AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚುತ್ತಿದೆ ಬೇಸಿಗೆ: ಮುಂದಿನ 7 ದಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು

ರಾಜ್ಯದಲ್ಲಿ ಬೇಸಿಗೆಯ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗಿದ್ದು, ಗರಿಷ್ಠ ತಾಪಮಾನ 34°C ತಲುಪಲಿದೆ. ಕಲಬುರಗಿ, ವಿಜಯಪುರದಲ್ಲಿ ಬಿಸಿಲಿನ ಬೇಗೆ ಹೆಚ್ಚು. UV ಇಂಡೆಕ್ಸ್ 9 ರಷ್ಟಿದ್ದು, ಬಿಸಿ ಗಾಳಿಯ ಎಚ್ಚರಿಕೆಯಿದೆ. ಕರಾವಳಿ ಭಾಗದಲ್ಲಿ ಆರ್ದ್ರತೆ ಹೆಚ್ಚಿ ಸೆಖೆಯ ಅನುಭವವಾಗಲಿದೆ. ಮುಂದಿನ 7 ದಿನಗಳ ಕಾಲ ತಾಪಮಾನ ಮತ್ತಷ್ಟು ಹೆಚ್ಚಲಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬೇಸಿಗೆ: ಮುಂದಿನ 7 ದಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 02, 2026 | 7:09 AM

Share

ಬೆಂಗಳೂರು, ಮಾ.2: ರಾಜ್ಯದಲ್ಲಿ ಬೇಸಿಗೆಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಇಂದಿನ ವರದಿಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮೋಡಕವಿದ ವಾತಾವರಣ ಇರಲಿದೆ. ಕರ್ನಾಟಕದಲ್ಲಿ ಇಂದು ಗರಿಷ್ಠ ತಾಪಮಾನ 34°C ವರೆಗೆ ದಾಖಲಾಗುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನ 22°C ಇರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದೆ. ಆಗ್ನೇಯ ದಿಕ್ಕಿನಿಂದ ಗಂಟೆಗೆ ಸುಮಾರು 6 ಮೈಲಿ (6 mph) ವೇಗದಲ್ಲಿ ಗಾಳಿ ಬೀಸಲಿದೆ.

ಇಂದು ಯುವಿ ಇಂಡೆಕ್ಸ್ 9 ರಷ್ಟಿದ್ದು, ಇದು ಅತ್ಯಂತ ಹೆಚ್ಚಾಗಿದೆ. ಮಧ್ಯಾಹ್ನದ ಸಮಯದಲ್ಲಿ ನೇರ ಸೂರ್ಯನ ಕಿರಣಗಳಿಂದ ರಕ್ಷಣೆ ಪಡೆಯುವುದು ಅಗತ್ಯ. ನಗರದಲ್ಲಿ ಗರಿಷ್ಠ 32°C ತಾಪಮಾನ ಇರಲಿದ್ದು, ಹವಾಮಾನವು ಶುಭ್ರವಾಗಿರಲಿದೆ. ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಿರಲಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಆರ್ದ್ರತೆ (Humidity) ಹೆಚ್ಚಿರಲಿದ್ದು, ಸೆಖೆಯ ಅನುಭವವಾಗಲಿದೆ. ಮಂಗಳೂರಿನಲ್ಲಿ ಅತಿಯಾದ ಸೆಖೆ ಮತ್ತು ಬೆವರಿನ ಅನುಭವ. ವಾರದ ಅಂತ್ಯದಲ್ಲಿ ಸಾಧಾರಣ ಮೋಡಕವಿದ ವಾತಾವರಣವಿರಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹವಾಮಾನವು ಆಹ್ಲಾದಕರವಾಗಿದ್ದರೂ ಮಧ್ಯಾಹ್ನ ಬಿಸಿಲು ಹೆಚ್ಚಿರಲಿದೆ. ಇನ್ನು ಇಲ್ಲಿನ ಸ್ಥಿತಿ ಶುಷ್ಕ ಹವೆ ಹಾಗೂ ಮಳೆಯ ಸಾಧ್ಯತೆ ಇಲ್ಲ. ಇನ್ನು ಬೆಳಗಾವಿಯಲ್ಲಿ ಬೆಳಗಾವಿಯಲ್ಲಿ ಬೆಳಿಗ್ಗೆ ಮತ್ತು ರಾತ್ರಿ ತಂಪು ಹವೆ ಇರಲಿದ್ದು, ಮಧ್ಯಾಹ್ನ ತಾಪಮಾನ ಏರಿಕೆಯಾಗಲಿದೆ. ರಾಜ್ಯದ ಅತ್ಯಂತ ಬಿಸಿಲಿನ ಜಿಲ್ಲೆಯಾಗಿರುವ ಕಲಬುರ್ಗಿಯಲ್ಲಿ ಬಿಸಿ ಗಾಳಿಯ (Heat Wave) ಎಚ್ಚರಿಕೆ ನೀಡಲಾಗಿದೆ. ಕಾಫಿ ನಾಡಿನಲ್ಲಿ ಹವಾಮಾನವು ಇತರೆ ಜಿಲ್ಲೆಗಳಿಗಿಂತ ತಂಪಾಗಿರಲಿದೆ.

ಇದನ್ನೂ ಓದಿ: ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?

ರಾಜ್ಯದಲ್ಲಿ ಬೇಸಿಗೆಯ ಪ್ರತಾಪ ತಾರಕಕ್ಕೇರಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶವು ಸರಾಸರಿಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ (ಬೆಂಗಳೂರು, ಮೈಸೂರು)ಹವಾಮಾನವು ಶುಷ್ಕವಾಗಿರಲಿದ್ದು, ಮಧ್ಯಾಹ್ನದ ವೇಳೆ ತೀವ್ರ ಬಿಸಿಲು ಇರಲಿದೆ. ಮಳೆಯ ಸಾಧ್ಯತೆ ತೀರಾ ಕಡಿಮೆ. ಉತ್ತರ ಒಳನಾಡು ಪ್ರದೇಶದಲ್ಲಿ (ಕಲಬುರಗಿ, ರಾಯಚೂರು) ಇಲ್ಲಿ ಉಷ್ಣಾಂಶವು 38°C ದಾಟುವ ಸಾಧ್ಯತೆ ಇದೆ. ಬಿಸಿ ಗಾಳಿಯ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ (ಮಂಗಳೂರು, ಉಡುಪಿ) ಗರಿಷ್ಠ ತಾಪಮಾನ 33°C ಇದ್ದರೂ, ಆರ್ದ್ರತೆ (Humidity) ಹೆಚ್ಚಿರುವ ಕಾರಣ ಅತಿಯಾದ ಸೆಖೆ ಮತ್ತು ಬೆವರಿನ ಅನುಭವವಾಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ