AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ

ಕರ್ನಾಟಕ ಸರ್ಕಾರವು ವಿಧಿಸಲಿರುವ ಹೊಸ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ
ಆಟೊ ಚಾಲಕರಿಗೆ ದಂಡ ಹಾಕಿರುವ ಕೆ.ಆರ್.ಪುರಂ ಪೊಲೀಸರು
TV9 Web
| Edited By: |

Updated on:Oct 27, 2022 | 9:55 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಓಲಾ (Ola) ಮತ್ತು ಉಬರ್ (Uber) ಕಂಪನಿಗಳನ್ನು ನಿಯಮಗಳ ಅಡಿಗೆ ತರುವ ಪ್ರಯತ್ನವನ್ನು ಮುಂದುವರಿಸಿದೆ. ಪೀಕ್ ಟೈಮ್ ಸೇರಿದಂತೆ ಹಲವು ನೆಪಗಳಲ್ಲಿ ಗ್ರಾಹಕರನ್ನು ಮತ್ತು ಚಾಲಕರನ್ನು ಸುಲಿಯುತ್ತಿದ್ದ ಕಂಪನಿಗಳಿಗೆ ಹೊಸದಾಗಿ ದರ ನಿಗದಿಪಡಿಸಲು ಸರ್ಕಾರವು ಮುಂದಾಗಿದೆ. ಇನ್ನೊಂದು ವಾರದಲ್ಲಿ ಹೊಸ ದರ ಪ್ರಕಟಗೊಳ್ಳಬಹುದು. ಈ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ. ಪ್ರಸ್ತುತ 2 ಕಿಮೀಗೆ ₹ 30 ದರವನ್ನು ಸಾರಿಗೆ ಇಲಾಖೆ ನಿಗದಿಪಡಿಸಿದೆ. ಈ ಹಿಂದೆ ರಾಜ್ಯ ಸರ್ಕಾರವು ಎರಡೂ ಅಗ್ರಿಗೇಟರ್​ ಆ್ಯಪ್ ಕಂಪನಿಗಳಿಗೆ ಹೊಸ ದರ ನಿಗದಿಪಡಿಸಲು 15 ದಿನಗಳ ಗಡುವು ನೀಡಿತ್ತು. ಗಡುವು ಸಮೀಪಿಸುತ್ತಿದ್ದಂತೆ ಇದೀಗ ಸರ್ಕಾರವೇ ಹೊಸ ದರ ನಿಗದಿಪಡಿಸಲು ಮುಂದಾಗಿದೆ.

ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಗ್ರಾಹಕರಿಂದ ಹೆಚ್ಚುವರಿ ದರ ವಸೂಲು ಮಾಡುವವರ ವಿರುದ್ಧದ ಕಾರ್ಯಾಚರಣೆಯನ್ನು ಬೆಂಗಳೂರು ಪೊಲೀಸರು ಮುಂದುವರಿಸಿದ್ದಾರೆ. ಮಫ್ತಿಯಲ್ಲಿ ಸಾಮಾನ್ಯ ಜನರಂತೆ ಆಟೊಗಳನ್ನು ಬಾಡಿಗೆಗೆ ಕರೆದ ಪೊಲೀಸರು ದುಬಾರಿ ಹಣ ಕೇಳಿದ ಚಾಲಕರು, ಬಾಡಿಗೆಗೆ ಬರಲು ನಿರಾಕರಿಸಿದವರಿಗೆ ದಂಡ ವಿಧಿಸಿದರು. ಈ ಕುರಿತು ಕೆ.ಆರ್.ಪುರಂ ಪೊಲೀಸರು ಟ್ವೀಟ್ ಮಾಡಿದ್ದು, ‘ನಿಯಮ ಉಲ್ಲಂಘನೆ ಮಾಡುವ ಆಟೊ ಚಾಲಕರ ವಿರುದ್ಧ ವಿಶೇಷ ಅಭಿಯಾನ ಮುಂದುವರಿಸಿದ್ದೇವೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ಪುರಂ ಪೊಲೀಸರು ಹೇಳಿದ್ದಾರೆ.

ಕೆ.ಆರ್.ಪುರಂನಿಂದ ಫೀನಿಕ್ಸ್ ಮಾರ್ಕೆಟ್​ ಸಿಟಿಗೆ ಮೀಟರ್ ಹಾಕಲು ಒಪ್ಪದ ಆಟೊ ಚಾಲಕರೊಬ್ಬರು ₹ 150 ಬಾಡಿಗೆ ದರ ಕೇಳಿದ್ದರು. ಆ ಚಾಲಕನಿಗೆ ಪೊಲೀಸರು ₹ 150 ದಂಡ ವಿಧಿಸಿದರು. ಈ ಘಟನೆಯನ್ನೂ ಪೊಲೀಸರು ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

Published On - 9:55 am, Thu, 27 October 22

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?