ಸೇವೆಗಳಿಗೆ ಜನರು ಇದೇ ಆಸ್ಪತ್ರೆಗೆ ಬರಬೇಕಿದೆ ಆಂಬ್ಯುಲೆನ್ಸ್ ನಲ್ಲಿ ಶಿಫ್ಟ್ ಆಗಲು ಸಾಕಷ್ಟು ಸಮಯ ತಗೆದುಕೊಳ್ಳುತ್ತಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಹೆಲಿಪ್ಯಾಡ್ ಮಾಡಲು ಮುಂದಾಗಿದೆ.

ಇದನ್ನೂ ಓದಿ: ಚಾಲಕ ರಹಿತ ನಮ್ಮ ಮೆಟ್ರೋ ಆರಂಭಕ್ಕೂ ಮುನ್ನವೇ ಬಂತು ನೂರಾರು ಕೋಟಿ ರೂ. ಆದಾಯ..!

ಇದರೊಂದಿಗೆ ಸರ್ಕಾರಿ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಏರ್ ಆಂಬ್ಯುಲೆನ್ಸ್ ಮೂಲಕ ಸರ್ವಿಸ್ ನೀಡಲು ಮುಂದಾಗಿದೆ. ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಸಮಯದಲ್ಲಿ ತುರ್ತು ಆಸ್ಪತ್ರೆಗೆ ವರ್ಗಾಯಿಸಲು ಈ ಏರ್ ಆಂಬ್ಯುಲೆನ್ಸ್ ಸಾಕಷ್ಟು ಸಹಾಯಕವಾಗಲಿದೆ. ತುರ್ತು ಸಂದರ್ಭದಲ್ಲಿ ರೋಗಿಗಳನ್ನ ಆಸ್ಪತ್ರೆಗೆ ಈ ಆಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಬಹುದಾಗಿದೆ.. ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಒಂದು ಸಾವಿರ ಬೆಡ್ ಆಸ್ಪತ್ರೆ ನಿರ್ಮಾಣಾಗುತ್ತಿದ್ದು,, ಇದರ ಮೇಲೆ ಹೆಲಿಪ್ಯಾಡ್ ಅಳವಡಿಸಿಕೊಳ್ಳಲು ಪ್ಲಾನ್ ಮಾಡಲಾಗುತ್ತಿದೆ.

ಒಟ್ಟಿನಲ್ಲಿ ಬೆಂಗಳೂರಿಗೆ ಹೆಲ್ತ್ ಎಮರ್ಜೆನ್ಸಿಯಲ್ಲಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ತುಂಬಾ ಅವಶ್ಯವಾಗಿದೆ. ಸರ್ಕಾರ ಈ ಯೋಜನೆ ರೂಪುರೇಷೆ ಸಿದ್ಧಪಡಿಸುತ್ತಿದ್ದು, ಖಾಸಗಿ ಅಥವಾ ಪಿಪಿಪಿ ಮಾಡೆಲ್ ನಲ್ಲಿ ಏರ್ ಆಂಬ್ಯುಲೆನ್ಸ್ ನೀಡಲು ಚಿಂತನೆ ಮಾಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:49 pm, Wed, 11 December 24

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ