
ಬೆಂಗಳೂರು, ಸೆ.10: ರಾಜ್ಯದಲ್ಲಿ ಒಂದೆಡೆ ಮಳೆಯ ವಾತಾವರಣವಿದ್ದರೆ, ಮತ್ತೊಂದೆಡೆ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಹವಾಮಾನದ ಈ ವಿಚಿತ್ರ ವೈಪರೀತ್ಯವು ಆರೋಗ್ಯ ಇಲಾಖೆಗೆ ಡಬಲ್ ಸವಾಲಾಗಿ ಪರಿಣಮಿಸಿದೆ. ಜಾಗತಿಕವಾಗಿ ‘ಸೂಪರ್ ಎಲ್ ನಿನೊ’ (Super El Niño) ಪರಿಣಾಮದಿಂದ ತಾಪಮಾನ ಏರಿಕೆಯಾಗುವ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಹವಾಮಾನ ಬದಲಾವಣೆಯ ನೇರ ಪರಿಣಾಮ ಸಾರ್ವಜನಿಕರ ಆರೋಗ್ಯದ ಮೇಲೆ ಬೀರುವ ಆತಂಕ ವ್ಯಕ್ತವಾಗಿದೆ. ಹಠಾತ್ ತಾಪಮಾನ ಏರಿಕೆಯಿಂದ ದೇಹದಲ್ಲಿ ನೀರಿನ ಕೊರತೆ, ತೀವ್ರ ಸುಸ್ತು, ತಲೆನೋವು ಹಾಗೂ ಹೀಟ್ಸ್ಟ್ರೋಕ್ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ.ಹವಾಮಾನದಲ್ಲಾಗುವ ದಿಢೀರ್ ಬದಲಾವಣೆಯಿಂದ ವೈರಲ್ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟದ ತೊಂದರೆಗಳು ಮಕ್ಕಳಲ್ಲಿ ಮತ್ತು ವೃದ್ಧರಲ್ಲಿ ಹೆಚ್ಚಾಗುತ್ತಿವೆ.
ಇದನ್ನೂ ಓದಿ: ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ, ಬಸವಸಾಗರ ಭರ್ತಿ; ಕೆಆರ್ಎಸ್, ತುಂಗಭದ್ರಾ ಸ್ಥಿತಿಗತಿ ಇಲ್ಲಿದೆ
ಮತ್ತೊಂದೆಡೆ ಮಳೆ ಮುಂದುವರಿಯುತ್ತಿರುವುದರಿಂದ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಇದರಿಂದಾಗಿ ಡೆಂಗ್ಯೂ, ಚಿಕೂನ್ಗುನ್ಯಾ ಹಾಗೂ ಮಲೇರಿಯಾದಂತಹ ಕೀಟಜನ್ಯ ಮತ್ತು ನೀರುಜನ್ಯ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಂಭಾವ್ಯ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆರೋಗ್ಯ ಇಲಾಖೆಯು ಕಾರ್ಯಯೋಜನೆ ರೂಪಿಸಿದೆ:
1.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ಜೀವ ರಕ್ಷಕ ಔಷಧಿಗಳು, ಒಆರ್ಎಸ್ (ORS) ಪ್ಯಾಕೇಟ್ಗಳು ಹಾಗೂ ರಕ್ತ ಪರೀಕ್ಷಾ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ.
2.ಬೆಂಗಳೂರಿನ ಹವಾಮಾನ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ತಳಮಟ್ಟದಲ್ಲಿ ನಿಗಾವಹಿಸಲು ಆದೇಶಿಸಲಾಗಿದೆ.
3.ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು, ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು ಮನವಿ ಮಾಡಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:59 am, Thu, 10 September 26