AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ

ಕರ್ನಾಟಕ ಸರ್ಕಾರವು ವಿಧಿಸಲಿರುವ ಹೊಸ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ
ಆಟೊ ಚಾಲಕರಿಗೆ ದಂಡ ಹಾಕಿರುವ ಕೆ.ಆರ್.ಪುರಂ ಪೊಲೀಸರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 27, 2022 | 9:55 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಓಲಾ (Ola) ಮತ್ತು ಉಬರ್ (Uber) ಕಂಪನಿಗಳನ್ನು ನಿಯಮಗಳ ಅಡಿಗೆ ತರುವ ಪ್ರಯತ್ನವನ್ನು ಮುಂದುವರಿಸಿದೆ. ಪೀಕ್ ಟೈಮ್ ಸೇರಿದಂತೆ ಹಲವು ನೆಪಗಳಲ್ಲಿ ಗ್ರಾಹಕರನ್ನು ಮತ್ತು ಚಾಲಕರನ್ನು ಸುಲಿಯುತ್ತಿದ್ದ ಕಂಪನಿಗಳಿಗೆ ಹೊಸದಾಗಿ ದರ ನಿಗದಿಪಡಿಸಲು ಸರ್ಕಾರವು ಮುಂದಾಗಿದೆ. ಇನ್ನೊಂದು ವಾರದಲ್ಲಿ ಹೊಸ ದರ ಪ್ರಕಟಗೊಳ್ಳಬಹುದು. ಈ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ. ಪ್ರಸ್ತುತ 2 ಕಿಮೀಗೆ ₹ 30 ದರವನ್ನು ಸಾರಿಗೆ ಇಲಾಖೆ ನಿಗದಿಪಡಿಸಿದೆ. ಈ ಹಿಂದೆ ರಾಜ್ಯ ಸರ್ಕಾರವು ಎರಡೂ ಅಗ್ರಿಗೇಟರ್​ ಆ್ಯಪ್ ಕಂಪನಿಗಳಿಗೆ ಹೊಸ ದರ ನಿಗದಿಪಡಿಸಲು 15 ದಿನಗಳ ಗಡುವು ನೀಡಿತ್ತು. ಗಡುವು ಸಮೀಪಿಸುತ್ತಿದ್ದಂತೆ ಇದೀಗ ಸರ್ಕಾರವೇ ಹೊಸ ದರ ನಿಗದಿಪಡಿಸಲು ಮುಂದಾಗಿದೆ.

ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಗ್ರಾಹಕರಿಂದ ಹೆಚ್ಚುವರಿ ದರ ವಸೂಲು ಮಾಡುವವರ ವಿರುದ್ಧದ ಕಾರ್ಯಾಚರಣೆಯನ್ನು ಬೆಂಗಳೂರು ಪೊಲೀಸರು ಮುಂದುವರಿಸಿದ್ದಾರೆ. ಮಫ್ತಿಯಲ್ಲಿ ಸಾಮಾನ್ಯ ಜನರಂತೆ ಆಟೊಗಳನ್ನು ಬಾಡಿಗೆಗೆ ಕರೆದ ಪೊಲೀಸರು ದುಬಾರಿ ಹಣ ಕೇಳಿದ ಚಾಲಕರು, ಬಾಡಿಗೆಗೆ ಬರಲು ನಿರಾಕರಿಸಿದವರಿಗೆ ದಂಡ ವಿಧಿಸಿದರು. ಈ ಕುರಿತು ಕೆ.ಆರ್.ಪುರಂ ಪೊಲೀಸರು ಟ್ವೀಟ್ ಮಾಡಿದ್ದು, ‘ನಿಯಮ ಉಲ್ಲಂಘನೆ ಮಾಡುವ ಆಟೊ ಚಾಲಕರ ವಿರುದ್ಧ ವಿಶೇಷ ಅಭಿಯಾನ ಮುಂದುವರಿಸಿದ್ದೇವೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ಪುರಂ ಪೊಲೀಸರು ಹೇಳಿದ್ದಾರೆ.

ಕೆ.ಆರ್.ಪುರಂನಿಂದ ಫೀನಿಕ್ಸ್ ಮಾರ್ಕೆಟ್​ ಸಿಟಿಗೆ ಮೀಟರ್ ಹಾಕಲು ಒಪ್ಪದ ಆಟೊ ಚಾಲಕರೊಬ್ಬರು ₹ 150 ಬಾಡಿಗೆ ದರ ಕೇಳಿದ್ದರು. ಆ ಚಾಲಕನಿಗೆ ಪೊಲೀಸರು ₹ 150 ದಂಡ ವಿಧಿಸಿದರು. ಈ ಘಟನೆಯನ್ನೂ ಪೊಲೀಸರು ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

Published On - 9:55 am, Thu, 27 October 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!