AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿರುವ ಕರ್ನಾಟಕ ವಿದ್ಯಾರ್ಥಿಗಳ ರಕ್ಷಣೆಗೆ ನೋಡೆಲ್ ಅಧಿಕಾರಿ ನೇಮಕ: ಸಹಾಯವಾಣಿ ಆರಂಭ

ಉಕ್ರೇನ್​ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಅಗತ್ಯ ಕ್ರಮ ತೆಗೆದುಕೊಂಡಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಸೂಚನೆ ಹೊರಡಿಸಿದ್ದಾರೆ.

ಉಕ್ರೇನ್​ನಲ್ಲಿರುವ ಕರ್ನಾಟಕ ವಿದ್ಯಾರ್ಥಿಗಳ ರಕ್ಷಣೆಗೆ ನೋಡೆಲ್ ಅಧಿಕಾರಿ ನೇಮಕ: ಸಹಾಯವಾಣಿ ಆರಂಭ
ಉಕ್ರೇನ್ ಗಡಿಯಲ್ಲಿ ರಷ್ಯನ್ ಪಡೆಗಳು
TV9 Web
| Edited By: |

Updated on:Feb 24, 2022 | 9:29 PM

Share

ಬೆಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷ (Russia-Ukraine) ವಿಷಮಿಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಅಗತ್ಯ ಕ್ರಮ ತೆಗೆದುಕೊಂಡಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಸೂಚನೆ ಹೊರಡಿಸಿದ್ದಾರೆ. ‘ಉಕ್ರೇನ್​ನಲ್ಲಿ ಪ್ರಸ್ತುತ ಮಿಲಿಟರಿ ಕಾನೂನು ಜಾರಿ ಮಾಡಲಾಗಿದೆ. ಮುಂದೇನಾಗಲಿದೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಗೊತ್ತಿಲ್ಲ. ಉಕ್ರೇನ್​ನ ವಾಯುಮಾರ್ಗವನ್ನು ಮುಚ್ಚಲಾಗಿದೆ. ವಿಶೇಷ ವಿಮಾನಗಳನ್ನು ರದ್ದುಪಡಿಸಲಾಗಿದೆ. ಹೀಗಾಗಿ ಭಾರತದ ಜನರು ಮತ್ತು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ಸಮಸ್ಯೆಯಾಗಿದೆ. ಉಕ್ರೇನ್ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಎಲ್ಲ ಭಾರತೀಯರನ್ನು ರಕ್ಷಿಸಲು ಯತ್ನಿಸುತ್ತಿದೆ’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

‘ಕರ್ನಾಟಕದ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿದ್ದಾರೆ. ಇವರ ರಕ್ಷಣೆಗಾಗಿ ಮುಖ್ಯಮಂತ್ರಿ ಕಚೇರಿ ಮತ್ತು ಮುಖ್ಯಕಾರ್ಯದರ್ಶಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ವಿದೇಶಾಂಗ ವ್ಯವಹಾರಗಳ ಇಲಾಖೆ ಹಾಗೂ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಮುಖ್ಯಮಂತ್ರಿ ಕಚೇರಿ ಸತತ ಸಂಪರ್ಕದಲ್ಲಿದೆ. ಅಲ್ಲಿನ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಮತ್ತು ಅವರಿಗೆ ಸಾಧ್ಯವಿರು ಎಲ್ಲ ನೆರವು ಒದಗಿಸಲು ವಿದೇಶಾಂಗ ವ್ಯವಹಾರಗಳ ಇಲಾಖೆ ಶ್ರಮಿಸುತ್ತಿದೆ. ಇದಕ್ಕಾಗಿ ಭಾರತ ಸರ್ಕಾರವು 24X7 ಕಾರ್ಯನಿರ್ವಹಿಸುವ ಸಹಾಯವಾಣಿಗಳನ್ನು ಆರಂಭಿಸಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಕನ್ನಡಿಗರನ್ನು ಕರೆತರಲು ಕರ್ನಾಟಕ ಸರ್ಕಾರವು ಐಎಫ್​ಎಸ್ ಅಧಿಕಾರಿ, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ಡಾ.ಮನೋಜ್ ರಾಜನ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿದೆ. ಮುಂದಿನ ದಿನಗಳಲ್ಲಿ ಇವರು ವಿದೇಶಾಂಗ ವ್ಯವಹಾರಗಳ ಇಲಾಖೆಯೊಂದಿಗೆ ಸಹಯೋಗದಿಂದ ಕೆಲಸ ಮಾಡಿ, ಉಕ್ರೇನ್​ನಲ್ಲಿರುವ ಕನ್ನಡಿಗರನ್ನು ವಾಪಸ್ ಕರ್ನಾಟಕಕ್ಕೆ ಕರೆತರಲು ಯತ್ನಿಸಲಿದ್ದಾರೆ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Govt-Notification

ಕರ್ನಾಟಕ ಸರ್ಕಾರ ಹೊರಡಿಸಿರುವ ಅಧಿಸೂಚನೆ

ಅಗತ್ಯ ಇರುವವರು ಯಾವುದೇ ದಿನ, ಯಾವುದೇ ಸಮಯದಲ್ಲಿ 24X7 ಸಹಾಯವಾಣಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 080 1070, 080 2234 0676. ಇಮೇಲ್: manoarya@gmail.com, revenuedmkar@gmail.com ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಇಲಾಖೆಯೂ ನಿಯಂತ್ರಣ ಕೇಂದ್ರ ಸ್ಥಾಪಿಸಿದ್ದು ಸಹಾಯವಾಣಿಗಳನ್ನು ಆರಂಭಿಸಿದೆ. +91 11 2301 2113, +91 11 2301 4104, +91 11 2301 7905. ಟೋಲ್​ಫ್ರೀ ಸಂಖ್ಯೆ 1800 11 8797 (ದೆಹಲಿ). ಇಮೇಲ್: situationroom@mea.gov.in

ಇದನ್ನೂ ಓದಿ: ನಿಮಗಿದು ಗೊತ್ತೇ?; ಭಾರತದ ಸಹಾಯ ಬೇಡುತ್ತಿರುವ ಇದೇ ಉಕ್ರೇನ್ ವಿಶ್ವಸಂಸ್ಥೆಯಲ್ಲಿ 1998ರ ಅಣ್ವಸ್ತ್ರ ಪರೀಕ್ಷೆಯನ್ನು ಖಂಡಿಸಿತ್ತು

ಇದನ್ನೂ ಓದಿ: Russia Ukraine War; ಉಕ್ರೇನ್​ನಲ್ಲಿ ಸಿಲುಕಿರುವ ಮಕ್ಕಳ ಪರದಾಟ ನೋಡಿ ಕಂಗಾಲಾದ ಪೋಷಕರು; ಸುರಕ್ಷಿತವಾಗಿ ಕರೆತರುವಂತೆ ಮನವಿ

Published On - 9:28 pm, Thu, 24 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್