AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್

ತಾಂತ್ರಿಕ ಸಲಹಾ ಸಮಿತಿ, ಕಾನ್ಪುರದ IIT ವರದಿ ನೀಡಿದೆ. ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೇಸ್ ಹೆಚ್ಚಳವಾಗಬಹುದು. ಈ ಹಿಂದೆಯೂ ಇವರೇ ಕೇಸ್ ಹೆಚ್ಚಳ ಬಗ್ಗೆ ವರದಿ‌ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.

ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್
ಡಾ ಸುಧಾಕರ್, ಆರೋಗ್ಯ ಸಚಿವ
TV9 Web
| Updated By: ಆಯೇಷಾ ಬಾನು|

Updated on:Jun 16, 2022 | 2:41 PM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ (Covid-19) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅಕ್ಟೋಬರ್‌ನಲ್ಲಿ ಕೊರೊನಾ ಪೀಕ್‌ಗೆ ಹೋಗುತ್ತೆಂಬ ಕಾನ್ಪುರದ ಐಐಟಿ ವರದಿ ಬಗ್ಗೆ ಸಚಿವ ಸುಧಾಕರ್(Dr K Sudhakar) ಪ್ರತಿಕ್ರಿಯೆ ನೀಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ, ಕಾನ್ಪುರದ IIT ವರದಿ ನೀಡಿದೆ. ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೇಸ್ ಹೆಚ್ಚಳವಾಗಬಹುದು. ಈ ಹಿಂದೆಯೂ ಇವರೇ ಕೇಸ್ ಹೆಚ್ಚಳ ಬಗ್ಗೆ ವರದಿ‌ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೊವಿಡ್ ತಳಿ ಸೌಮ್ಯ ಲಕ್ಷಣ ಹೊಂದಿದೆ. ಜನರು ಯಾವುದೇ ಆತಂಕ, ಭಯಪಡುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಬೆಂಗಳೂರಿನ 2 ಶಾಲೆಗಳಲ್ಲಿ ಕೊರೊನಾ ಸೋಂಕು ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಡಾ.ಕೆ.ಸುಧಾಕರ್, ಒಂದೆರಡು ಶಾಲೆಗಳಲ್ಲಿ ಕೊರೊನಾ ಕೇಸ್ ಕಾಣಿಸಿಕೊಂಡಿವೆ. ಕೊರೊನಾ ಕೇಸ್ ಕಾಣಿಸಿಕೊಂಡ ಶಾಲೆಗಳಿಗೆ ರಜೆ ನೀಡಿದ್ದಾರೆ. ಈಗಾಗಲೇ ಸ್ಪಷ್ಟವಾದ ನಿಯಮಾವಳಿಗಳನ್ನು ರೂಪಿಸಿದ್ದೇವೆ. ಮಕ್ಕಳು ಬರುವಾಗ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಪರಿಶೀಲನೆ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಕೊವಿಡ್ ನಿಯಮ ಪಾಲನೆ ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಗಾಂಧಿಗಳಿಗೆ ಈಡಿ ಸಮನ್ಸ್: ಬೆಂಗಳೂರಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ

ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ ಮಕ್ಕಳು, ಪೋಷಕರಿಗೆ ಮುಂಜಾಗ್ರತಾ ಕ್ರಮವಹಿಸಬೇಕು. ಕೊವಿಡ್ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳ್ಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು.

ಕೊರೋನಾಗೆ ಭಯಪಡದೇ ಮಕ್ಕಳು ಮತ್ತು ಪೋಷಕರು ಲಸಿಕೆ ಹಾಕಿಸಿಕೊಳ್ಳಬೇಕು. ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು.ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು. ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುಬೇಕು. ಕೋವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಮತ್ತು ಅಗತ್ಯ ಕ್ರಮ ಕೈಗೊಳ್ಳಬೇಕು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:41 pm, Thu, 16 June 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್