AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ಕರ್ನಾಟಕ 3 ವರ್ಷಗಳಲ್ಲಿ 746 ಹೆಕ್ಟೇರ್ ಅರಣ್ಯ ಪ್ರದೇಶ ಕಳೆದುಕೊಂಡಿದೆ! ಇಂಚಿಂಚೂ ವಿವರ ಇಲ್ಲಿದೆ

ಮೂರು ವರ್ಷಗಳಲ್ಲಿ 746 ಹೆಕ್ಟೇರ್ ಅರಣ್ಯ ಪ್ರದೇಶವನ್ನು (forest land) ಇಡೀ ಕರ್ನಾಟಕ ರಾಜ್ಯ ಕಳೆದುಕೊಂಡಿದೆ. ಉತ್ತರ ಕನ್ನಡ ಮತ್ತು ಬಳ್ಳಾರಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳು ಎಂದು ಖುದ್ದು ಸರ್ಕಾರದ ಅಧಿಕೃತ ಡೇಟಾ ಹೇಳುತ್ತಿದೆ.

ಇಡೀ ಕರ್ನಾಟಕ 3 ವರ್ಷಗಳಲ್ಲಿ 746 ಹೆಕ್ಟೇರ್ ಅರಣ್ಯ ಪ್ರದೇಶ ಕಳೆದುಕೊಂಡಿದೆ! ಇಂಚಿಂಚೂ ವಿವರ ಇಲ್ಲಿದೆ
ಇಡೀ ಕರ್ನಾಟಕ 3 ವರ್ಷಗಳಲ್ಲಿ 746 ಹೆಕ್ಟೇರ್ ಅರಣ್ಯ ಪ್ರದೇಶ ಕಳೆದುಕೊಂಡಿದೆ!
TV9 Web
| Updated By: ಸಾಧು ಶ್ರೀನಾಥ್​|

Updated on: Oct 03, 2022 | 2:18 PM

Share

ಬೆಂಗಳೂರು: ಗಣಿಗಾರಿಕೆ ಮತ್ತು ಅಭಿವೃದ್ಧಿ ಯೋಜನೆಗಳಿಂದಾಗಿ (mining and developmental projects) ಹೆಚ್ಚಿನ ಅರಣ್ಯ ಭೂಮಿಯನ್ನು ವೇಗವಾಗಿ ಕಳೆದುಕೊಳ್ಳುತ್ತಿರುವ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಉತ್ತರ ಕನ್ನಡ (Uttara Kannada) ಮತ್ತು ಬಳ್ಳಾರಿ (Ballari) ಹೆಚ್ಚು ಹಾನಿಗೊಳಗಾದ ಜಿಲ್ಲೆಗಳು ಎಂದು ಖುದ್ದು ಸರ್ಕಾರದ ಅಧಿಕೃತ ಡೇಟಾ ಹೇಳುತ್ತಿದೆ. ತೀರಾ ಇತ್ತೀಚಿನ ನಿದರ್ಶನವೆಂದರೆ ಹುಬ್ಬಳ್ಳಿ-ಅಂಕೋಲಾ ರೈಲು (Hubballi-Ankola rail), ವಿಶೇಷವಾಗಿ ತಜ್ಞರ ಸಮಿತಿಯ ಭೇಟಿಯ ನಂತರ 595.6 ಹೆಕ್ಟೇರ್ ಅರಣ್ಯ ಭೂಮಿಯನ್ನು ಉದ್ದೇಶಿತ ಯೋಜನೆಯ ತಿರುವಿಗಾಗಿ ಸಂರಕ್ಷಣಾವಾದಿಗಳು ವಿರೋಧಿಸುತ್ತಿರುವಾಗಲೂ ಹೊಸ ಘಟ್ಟ ತಲುಪಿದೆ.

ಪ್ರಗತಿ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಕಾಡಿನ ನಾಶ:

ರಾಜ್ಯವು ಕೇವಲ ಮೂರು ವರ್ಷಗಳಲ್ಲಿ 746.1 ಹೆಕ್ಟೇರ್ ಅರಣ್ಯ ಭೂಮಿಯನ್ನು ಕಳೆದುಕೊಂಡಿದೆ. ಇದರಲ್ಲಿ ಕೊರೊನಾದಿಂದಾಗಿ ಕನಿಷ್ಠ ಅರಣ್ಯ ಚಟುವಟಿಕೆಯನ್ನು ಕಂಡ ಎರಡು ಸಾಂಕ್ರಾಮಿಕ ವರ್ಷಗಳೂ ಸೇರಿವೆ. ಅರಣ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹೆಚ್ಚು ಅರಣ್ಯ ಪ್ರದೇಶಗಳನ್ನು ಕಳೆದುಕೊಂಡಿವೆ.

“ಎರಡೂ ಜಿಲ್ಲೆಗಳು ಅವುಗಳ ಭೌಗೋಳಿಕ ಪ್ರದೇಶ ಮತ್ತು ಅರಣ್ಯದ ಪ್ರಾಕಾರಗಳಲ್ಲಿ ವಿಶಿಷ್ಟವಾಗಿವೆ. ಪರಿಸರೀಯವಾಗಿ, ಕರ್ನಾಟಕದ ಅರಣ್ಯ ಸಂರಕ್ಷಣಾ ಕಾರ್ಯಕ್ರಮಗಳಿಗೆ ಜಿಲ್ಲೆಗಳು ಪ್ರಮುಖವಾಗಿವೆ. ದುಃಖಕರವೆಂದರೆ, ಸರ್ಕಾರವು ಕೆಲ ಯೋಜನೆಗಳಿಗಾಗಿ ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ಹಲವಾರು ಅರಣ್ಯ ಪ್ರದೇಶಗಳನ್ನು ಕಳೆದುಕೊಳ್ಳುತ್ತಿದೆ. ಬಳ್ಳಾರಿಯಲ್ಲಿ ಹೆಚ್ಚಿನ ಅರಣ್ಯ ಭೂಪ್ರದೇಶವನ್ನು ಗಣಿಗಾರಿಕೆ ಮತ್ತು ವಿದ್ಯುತ್​​ಗಾಗಿ ಸಂಸ್ಥೆಗಳು ಸ್ವಾಧೀನಪಡಿಸಿಕೊಂಡಿವೆ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದರು.

ಭೂ ಯೋಜನೆಗಳಾದ ಉದ್ಯಾನವನಗಳು, ರೈಲು ಕಾರಿಡಾರ್ ವಿಸ್ತರಣೆ, ರಸ್ತೆ ಅಗಲೀಕರಣ ಮತ್ತು ರಕ್ಷಣಾ ಯೋಜನೆಗಳು ಪಶ್ಚಿಮ ಘಟ್ಟಗಳ (ಸಹ್ಯಾದ್ರಿ) ಉದ್ದಕ್ಕೂ ಉತ್ತರ ಕನ್ನಡದಲ್ಲಿ ಅರಣ್ಯ ಭೂಮಿಯನ್ನು ಕಬಳಿಸಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಈ 746 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ಒಟ್ಟಾರೆಯಾಗಿ 48 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಅರಣ್ಯಗಳ (ವನ್ಯಜೀವಿ) ಮಾಜಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಬ್ರಜ್ ಕಿಶೋರ್ ಸಿಂಗ್ ಅವರು ರಾಜ್ಯದ ಅರಣ್ಯ ಪ್ರದೇಶವನ್ನು ತೋರಿಸುತ್ತಾ ಕರ್ನಾಟಕವು ಅರಣ್ಯ ಪ್ರದೇಶವನ್ನು ಹೆಚ್ಚಿಸಿಕೊಂಡಿದೆ ಎಂದು ಹೇಳುತ್ತಾರೆ. ಆದರೆ ವಾಸ್ತವದಲ್ಲಿ, ಅಧಿಸೂಚಿತ ಅರಣ್ಯ ಪ್ರದೇಶದ ವಿಸ್ತೀರ್ಣವು ಗಣನೀಯವಾಗಿ ಕುಗ್ಗಿದೆ. ಹಲವಾರು ಕೃಷಿ-ಅರಣ್ಯ ಪ್ರದೇಶಗಳನ್ನು ಅರಣ್ಯ ಪ್ರದೇಶಗಳಾಗಿ ಯೋಜಿಸಲಾಗಿದೆ. ಆಂಧ್ರಪ್ರದೇಶ, ತೆಲಂಗಾಣ ಮತ್ತು ಇತರ ಎರಡು ರಾಜ್ಯಗಳಲ್ಲಿಯೂ ಇದೇ ಆಗಿದೆ.

ಇತ್ತೀಚಿನ ವರ್ಷಗಳಲ್ಲಿ, ಕೆಲ ಚಟುವಟಿಕೆಗಳು ಕಳೆದ ವರ್ಷದಲ್ಲಿ ಮಾತ್ರ ಪುನರಾರಂಭಗೊಂಡಿವೆ. ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಯೋಜನೆಯಲ್ಲಿಯೇ ನಾವು ಸುಮಾರು 600 ಹೆಕ್ಟೇರ್‌ಗಳನ್ನು ಕಳೆದುಕೊಳ್ಳುತ್ತೇವೆ. ಇದು ಸರಿಸುಮಾರು 10 ಲಕ್ಷಕ್ಕೂ ಹೆಚ್ಚು ಮರಗಳನ್ನು ನಾಶಪಡಿಸುತ್ತದೆ ಎಂದು ಟೈಮ್ಸ್​ ಆಫ್​ ಇಂಡಿಯಾ ಆಂಗ್ಲ ದಿನಪತ್ರಿಕೆ ವರದಿ ಮಾಡಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ