AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್​ ಆ್ಯಂಬುಲೆನ್ಸ್​​ಗಳು

Bengaluru News: ಬೆಂಗಳೂರಿನ ಟ್ರಾಫಿಕ್ ದಟ್ಟಣೆಯಲ್ಲಿ ತುರ್ತು ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಸ್ಥಗಿತಗೊಂಡಿದ್ದ 'ಬೈಕ್ ಆ್ಯಂಬುಲೆನ್ಸ್' ಯೋಜನೆಯನ್ನು ರಾಜ್ಯದಲ್ಲಿ ಮರುಜಾರಿಗೊಳಿಸಲು ಆರೋಗ್ಯ ಇಲಾಖೆ ಮಹತ್ವದ ಸಿದ್ಧತೆ ನಡೆಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಬೈಕ್ ಆ್ಯಂಬುಲೆನ್ಸ್​​ಗಳು ಸೇವೆ ನೀಡುತ್ತಿವೆ. ಹೀಗಾಗಿ ನಮ್ಮಲ್ಲೂ ಈ ಸೇವೆಯನ್ನು ಆದಷ್ಟು ಬೇಗ ಮತ್ತೆ ಆರಂಭಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ.

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್​ ಆ್ಯಂಬುಲೆನ್ಸ್​​ಗಳು
ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
ವಿನಯ್​ ಕಾಶಪ್ಪನವರ್​
| Edited By: |

Updated on:Jun 24, 2026 | 5:24 PM

Share

ಮುಖ್ಯಾಂಶಗಳು

  • ಆರೋಗ್ಯ ಇಲಾಖೆಯಿಂದ ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​
  • ಬೈಕ್​​ ಆ್ಯಂಬುಲೆನ್ಸ್​​ ಸೇವೆ ಪುನರಾರಂಭಕ್ಕೆ ಇಲಾಖೆ ನಿರ್ಧಾರ
  • ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಚಿವ ಖಾದರ್​​

ಬೆಂಗಳೂರು, ಜೂನ್​​ 24: ಟ್ರಾಫಿಕ್​​ ಸಮಸ್ಯೆಯಿಂದ ಸಕಾಲಕ್ಕೆ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವುದು ಕಷ್ಟವಾಗುತ್ತಿರುವ ನಡುವೆ ಆರೋಗ್ಯ ಇಲಾಖೆ ಬೆಂಗಳೂರಿಗರಿಗೆ (Bengaluru) ಗುಡ್​​ ನ್ಯೂಸ್​​ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಬೈಕ್ ಆ್ಯಂಬ್ಯುಲೆನ್ಸ್ ಸೇವೆ ಪುನರಾರಂಭಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಕೂಡ ಬಹಳ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಖಾದರ್​​ ಆರೋಗ್ಯ ಸಚಿವರಾಗಿದ್ದ ವೇಳೆಯೇ ರಾಜ್ಯದಲ್ಲಿ ಬೈಕ್​​ ಆ್ಯಂಬುಲೆನ್ಸ್​​ ಸೇವೆ ಪರಿಚಯಿಸಲಾಗಿತ್ತು ಎಂಬುದಿಲ್ಲಿ ಗಮನಾರ್ಹ.

2015ರ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಬೈಕ್ ಆ್ಯಂಬ್ಯುಲೆನ್ಸ್​​ಗಳು ರಸ್ತೆಗಿಳಿದಿದ್ದವು. ರಾಜ್ಯದ್ಯಾಂತ ಒಟ್ಟು 30 ಬೈಕ್ ಆ್ಯಂಬ್ಯುಲೆನ್ಸ್ಗಳನ್ನು ಸೇವೆಗೆ ನಿಯೋಜಿಸಲಾಗಿತ್ತು. ಆದರೆ 8 ವರ್ಷಗಳ ಬಳಿಕ ಬೈಕ್ ರಿಪೇರಿಗೆ ಅನುದಾನದ ಕೊರತೆ, ಸಿಬ್ಬಂದಿ ಸಂಬಳದ ವಿಚಾರ ಸೇರಿ ನಾನಾ ಕಾರಣಗಳಿಂದಾಗಿ ಮಹತ್ವದ ಯೋಜನೆ ನಿಂತಿತ್ತು. ಇದೀಗ ರಾಜ್ಯದ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್​​ ಮತ್ತೆ ಅಧಿಕಾರ ಸ್ವೀಕಾರದ ಬೆನ್ನಲ್ಲೇ ಈ ಸೇವೆ ಪುನರಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸಚಿವರು ಅಧಿಕಾರಿಗಳ ಸಭೆ ಕೂಡ ನಡೆಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಬೈಕ್​​ ಆ್ಯಂಬುಲೆನ್ಸ್​​ಗಳ ವಿಶೇಷತೆ ಏನು?

  • ರೋಗಿಗಳಿಗೆ ಸುಲಭವಾಗಿ ತಕ್ಷಣ ಚಿಕಿತ್ಸೆ ಒದಗಿಸಲು ಸಾಧ್ಯ
  • ಟ್ರಾಫಿಕ್ ಸಮಯದಲ್ಲಿಯೂ ರೋಗಿಯ ಬಳಿ ಸುಲಭವಾಗಿ ತಲುಪಬಹುದು
  • ಆ್ಯಂಬುಲೆನ್ಸ್​​ಗಳ ಮಾದರಿಯಲ್ಲೇ ಇವು ಆಕ್ಸಿಜನ್ ಸಿಲಿಂಡರ್, ಫಸ್ಟ್ ಏಡ್ ಕಿಟ್, ಲೈಫ್ ಸೇವಿಂಗ್ ಮೆಡಿಸಿನ್, ಆಕ್ಸಿಮೀಟರ್, ಗ್ಲೂಕೋಮೀಟರ್, ಡ್ರೆಸಿಂಗ್ ಸಾಮಗ್ರಿಗಳನ್ನು ಹೊಂದಿರಲಿವೆ
  • ಕೆಲ ಬೈಕ್​​ಗಳಲ್ಲಿ ಸೈಡ್ ಕ್ಯಾರೇಜ್ ಅಳವಡಿಸುವ ಕಾರಣ ರೋಗಿ ಮಲಗಲು ಅನುಕೂಲ ಮಾಡುವ ವ್ಯವಸ್ಥೆಯೂ ಇರಲಿದೆ

ಯು.ಟಿ. ಖಾದರ್​​ ಮಾಹಿತಿ

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಯು.ಟಿ. ಖಾದರ್​​, 108 ಆ್ಯಂಬುಲೆನ್ಸ್ ಹಾಗೂ ಬೈಕ್ ಆ್ಯಂಬುಲೆನ್ಸ್ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಬೇರೆ ಬೇರೆ ರಾಜ್ಯಗಳಲ್ಲಿ ಬೈಕ್ ಆ್ಯಂಬುಲೆನ್ಸ್​​ಗಳು ಸೇವೆ ನೀಡುತ್ತಿವೆ. ಹೀಗಾಗಿ ನಮ್ಮಲ್ಲೂ ಈ ಸೇವೆಯನ್ನು ಆದಷ್ಟು ಬೇಗ ಮತ್ತೆ ಆರಂಭಿಸುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:19 pm, Wed, 24 June 26

Follow Us
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ