AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಿದೆ ಬಿಸಿಲ ಬೇಗೆ: ಹೀಟ್ ಸ್ಟ್ರೋಕ್ ಎದುರಿಸಲು ಆರೋಗ್ಯ ಇಲಾಖೆ ಸಜ್ಜು, ಏನೇನು ಕ್ರಮ? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಏರುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ತಡೆಗಟ್ಟಲು ಆರೋಗ್ಯ ಇಲಾಖೆ ಸಮರ ಸಾರಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ಗಳ ಮೀಸಲಾತಿ, ವೈದ್ಯರಿಗೆ ವಿಶೇಷ ತರಬೇತಿ ಹಾಗೂ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹವಾನಿಯಂತ್ರಿತ ವಾರ್ಡ್‌ಗಳನ್ನು ತೆರೆಯುವ ಮೂಲಕ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಹೆಚ್ಚುತ್ತಿದೆ ಬಿಸಿಲ ಬೇಗೆ: ಹೀಟ್ ಸ್ಟ್ರೋಕ್ ಎದುರಿಸಲು ಆರೋಗ್ಯ ಇಲಾಖೆ ಸಜ್ಜು, ಏನೇನು ಕ್ರಮ? ಇಲ್ಲಿದೆ ವಿವರ
ಸಾಂದರ್ಭಿಕ ಎಐ ಚಿತ್ರImage Credit source: MediaForge AI
ಗಣಪತಿ ಶರ್ಮಾ
|

Updated on: Apr 25, 2026 | 7:05 AM

Share

ಬೆಂಗಳೂರು, ಏಪ್ರಿಲ್ 25: ಕರ್ನಾಟದಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಬಳ್ಳಾರಿ, ಕಲಬುರಗಿ, ರಾಯಚೂರಿನಂತಹ ಜಿಲ್ಲೆಗಳಿಗೆ ಸೀಮಿತವಾಗಿದ್ದ ಉಷ್ಣ ಅಲೆ (Heat Wave) ಈಗ ಬೆಂಗಳೂರಿಗರನ್ನೂ (Bangalore) ಬೆವರಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಅತಿಯಾದ ಶಾಖದಿಂದ ಜನರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಆಸ್ಪತ್ರೆಗಳಲ್ಲಿ ‘ನಿರ್ವಹಣಾ ಕೊಠಡಿ’ ಸ್ಥಾಪನೆ

ಬಿಸಿಗಾಳಿ ಹಾಗೂ ಹೀಟ್ ಸ್ಟ್ರೋಕ್‌ನಿಂದ ಬಾಧಿತರಾಗುವವರಿಗೆ ತುರ್ತು ಚಿಕಿತ್ಸೆ ನೀಡಲು ಸರ್ಕಾರ ವಿಶೇಷ ಸುತ್ತೋಲೆ ಹೊರಡಿಸಿದೆ. ಜುಲೈ 31ರವರೆಗೆ ಜಾರಿಯಲ್ಲಿರುವಂತೆ ರಾಜ್ಯದಾದ್ಯಂತ ವಿಶೇಷ ವಾರ್ಡ್‌ಗಳನ್ನು ತೆರೆಯಲಾಗುತ್ತಿದೆ.

  • ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ಬೆಡ್‌ಗಳು
  • ತಾಲೂಕು ಆಸ್ಪತ್ರೆಗಳು: ತಲಾ 5 ಬೆಡ್‌ಗಳು
  • ಜಿಲ್ಲಾಸ್ಪತ್ರೆಗಳು: ತಲಾ 10 ಬೆಡ್‌ಗಳ ಪ್ರತ್ಯೇಕ ನಿರ್ವಹಣಾ ಕೊಠಡಿ

ಈ ಕೊಠಡಿಗಳಲ್ಲಿ ಫ್ಯಾನ್, ಏರ್ ಕೂಲರ್, ಐಸ್ ಕ್ಯೂಬ್ಸ್, ಥರ್ಮಾಮೀಟರ್ ಮತ್ತು ಓಆರ್‌ಎಸ್ (ORS) ಕಾರ್ನರ್‌ಗಳನ್ನು ಕಡ್ಡಾಯವಾಗಿ ಸ್ಥಾಪಿಸಲು ಸೂಚಿಸಲಾಗಿದೆ.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈಗಾಗಲೇ 5 ಬೆಡ್‌ಗಳ ಪ್ರತ್ಯೇಕ ‘ಹೀಟ್ ಸ್ಟ್ರೋಕ್ ವಾರ್ಡ್’ ಸಜ್ಜಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆಯ ಡೀನ್ ಡಾ. ಲಕ್ಷ್ಮೀಪತಿ ಅವರು, ‘ಬಿಸಿಲಿನಿಂದ ಅಸ್ವಸ್ಥರಾಗುವವರಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧಿಗಳು ಹಾಗೂ ತಂಪಾದ ವಾತಾವರಣದ ವ್ಯವಸ್ಥೆ ಮಾಡಲಾಗಿದೆ’ ಎಂದಿದ್ದಾರೆ. ಇದೇ ರೀತಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಾಣಿ-ಪಕ್ಷಿಗಳಿಗೂ ಹಸಿರು ರಕ್ಷಣೆ

ಬಿಸಿಲಿನ ಪ್ರಭಾವ ಕೇವಲ ಮನುಷ್ಯರ ಮೇಲಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳ ಮೇಲೂ ಆಗುತ್ತಿದೆ. ಬೆಳಗಾವಿಯ ಪಕ್ಷಿ ಸಂಗ್ರಹಾಲಯದಲ್ಲಿ ಸ್ಪ್ರಿಂಕ್ಲರ್‌ಗಳ (Sprinklers) ವ್ಯವಸ್ಥೆ ಮಾಡಲಾಗಿದ್ದು, ಪಕ್ಷಿಗಳ ಆಹಾರ ಕ್ರಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಹತ್ವದ ಬದಲಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಎಲ್ಲಾ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೀಟ್ ಸ್ಟ್ರೋಕ್ ನಿರ್ವಹಣೆ ಕುರಿತು ತರಬೇತಿ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ