AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ

ಬಿಬಿಎಂಪಿ ಚುನಾವಣೆ ಸಂಬಂಧ ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ
ಬಿಬಿಎಂಪಿ
TV9 Web
| Edited By: |

Updated on: Oct 01, 2023 | 11:40 AM

Share

ಬೆಂಗಳೂರು, (ಅಕ್ಟೋಬರ್ 01) : ಬಿಬಿಎಂಪಿ ಚುನಾವಣೆ (BBM ELection)ನಡೆಯುವ ಕಾಲ ಸಮೀಪಿಸಿದ್ದು, ಬಿಬಿಎಂಪಿ ವಾರ್ಡ್‌ (BBMP Wards) ಮರುವಿಂಗಡಣೆಯ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು. ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಪುನರ್ ಪರಿಶೀಲನೆ ಮಾಡಿ BBMP 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದೆ. bbmpdelimitation2023.com/ ವೆಬ್​ಸೈಟ್​ನಲ್ಲಿ ವಾರ್ಡ್​ ಮಾಹಿತಿ ಲಭ್ಯವಿದೆ. ಹಾಗೇ ಈ ವೆಬ್​ಸೈಟ್​ನಲ್ಲಿ ತಮ್ಮ ವಾರ್ಡ್​ಗಳ ನಕ್ಷೆಯನ್ನ ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ, 225 ವಾರ್ಡಗಳನ್ನು ಅಧಿಕೃತಗೊಳಿಸಿದ ಸರ್ಕಾರ

ಆಗಸ್ಟ್ 18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು. ವಾರ್ಡ್‌ಗಳ ಮರು ವಿಂಗಡಣೆ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಇದೇ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ