AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್​ನಲ್ಲಿರುವ ಟಾಯ್ಲೆಟ್‌ನಲ್ಲಿ ಮಹಿಳೆಯ ನಂಬರ್ ಬರೆದ, ನಂತರ ಆಗಿದ್ದೇ ಬೇರೆ..!

ಹೇಳಿದಂತೆ ಕೇಳಲಿಲ್ಲ, ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಲಿಲ್ಲ, ಬೇಡಿಕೆ ಈಡೇರಲಿಲ್ಲ ಎಂದಾಗ ಪರಿಚಯಸ್ಥರೆ ತಮ್ಮ ಗೆಳೆತಿಯರ ಮೊಬೈಲ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಉದಾಹರಣೆಗಳು ಸಾಕಷ್ಟು ನಮ್ಮ ಕಣ್ಣ ಮುಂದೆ ಇವೆ. ಹೀಗೆ ಪರಿಚಯಸ್ಥರೊಬ್ಬರ ಮಹಿಳೆಯ ಫೋನ್ ನಂಬರ್‌ನ್ನು ಬೆಂಗಳೂರಿನ ಮೆಜೆಸ್ಟಿಕ್ ಬಸ್‌ಸ್ಟಾಂಡ್ ಬಳಿ ಇರುವ ಶೌಚಾಲಯದಲ್ಲಿ ಈಕೆಯ ಫೋನ್ ನಂಬರ್ ಬರೆದು ಕಾಲ್ ಗರ್ಲ್ ಎಂದು ಉಲ್ಲೇಖಿಸಿದ್ದಾನೆ.

ಮೆಜೆಸ್ಟಿಕ್​ನಲ್ಲಿರುವ ಟಾಯ್ಲೆಟ್‌ನಲ್ಲಿ ಮಹಿಳೆಯ ನಂಬರ್ ಬರೆದ, ನಂತರ ಆಗಿದ್ದೇ ಬೇರೆ..!
ಮೆಜೆಸ್ಟಿಕ್ ಬಸ್‌ಸ್ಟಾಂಡ್
ರಮೇಶ್ ಬಿ. ಜವಳಗೇರಾ
|

Updated on: Jun 19, 2024 | 10:50 PM

Share

ಬೆಂಗಳೂರು, (ಜೂ.19): ವ್ಯಕ್ತಿಯೋರ್ವ ತನ್ನ ಮಹಿಳಾ ಸಹೋದ್ಯೋಗಿಯ ಫೋನ್ ನಂಬರ್‌ನ್ನು ಬೆಂಗಳೂರಿನ(Bengaluru) ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿರುವ  ಶೌಚಾಲಯದಲ್ಲಿ (Majestic Bus Stand toilet) ಬರೆದಿದ್ದಾರೆ. ಅಲ್ಲದೇ ಈಕೆಯ ಫೋನ್ ನಂಬರ್ ಬರೆದು ಕಾಲ್ ಗರ್ಲ್ ಎಂದು ಉಲ್ಲೇಖಿಸಿದ್ದಾನೆ. ಹೌದು… ಸತತ ಕರೆಗಳಿಂದ ಮಹಿಳೆಗೆ ಆಘಾತವಾಗಿದ್ದು, ಕೊನೆಗೆ ಮಹಿಳೆ , ಅಲ್ಲಾಬಕ್ಷ್ ಪಾಟೀಲ್ ಎನ್ನುವವರ ದೂರು ಪೊಲೀಸ್​ ಠಾಣೆಗೆ ನೀಡಿದ್ದಾರೆ. ಇತ್ತ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗೆ ಹಿನ್ನಡೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್, ಆರೋಪಿ ಅರ್ಜಿಯನ್ನು ತಿರಸ್ಕರಿಸಿದೆ.

ಚಿತ್ರದುರ್ಗದ ಆರೋಗ್ಯ ಕೇಂದ್ರದಲ್ಲಿನ ಮಹಿಳಾ ಸಿಬ್ಬಂದಿ ಪ್ರತಿ ದಿನ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುತ್ತಿದ್ದರು. ಇದರ ನಡುವೆ ಮೇಲಾಧಿಕಾರಿ ಸೂಚನೆ ಮೇರೆಗೆ ಫೋನ್ ನಂಬರ್‌ನ್ನು ಅಧಿಕಾರಿಗೆ ನೀಡಿದ್ದಳು. ಇದಾದ ಕೆಲ ದಿನಗಳಲ್ಲಿ ಮಹಿಳೆಗೆ ಸತತ ಕರೆಗಳು ಬರಲಾರಂಭಿಸಿವೆ. ಅಷ್ಟೇ ಅಲ್ಲದೇ ಫೋನ್ ಮಾಡಿದ ಹಲವರು ದಿನಕ್ಕೆಷ್ಟು? ರಾತ್ರಿಗೆಷ್ಟು ಎಂದು ಅಸಭ್ಯವಾಗಿ ಮಾತನಾಡಿದ್ದಾರೆ. ಪ್ರತಿ ದಿನ ಕರೆಗಳ ಸಂಖ್ಯೆ ಹೆಚ್ಚಾಗಿದೆ. ಹೀಗೆ ಕರೆ ಮಾಡಿದವರಲ್ಲೇ ಈ ನಂಬರ್ ಎಲ್ಲಿ ಸಿಕ್ಕಿತ್ತು ಎಂದು ಮಹಿಳೆ ಪ್ರಶ್ನಿಸಿದಾಗ ಅಲ್ಲಾಬಕ್ಷ್ ಪಾಟೀಲ್ ಕರಾಮತ್ತು ಬಯಲಾಗಿದೆ. ಮೆಜೆಸ್ಟಿಕ್ ಶೌಚಾಲಯದಲ್ಲಿ ಕಾಲ್ ಗರ್ಲ್ ನಂಬರ್ ಎಂದು ಈ ಸಂಖ್ಯೆ ಹಾಕಲಾಗಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಪ್ಲಾನ್​

ಈ ಮಾಹಿತಿ ಆಧಾರದ ಮೇಲೆ ಮಹಿಳೆ ದೂರು ದಾಖಲಿಸಿದ್ದಾಳೆ. ಆರೋಪಿ ಅಲ್ಲಾಬಕ್ಷ್ ಪಾಟೀಲ್ ವಿರುದ್ಧ ಸೆಕ್ಷನ್ 501, 504, 507 ಹಾಗೂ 509ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ, ಇತ್ತ ಅಲ್ಲಾಬಕ್ಷ್ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದ. ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಕೋರ್ಟ್, ಆರೋಪಿ ಅಲ್ಲಾಬಕ್ಷ್ ಪಾಟೀಲ್ ಅರ್ಜಿಯನ್ನು ತಿರಸ್ಕರಿಸಿದೆ.

ಇದು ಗಂಭೀರ ಪ್ರಕರಣವಾಗಿದೆ. ಮಹಿಳೆಗೆ ದೈಹಿಕ ಹಾನಿಗಿಂತ ಮಾನಸಿಕವಾಗಿ ನೀಡುವ ಹಾನಿ ಗಂಭೀರವಾಗಿದೆ. ಈ ಮಹಿಳೆಯ ಫೋಟೋ, ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದು, ನಂಬರ್ ಬಹಿರಂಪಡಿಸವುದು ಆಕೆಯ ಘತನೆಗೆ ಧಕ್ಕೆಯಾಗಲಿದೆ. ಇಂತಹ ಪ್ರಕರಣಗಳು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಹೀಗಾಗಿ ಪ್ರಕರಣ ರದ್ದುಕೋರಲು ಸಾಧ್ಯವಿಲ್ಲ. ವಿಚಾರಣೆ ಎದುರಿಸಿ, ತನಿಖೆಗೆ ಸಹಕರಿಸುವಂತೆ ಆರೋಪಿ ಅಲ್ಲಾಬಕ್ಷ್ ಪಾಟೀಲ್​ಗೆ ಸೂಚಿಸಿ ಹೈಕೋರ್ಟ್ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ