AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ

ಬಿಬಿಎಂಪಿ ಚುನಾವಣೆ ಸಂಬಂಧ ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು.

ಬಿಬಿಎಂಪಿಯ 225 ವಾರ್ಡ್ ನಕ್ಷೆ ಬಿಡುಗಡೆ, ನಿಮ್ಮ ವಾರ್ಡ್ ನಕ್ಷೆ ನೋಡುವುದು ಹೇಗೆ? ಇಲ್ಲಿದೆ ವಿವರ
ಬಿಬಿಎಂಪಿ
TV9 Web
| Edited By: |

Updated on: Oct 01, 2023 | 11:40 AM

Share

ಬೆಂಗಳೂರು, (ಅಕ್ಟೋಬರ್ 01) : ಬಿಬಿಎಂಪಿ ಚುನಾವಣೆ (BBM ELection)ನಡೆಯುವ ಕಾಲ ಸಮೀಪಿಸಿದ್ದು, ಬಿಬಿಎಂಪಿ ವಾರ್ಡ್‌ (BBMP Wards) ಮರುವಿಂಗಡಣೆಯ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 225 ವಾರ್ಡ್‌ಗಳನ್ನು ಅಂತಿಮಗೊಳಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಇದೀಗ ವಾರ್ಡ್​ ಪುನರ್​ ವಿಂಗಡಣೆಯ ಅಂತಿಮ ಪಟ್ಟಿಯ ನಕ್ಷೆ ಬಿಡುಗಡೆ ಮಾಡಿದೆ. ಪುನರ್ ಪರಿಶೀಲನೆ ಮಾಡಿ ಪಾಲಿಕೆಗೆ ಸಂಬಂಧಿಸಿದಂತೆ 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗರು ತಮ್ಮ ವಾರ್ಡ್​ಗಳ ನಕ್ಷೆಯನ್ನ ವೀಕ್ಷಿಸಬಹುದು. ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಪುನರ್ ಪರಿಶೀಲನೆ ಮಾಡಿ BBMP 225 ವಾರ್ಡ್​ಗಳ ನಕ್ಷೆಗಳ ಬಿಡುಗಡೆ ಮಾಡಲಾಗಿದೆ. bbmpdelimitation2023.com/ ವೆಬ್​ಸೈಟ್​ನಲ್ಲಿ ವಾರ್ಡ್​ ಮಾಹಿತಿ ಲಭ್ಯವಿದೆ. ಹಾಗೇ ಈ ವೆಬ್​ಸೈಟ್​ನಲ್ಲಿ ತಮ್ಮ ವಾರ್ಡ್​ಗಳ ನಕ್ಷೆಯನ್ನ ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ, 225 ವಾರ್ಡಗಳನ್ನು ಅಧಿಕೃತಗೊಳಿಸಿದ ಸರ್ಕಾರ

ಆಗಸ್ಟ್ 18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು. ವಾರ್ಡ್‌ಗಳ ಮರು ವಿಂಗಡಣೆ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಇದೇ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ