AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ಬಲಪಡಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ 3862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ 9 ಸಾವಿರ ಲಕ್ಷ ರೂ. ಹೆಚ್ಚು ಅನುಮೋದನೆ ದೊರೆತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಂಡು, ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಿಸಲಿದೆ. ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ ಅನುದಾನ ಹಂಚಿಕೆಯಾಗಿದೆ.

ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!
ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!
Vinay Kashappanavar
| Edited By: |

Updated on:Feb 03, 2026 | 11:23 AM

Share

ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್  (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಿಂದೆಯೂ ಹೇಳಿಕೆ ನೀಡಿದ್ದರು. ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ 3 ಸಾವಿರ ಲಕ್ಷ ರೂ. ಗೂ ಹೆಚ್ಚು ಹಣ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4 ಸಾವಿರ ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ ಮತ್ತು ಶಾಲಾ ಶಿಕ್ಷಣ ಗುಣಮಟ್ಟದಲ್ಲಿ ಸುಧಾರಣೆ ಕಾಣಬಹುದಾಗಿದೆ.

ಯಾವೆಲ್ಲಾ ವಿಭಾಗಗಳಿಗೆ ಎಷ್ಟೆಷ್ಟು ಅನುದಾನ ಮೀಸಲು

  •  1631 ಹಿರಿಯ ಪ್ರಾಥಮಿಕ ಶಾಲೆಗಳಿಗೆ 3914.40 ಲಕ್ಷ ರೂಗಳು ಮೀಸಲು
  •  95 ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ 114 .00 ಲಕ್ಷ ರೂ ಮೀಸಲು
  • 1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4744.80 ಲಕ್ಷ ಮೀಸಲು
  • 4. 159 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 381.6 ಲಕ್ಷ ಮೀಸಲು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 am, Tue, 3 February 26

Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?