AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ

ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್ ಮತ್ತು ಕಬ್ಬನ್​ಪಾರ್ಕ್​ನಲ್ಲಿ ನಾಯಿಕಾಟ
TV9 Web
| Edited By: |

Updated on: Dec 09, 2021 | 7:22 PM

Share

ಬೆಂಗಳೂರು: ಕಬ್ಬನ್​ಪಾರ್ಕ್​ಗೆ ನಾಯಿಗಳ ಪ್ರವೇಶದ ಬಗ್ಗೆ ಹೈಕೋರ್ಟ್​ ವಿಭಾಗೀಯಪೀಠ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಬೀದಿನಾಯಿ ಮತ್ತು ಸಾಕುನಾಯಿಗಳ ಮಲ ವಿಸರ್ಜನೆ ಕಬ್ಬನ್​ಪಾರ್ಕ್​ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ವಿದೇಶಗಳಲ್ಲಿ ನಾಯಿಗಳ ಮಲವನ್ನು ಮಾಲೀಕರೇ ಶುಚಿಗೊಳಿಸುತ್ತಾರೆ. ಆದರೆ ಇಲ್ಲಿ ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್ ಉದ್ಯಾನವನದಲ್ಲಿ ಬೀದಿನಾಯಿಗಳ ಹಾವಳಿಯಿಂದ ಆಗುತ್ತಿರುವ ತೊಂದರೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನಾಯಿಮಾಲೀಕರ ವರ್ತನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಾಕುನಾಯಿಗಳನ್ನು ಉದ್ಯಾನದೊಳಗೆ ಕರೆತರುವ ಕೆಲ ಮಾಲೀಕರು ಮಲ-ಮೂತ್ರ ವಿಸರ್ಜನೆ ಮಾಡಿಸುತ್ತಿದ್ದಾರೆ. ಸಾಕುನಾಯಿಗಳನ್ನು ನೋಡಿ ಬೀದಿನಾಯಿಗಳೂ ಕಬ್ಬನ್​ಪಾರ್ಕ್​ಗೆ ನುಗ್ಗುತ್ತಿವೆ. ಪಾರ್ಕ್​ನಲ್ಲಿ ನಾಯಿಗಳ ಪ್ರವೇಶಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಅಗತ್ಯಕ್ರಮ ತೆಗೆದುಕೊಳ್ಳಬೇಕು. ಜರುಗಿಸಿದ ಕ್ರಮದ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಬೇಕು ಎಂದು ಸಿಜೆ ರಿತುರಾಜ್ ಅವಸ್ತಿ ಸೂಚಿಸಿದರು.

ನಾಯಿಗಳು ಕಬ್ಬನ್​ಪಾರ್ಕ್​ನಲ್ಲಿ ಮುಕ್ತವಾಗಿ ಸಂಚರಿಸುತ್ತಿರುವುದರಿಂದ ಜನರಿಗೆ ಓಡಾಡಲು, ಮಕ್ಕಳು ಆಟವಾಡಲು ಕಷ್ಟವಾಗುತ್ತಿದೆ. ಕೆಲವರು ಪಾರ್ಕ್​ನಲ್ಲಿಯೇ ಬೀದಿನಾಯಿಗಳಿಗೆ ಆಹಾರ ಕೊಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಅಂಥವರು ಬಾರದಿದ್ದಾಗ ಹಸಿವಿನಿಂದ ಸಿಟ್ಟಿಗೇಳುವ ನಾಯಿಗಳು ಜನರ ಮೇಲೆ ದಾಳಿ ಮಾಡುತ್ತಿವೆ. ಇಂಥ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಬಿಬಿಎಂಪಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸದಿದ್ದರೆ ಹೈಕೋರ್ಟ್​ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉದ್ಯಾನವನದ ಬಿದಿರು ಮೆಳೆಗಳನ್ನು ಈಗಾಗಲೇ ಸಾಕಷ್ಟು ನಾಯಿಗಳು ತಮ್ಮ ವಾಸಸ್ಥಳ ಮಾಡಿಕೊಂಡಿವೆ. ಈ ನಾಯಿಗಳನ್ನು ಹಿಡಿದು ಹೊರಗೆ ಸಾಗಿಸುವುದು ಮತ್ತು ಮತ್ತೊಮ್ಮೆ ನಾಯಿಗಳು ಉದ್ಯಾನಕ್ಕೆ ಬಾರದಂತೆ ತಡೆಯುವುದು ಸವಾಲಿನ ಕೆಲಸ. ಕಬ್ಬನ್​ಪಾರ್ಕ್​​ನಲ್ಲಿ ನಾಯಿಗಳ ಪ್ರವೇಶ ನಿರ್ಬಂಧಿಸುವ ಆದೇಶ ಜಾರಿಗೊಳಿಸುವುದು ಸಹ ಸುಲಭವಲ್ಲ. ಕಬ್ಬನ್ ಉದ್ಯಾನಕ್ಕೆ ವೆಂಕಟಪ್ಪ ಆರ್ಟ್ ಗ್ಯಾಲರಿ, ಪ್ರೆಸ್​ಕ್ಲಬ್, ಹೈಕೋರ್ಟ್ ಸೇರಿದಂತೆ ಹಲವೆಡೆಗಳಿಂದ ಪ್ರವೇಶಕ್ಕೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನೂ ಓದಿ: ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ! ಇದನ್ನೂ ಓದಿ: ಪೊಲೀಸರನ್ನ ನಾಯಿಗೆ ಹೋಲಿಕೆ! ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ