AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ

ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಗೋವಧೆ ಆರೋಪ ಕೇಳಿಬಂದಿತ್ತು. ಗೋ ಗ್ಯಾನ್ ಫೌಂಡೇಷನ್ ಈ ಸಂಬಂಧ ಪಿಐಎಲ್ ಸಲ್ಲಿಸಿತ್ತು. ಇದೀಗ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸಲು ಸೂಚನೆ ಕೊಡಲಾಗಿದೆ.

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on: Dec 01, 2021 | 4:56 PM

Share

ಬೆಂಗಳೂರು: ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ಕೊಟ್ಟಿದೆ. ಎಲ್ಲಾ ಜಿಲ್ಲೆಗಳಲ್ಲೂ ಅಕ್ರಮ ಪ್ರಾಣಿವಧೆ ತಡೆಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಗೋವಧೆ ಆರೋಪ ಕೇಳಿಬಂದಿತ್ತು. ಗೋ ಗ್ಯಾನ್ ಫೌಂಡೇಷನ್ ಈ ಸಂಬಂಧ ಪಿಐಎಲ್ ಸಲ್ಲಿಸಿತ್ತು. ಇದೀಗ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸಲು ಸೂಚನೆ ಕೊಡಲಾಗಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಮೌಲ್ಯಮಾಪನಕ್ಕೆ ಆದೇಶ ಹೊರಡಿಸಲಾಗಿದೆ. ಯೋಜನೆಯ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ನಿರ್ದೇಶನ ಸಿಕ್ಕಿದ್ದು 40 ವರ್ಷಗಳಿಂದ ಬಾಕಿಯಿರುವ ರೈಲು ಯೋಜನೆ ಪ್ರಶ್ನಿಸಿ ಕೆಲ ಪರಿಸರ ಸಂರಕ್ಷಣಾ ಸಂಘಗಳು ಪಿಐಎಲ್ ಸಲ್ಲಿಸಿದ್ದವು. ಹೈಕೋರ್ಟ್ ರಾಜ್ಯ ವನ್ಯಜೀವಿ ಮಂಡಳಿ ಆದೇಶಕ್ಕೆ ತಡೆ ನೀಡಿತ್ತು. ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೇ ಸಲ್ಲಿಸಲಾಗಿತ್ತು. ಅಂದಿನಿಂದಲೂ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣಹೋಮವಾಗುತ್ತದೆ.

ರೈಲು ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದೆ. ಒಂದು ವೇಳೆ ಯೋಜನೆಗೆ ಅನುಮೋದನೆ ದೊರೆತರೆ ಅಳಿವಿನಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರಲಿದೆ. ಅಲ್ಲದೇ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಇದು ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದ್ದು, ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂಬುದು ಪರಿಸರವಾದಿಗಳು ಮತ್ತು ವನ್ಯಜೀವಿ ಪ್ರಿಯರ ವಾದವಾಗಿದೆ. ಹೀಗಾಗಿ ಈ ಯೋಜನೆ ಬಗ್ಗೆ ವಿರೋಧವಿತ್ತು. ಸದ್ಯ ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ.

ಇದನ್ನೂ ಓದಿ: Crime News: ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನ ಬೆನ್ನತ್ತಿದ ಯುವಕರು, ಲಾರಿ ಚಾಲಕನ ಅಜಾಗ್ರತೆಯಿಂದ ಉರುಳಿದ 9 ಕಂಬ

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?