AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ, ಚಾರ್ಜ್ ಎಷ್ಟು?

ನಗರದಲ್ಲಿರೋ ಪ್ರಮುಖ ಮೆಟ್ರೋ ನಿಲ್ದಾಣಗಳ ಬಳಿ ಆಟೋ ಸ್ಟಾಂಡ್ ನಿರ್ಮಿಸಿ ಕೊಡೋದಕ್ಕೆ ಆಟೋ ಚಾಲಕರ ಸಾರಿಗೆ ಸಚಿವರ ಬಳಿ ಮನವಿ ಸಲ್ಲಿಸಿದ್ದಾರೆ.

ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ, ಚಾರ್ಜ್ ಎಷ್ಟು?
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jul 31, 2023 | 7:11 AM

Share

ಬೆಂಗಳೂರು, ಜುಲೈ 31: ಕಳೆದ ಕೆಲ ವರ್ಷಗಳಿಂದ ನಗರದಲ್ಲಿ ಕ್ಯಾಬ್, ಟ್ಯಾಕ್ಸಿಗಳ ಸಂಖ್ಯೆ ಲೆಕ್ಕಕ್ಕೂ ಸಿಗದಂತೆ ಹೆಚ್ಚಿದೆ. ಇದ್ರಿಂದಾಗಿ ಆಟೋ ಓಡಿಸುತ್ತಿರುವವರಿಗೆ ಆರ್ಥಿಕ ಹೊಡೆತ ಬಿದ್ದಿದೆ. ಎಷ್ಟೇ ಸರ್ಕಸ್ ಮಾಡಿದ್ರೂ ಆದಾಯ ಮಾತ್ರ ಹೆಚ್ಚಾಗ್ತಿಲ್ಲ ಅಂತ ಕೊರಗುತ್ತಿದ್ದ ಆಟೋ ಚಾಲಕರ(Auto) ನೋವು ಈಗ ಸರ್ಕಾರದ ಕಿವಿ ಮುಟ್ಟಿದೆ. ಆಟೋ ಚಾಲಕರ ನೋವಿಗೆ ಸ್ಪಂದಿಸೋ ನಿಟ್ಟಿನಲ್ಲಿ ಸರ್ಕಾರ(Karnataka Government) ಹೊಸ ಐಡಿಯಾ ರೂಪಿಸ್ತಿದೆ.

ಮೆಟ್ರೋ ನಿಲ್ದಾಣಗಳ ಬಳಿ ತಲೆಯೆತ್ತಲಿವೆ ಆಟೋ ನಿಲ್ದಾಣಗಳು

ಐಟಿ ಕ್ಯಾಪಿಟಲ್ ಎಂದೇ ಖ್ಯಾತಿ ಹೊಂದಿರೋ ನಮ್ಮ ನಗರದಲ್ಲಿ ಬರೊಬ್ಬರಿ 2 ಲಕ್ಷ 10 ಸಾವಿರಕ್ಕೂ ಅಧಿಕ ಆಟೋಗಳಿವೆ. ಇವುಗಳನ್ನು ಬಳಸುತ್ತಿದ್ದ ಜನರ ಸಂಖ್ಯೆ ಈಗ ಕಡಿಮೆಯಾಗುತ್ತಿದೆ. ನಗರದಲ್ಲಿರೋ 80 ಸಾವಿರಕ್ಕೂ ಅಧಿಕ ಓಲಾ ಹಾಗು ಊಬರ್ ಕ್ಯಾಬ್‌ಗಳು ಆಟೋ ಬಳಸುತ್ತಿದ್ದ ಗ್ರಾಹಕರನ್ನ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಇದ್ರಿಂದ ವ್ಯಾಪಾರದಲ್ಲಿ ನಷ್ಟ ಎದುರಿಸುತ್ತಿರೋ ಆಟೋ ಚಾಲಕರ ಮನವಿ ಈಗ ಸಾರಿಗೆ ಸಚಿವರ ಗಮನಕ್ಕೆ ತರಲಾಗಿದೆ, ನಗರದಲ್ಲಿರೋ ಪ್ರಮುಖ ಮೆಟ್ರೋ ನಿಲ್ದಾಣಗಳ ಬಳಿ ಆಟೋ ಸ್ಟಾಂಡ್ ನಿರ್ಮಿಸಿ ಕೊಡೋದಕ್ಕೆ ಮನವಿಯನ್ನು ಅವರ ಮುಂದಿಡಲಾಗಿದೆ.

ಇದನ್ನೂ ಓದಿ: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

ದೇಶದಲ್ಲೇ 2ನೇ ಅತಿ ಹೆಚ್ಚಿನ ಮೆಟ್ರೋ ರೈಲು ಸಂಪರ್ಕ ಇರೋದು ನಮ್ಮ ನಗರದಲ್ಲಿ. ಹೀಗಿರೋವಾಗ ಇದರ ಸದುಪಯೋಗ ಆಟೋ ಚಾಲಕರಿಗೆ ಲಭಿಸುವಂತಾಗಬೇಕು ಅನ್ನೋದು ಸಾರಿಗೆ ಸಚಿವರ ಪ್ಲಾನ್ ಆಗಿತ್ತು. ಇದೇ ಕಾರಣದಿಂದ ನಗರದಲ್ಲಿರೋ ಬಹುತೇಕ ಎಲ್ಲ ಪ್ರಮುಖ ಮೆಟ್ರೋ ನಿಲ್ದಾಣಗಳ ಬಳಿ ಆಟೋ ಸ್ಟಾಂಡ್ ನಿರ್ಮಿಸಿಕೊಡಲು ಚಿಂತನೆ ನಡೆಸಲಾಗ್ತಿದೆ. ಸರ್ಕಾರ ಅಥವಾ ಬಿಬಿಎಂಪಿ ವತಿಯಿಂದ ಸುಮಾರು 10ರಿಂದ 20 ಆಟೋಗಳನ್ನು ನಿಲ್ಲಿಸುವಷ್ಟು ಜಾಗದಲ್ಲಿ ಸ್ಟಾಂಡ್ ನಿರ್ಮಿಸಲು ಯೋಜನೆ ರೂಪಿಸಲಾಗೋ ಮುನ್ಸೂಚನೆ ಈಗಾಗಲೇ ಲಭಿಸಿದೆ. ಇನ್ನು ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲು ಚಿಂತನೆ ನಡೆದಿದೆ.

ಕಳೆದ 8 -10 ವರ್ಷಗಳ ಹಿಂದೆ ಪ್ರೀಪೇಯ್ಡ್ ಆಟೋ ಸ್ಟಾಂಡ್‌ಗಳು ನಗರದಲ್ಲಿ ತಲೆಯೆತ್ತಿತ್ತು. ಎಲ್ಲಿಂದ ಎಲ್ಲಿಗೇ ಹೋಗಬೇಕಿದ್ರೂ ಮೊದಲೇ ನಿಗದಿಪಡಿಸಿರೋ ಮೊತ್ತವನ್ನು ನೀಡಿ ಪ್ರಯಾಣ ಬೆಳೆಸಬಹುದಾಗಿತ್ತು. ಆಟೋ ಚಾಲಕರು ವಸೂಲಿ ಮಾಡ್ತಾರೆ ಅನ್ನೋ ಆರೋಪ ತಳ್ಳಿಹಾಕಲು ಈ ಯೋಜನೆಯನ್ನು ಚಾಲ್ತಿಗೆ ತರಲಾಗಿತ್ತು. ಆದ್ರೆ, ಇವುಗಳ ಸದ್ಬಳಕೆ ಆಗದೇ ಇವು ಮೂಲೆಗುಂಪಾಗಿದ್ದು ಈ ಪದ್ದತಿಯನ್ನು ವಾಪಸ್ ತರಲು ಚಿಂತನೆ ನಡೆಸಲಾಗಿದೆ. ಪ್ರಮುಖ ಮೆಟ್ರೋ ನಿಲ್ದಾಣಗಳ ಬಳಿ ಪ್ರಿಪೇಯ್ಡ್ ಹಾಗೂ ಸಾಮಾನ್ಯ ಆಟೋ ಸ್ಟಾಂಡ್‌ಗಳನ್ನು ನಿರ್ಮಿಸುವುದರಿಂದ ಆಟೋ ಚಾಲಕರಿಗೆ ಎಷ್ಟು ಅನುಕೂಲವಾಗುತ್ತೋ, ಅಷ್ಟೇ ಅನುಕೂಲ ಪ್ರಯಾಣಿಕರಿಗೂ ಆಗುತ್ತೆ ಅನ್ನೋದ್ರಲ್ಲಿ ಸಂಶಯವಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:10 am, Mon, 31 July 23

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್