AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ಮಾರ್ಗಸೂಚಿ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ!

ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಹಾಗೂ ಎಕ್ಸ್‌ಪೈರಿ ಆಹಾರ ಪೂರೈಸುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅಡುಗೆ ಮನೆಗಳಲ್ಲಿ ನೈರ್ಮಲ್ಯ ಕಾಪಾಡುವುದು, ಗರಿಷ್ಠ 3 ತಿಂಗಳ ರೇಷನ್ ಸಂಗ್ರಹಣೆ ಹಾಗೂ ಪೌಷ್ಟಿಕಾಂಶ ಭರಿತ ಆಹಾರ ನೀಡುವುದನ್ನು ಕಡ್ಡಾಯಗೊಳಿಸಿ ಶೀಘ್ರವೇ ಪ್ರತ್ಯೇಕ ಆಹಾರ ಸುರಕ್ಷತಾ ಮಾರ್ಗಸೂಚಿ ಹೊರಡಿಸಲಾಗುತ್ತಿದೆ. ನಿಯಮ ಮೀರಿದರೆ ಹಾಸ್ಟೆಲ್ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ಮಾರ್ಗಸೂಚಿ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ!
ಯು ಟಿ ಖಾದರ್Image Credit source: PTI
ವಿನಯ್​ ಕಾಶಪ್ಪನವರ್​
| Edited By: |

Updated on: Aug 28, 2026 | 8:19 AM

Share

ಮುಖ್ಯಾಂಶಗಳು

  • ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಪ್ರತ್ಯೇಕ ನೂತನ ಮಾರ್ಗಸೂಚಿ ಜಾರಿಗೆ ಸಿದ್ಧತೆ.
  • ಕಳಪೆ ಮತ್ತು ಎಕ್ಸ್‌ಪೈರಿ ಆಹಾರ ಪದಾರ್ಥ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ.
  • ಗರಿಷ್ಠ ಮೂರು ತಿಂಗಳ ಅವಧಿಗೆ ಮಾತ್ರ ಆಹಾರ ಪದಾರ್ಥ ಸಂಗ್ರಹಣೆ.

ಬೆಂಗಳೂರು, ಆಗಸ್ಟ್ 28: ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾಲು ಸಾಲು ದೂರುಗಳು ಹಾಗೂ ಗಂಭೀರ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ರಾಜ್ಯ ಆರೋಗ್ಯ ಇಲಾಖೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಜೊತೆ ಆಟವಾಡುತ್ತಾ, ಬೇಕಾಬಿಟ್ಟಿ ಕಳಪೆ ಊಟ ನೀಡುತ್ತಿದ್ದ ಹಾಸ್ಟೆಲ್ ಆಡಳಿತ ಮಂಡಳಿಗಳಿಗೆ ಶಾಕ್ ನೀಡಲು ಸರ್ಕಾರ ಸಜ್ಜಾಗಿದ್ದು, ಶೀಘ್ರದಲ್ಲೇ ಸರ್ಕಾರಿ ಹಾಸ್ಟೆಲ್‌ಗಳಿಗಾಗಿಯೇ ಪ್ರತ್ಯೇಕ ‘ಆಹಾರ ಸುರಕ್ಷತಾ ಮಾರ್ಗಸೂಚಿ’ ಹೊರಡಿಸಲು ಸಿದ್ಧತೆ ನಡೆಸಿದೆ.

ಅಧಿಕಾರಿಗಳ ದಿಢೀರ್ ದಾಳಿ

ಕಳೆದ ಕೆಲವು ದಿನಗಳಿಂದ ಹಲವು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಹಾಗೂ ಅಶುಚಿತ್ವದ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (FSSAI) ಅಧಿಕಾರಿಗಳು ರಾಜ್ಯದ ಹಲವು ಹಾಸ್ಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಈ ತಪಾಸಣೆ ವೇಳೆ ಅಡುಗೆ ಮನೆಗಳಲ್ಲಿ ನೈರ್ಮಲ್ಯದ ತೀವ್ರ ಕೊರತೆ, ಕಳಪೆ ಮಟ್ಟದ ಸಾಮಗ್ರಿಗಳ ಬಳಕೆ ಹಾಗೂ ಹಲವೆಡೆ ದಿನಾಂಕ ಮುಗಿದ (Expired) ಆಹಾರ ಪದಾರ್ಥಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಅಡುಗೆ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಈ ಅಪಾಯಕಾರಿ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಈಗ ಹೊಸ ಕಟ್ಟುನಿಟ್ಟಿನ ನಿಯಮಾವಳಿ ರೂಪಿಸಲು ಮುಂದಾಗಿದೆ.

ಏನಿರಲಿದೆ ಹೊಸ ಆಹಾರ ಸುರಕ್ಷತಾ ಮಾರ್ಗಸೂಚಿಯಲ್ಲಿ?

  • ಆಹಾರ ಧಾನ್ಯ ಸಂಗ್ರಹಣೆಗೆ ಮಿತಿ: ಹಾಸ್ಟೆಲ್‌ಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ತಂದು ದಾಸ್ತಾನು ಮಾಡುವಂತಿಲ್ಲ. ಗರಿಷ್ಠ 3 ತಿಂಗಳ ಅವಧಿಗೆ ಬೇಕಾಗುವಷ್ಟು ಆಹಾರ ಸಾಮಗ್ರಿಗಳನ್ನು ಮಾತ್ರ ಖರೀದಿ ಮಾಡಲು ಅವಕಾಶವಿರುತ್ತದೆ.
  • ಅಡುಗೆ ಮನೆ ಸ್ವಚ್ಛತೆ ಕಡ್ಡಾಯ: ಆಹಾರ ತಯಾರಿಸುವ ಸ್ಥಳ, ತರಕಾರಿ ತೊಳೆಯುವ ಜಾಗ ಹಾಗೂ ಧಾನ್ಯ ಸಂಗ್ರಹಿಸುವ ಉಗ್ರಾಣಗಳಲ್ಲಿ ನೈರ್ಮಲ್ಯ ಕಾಪಾಡುವುದು ಕಡ್ಡಾಯ.
  • ಎಕ್ಸ್‌ಪೈರಿ ಪದಾರ್ಥಗಳಿಗೆ ಕಂಪ್ಲೀಟ್ ಬ್ರೇಕ್: ಅವಧಿ ಮೀರಿದ (Expired) ಯಾವುದೇ ಆಹಾರ ಪದಾರ್ಥಗಳನ್ನು ಬಳಸುವಂತಿಲ್ಲ. ನಿಯಮ ಮೀರಿ ಎಕ್ಸ್‌ಪೈರಿ ಸಾಮಗ್ರಿ ಬಳಸಿ ಅಡುಗೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
  • ಪೌಷ್ಟಿಕಾಂಶ ಭರಿತ ಸಮತೋಲಿತ ಆಹಾರ: ವಿದ್ಯಾರ್ಥಿಗಳ ವಯಸ್ಸು ಮತ್ತು ಆರೋಗ್ಯದ ಅಗತ್ಯಗಳಿಗೆ ಅನುಗುಣವಾಗಿ ಸಮತೋಲಿತ (Nutritional balance) ಆಹಾರ ಮೆನು ಸಿದ್ಧಪಡಿಸಲು ಸ್ಪಷ್ಟ ನಿರ್ದೇಶನ ನೀಡಲಾಗುತ್ತದೆ.

ಆರೋಗ್ಯ ಸಚಿವರ ಎಚ್ಚರಿಕೆ

“ಹಾಸ್ಟೆಲ್‌ಗಳು, ಪಿಜಿಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ನೈರ್ಮಲ್ಯ ಕಾಪಾಡದ ಮತ್ತು ಕಳಪೆ ಆಹಾರ ನೀಡುವ ಕೇಂದ್ರಗಳ ವಿರುದ್ಧ ದಾಳಿ ಮುಂದುವರಿಯಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.” ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ