AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ

ಕರ್ನಾಟಕ ಸರ್ಕಾರವು ವಿಧಿಸಲಿರುವ ಹೊಸ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ.

ಓಲಾ, ಉಬರ್​ಗೆ ಮೂಗುದಾರ: 2 ಕಿಮೀಗೆ 30 ರೂಪಾಯಿ ನಿಗದಿ, ಶೀಘ್ರ ಹೊಸ ದರಪಟ್ಟಿ
ಆಟೊ ಚಾಲಕರಿಗೆ ದಂಡ ಹಾಕಿರುವ ಕೆ.ಆರ್.ಪುರಂ ಪೊಲೀಸರು
TV9 Web
| Edited By: |

Updated on:Oct 27, 2022 | 9:55 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಓಲಾ (Ola) ಮತ್ತು ಉಬರ್ (Uber) ಕಂಪನಿಗಳನ್ನು ನಿಯಮಗಳ ಅಡಿಗೆ ತರುವ ಪ್ರಯತ್ನವನ್ನು ಮುಂದುವರಿಸಿದೆ. ಪೀಕ್ ಟೈಮ್ ಸೇರಿದಂತೆ ಹಲವು ನೆಪಗಳಲ್ಲಿ ಗ್ರಾಹಕರನ್ನು ಮತ್ತು ಚಾಲಕರನ್ನು ಸುಲಿಯುತ್ತಿದ್ದ ಕಂಪನಿಗಳಿಗೆ ಹೊಸದಾಗಿ ದರ ನಿಗದಿಪಡಿಸಲು ಸರ್ಕಾರವು ಮುಂದಾಗಿದೆ. ಇನ್ನೊಂದು ವಾರದಲ್ಲಿ ಹೊಸ ದರ ಪ್ರಕಟಗೊಳ್ಳಬಹುದು. ಈ ದರವು ಜಿಎಸ್​ಟಿಯನ್ನೂ ಒಳಗೊಂಡಿರುತ್ತದೆ ಎಂದು ಮೂಲಗಳು ಹೇಳಿವೆ. ಪ್ರಸ್ತುತ 2 ಕಿಮೀಗೆ ₹ 30 ದರವನ್ನು ಸಾರಿಗೆ ಇಲಾಖೆ ನಿಗದಿಪಡಿಸಿದೆ. ಈ ಹಿಂದೆ ರಾಜ್ಯ ಸರ್ಕಾರವು ಎರಡೂ ಅಗ್ರಿಗೇಟರ್​ ಆ್ಯಪ್ ಕಂಪನಿಗಳಿಗೆ ಹೊಸ ದರ ನಿಗದಿಪಡಿಸಲು 15 ದಿನಗಳ ಗಡುವು ನೀಡಿತ್ತು. ಗಡುವು ಸಮೀಪಿಸುತ್ತಿದ್ದಂತೆ ಇದೀಗ ಸರ್ಕಾರವೇ ಹೊಸ ದರ ನಿಗದಿಪಡಿಸಲು ಮುಂದಾಗಿದೆ.

ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಗ್ರಾಹಕರಿಂದ ಹೆಚ್ಚುವರಿ ದರ ವಸೂಲು ಮಾಡುವವರ ವಿರುದ್ಧದ ಕಾರ್ಯಾಚರಣೆಯನ್ನು ಬೆಂಗಳೂರು ಪೊಲೀಸರು ಮುಂದುವರಿಸಿದ್ದಾರೆ. ಮಫ್ತಿಯಲ್ಲಿ ಸಾಮಾನ್ಯ ಜನರಂತೆ ಆಟೊಗಳನ್ನು ಬಾಡಿಗೆಗೆ ಕರೆದ ಪೊಲೀಸರು ದುಬಾರಿ ಹಣ ಕೇಳಿದ ಚಾಲಕರು, ಬಾಡಿಗೆಗೆ ಬರಲು ನಿರಾಕರಿಸಿದವರಿಗೆ ದಂಡ ವಿಧಿಸಿದರು. ಈ ಕುರಿತು ಕೆ.ಆರ್.ಪುರಂ ಪೊಲೀಸರು ಟ್ವೀಟ್ ಮಾಡಿದ್ದು, ‘ನಿಯಮ ಉಲ್ಲಂಘನೆ ಮಾಡುವ ಆಟೊ ಚಾಲಕರ ವಿರುದ್ಧ ವಿಶೇಷ ಅಭಿಯಾನ ಮುಂದುವರಿಸಿದ್ದೇವೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆ.ಆರ್.ಪುರಂ ಪೊಲೀಸರು ಹೇಳಿದ್ದಾರೆ.

ಕೆ.ಆರ್.ಪುರಂನಿಂದ ಫೀನಿಕ್ಸ್ ಮಾರ್ಕೆಟ್​ ಸಿಟಿಗೆ ಮೀಟರ್ ಹಾಕಲು ಒಪ್ಪದ ಆಟೊ ಚಾಲಕರೊಬ್ಬರು ₹ 150 ಬಾಡಿಗೆ ದರ ಕೇಳಿದ್ದರು. ಆ ಚಾಲಕನಿಗೆ ಪೊಲೀಸರು ₹ 150 ದಂಡ ವಿಧಿಸಿದರು. ಈ ಘಟನೆಯನ್ನೂ ಪೊಲೀಸರು ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

Published On - 9:55 am, Thu, 27 October 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ