AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ

ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್ ಮತ್ತು ಕಬ್ಬನ್​ಪಾರ್ಕ್​ನಲ್ಲಿ ನಾಯಿಕಾಟ
TV9 Web
| Edited By: |

Updated on: Dec 09, 2021 | 7:22 PM

Share

ಬೆಂಗಳೂರು: ಕಬ್ಬನ್​ಪಾರ್ಕ್​ಗೆ ನಾಯಿಗಳ ಪ್ರವೇಶದ ಬಗ್ಗೆ ಹೈಕೋರ್ಟ್​ ವಿಭಾಗೀಯಪೀಠ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಬೀದಿನಾಯಿ ಮತ್ತು ಸಾಕುನಾಯಿಗಳ ಮಲ ವಿಸರ್ಜನೆ ಕಬ್ಬನ್​ಪಾರ್ಕ್​ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ವಿದೇಶಗಳಲ್ಲಿ ನಾಯಿಗಳ ಮಲವನ್ನು ಮಾಲೀಕರೇ ಶುಚಿಗೊಳಿಸುತ್ತಾರೆ. ಆದರೆ ಇಲ್ಲಿ ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್ ಉದ್ಯಾನವನದಲ್ಲಿ ಬೀದಿನಾಯಿಗಳ ಹಾವಳಿಯಿಂದ ಆಗುತ್ತಿರುವ ತೊಂದರೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನಾಯಿಮಾಲೀಕರ ವರ್ತನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಾಕುನಾಯಿಗಳನ್ನು ಉದ್ಯಾನದೊಳಗೆ ಕರೆತರುವ ಕೆಲ ಮಾಲೀಕರು ಮಲ-ಮೂತ್ರ ವಿಸರ್ಜನೆ ಮಾಡಿಸುತ್ತಿದ್ದಾರೆ. ಸಾಕುನಾಯಿಗಳನ್ನು ನೋಡಿ ಬೀದಿನಾಯಿಗಳೂ ಕಬ್ಬನ್​ಪಾರ್ಕ್​ಗೆ ನುಗ್ಗುತ್ತಿವೆ. ಪಾರ್ಕ್​ನಲ್ಲಿ ನಾಯಿಗಳ ಪ್ರವೇಶಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಅಗತ್ಯಕ್ರಮ ತೆಗೆದುಕೊಳ್ಳಬೇಕು. ಜರುಗಿಸಿದ ಕ್ರಮದ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಬೇಕು ಎಂದು ಸಿಜೆ ರಿತುರಾಜ್ ಅವಸ್ತಿ ಸೂಚಿಸಿದರು.

ನಾಯಿಗಳು ಕಬ್ಬನ್​ಪಾರ್ಕ್​ನಲ್ಲಿ ಮುಕ್ತವಾಗಿ ಸಂಚರಿಸುತ್ತಿರುವುದರಿಂದ ಜನರಿಗೆ ಓಡಾಡಲು, ಮಕ್ಕಳು ಆಟವಾಡಲು ಕಷ್ಟವಾಗುತ್ತಿದೆ. ಕೆಲವರು ಪಾರ್ಕ್​ನಲ್ಲಿಯೇ ಬೀದಿನಾಯಿಗಳಿಗೆ ಆಹಾರ ಕೊಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಅಂಥವರು ಬಾರದಿದ್ದಾಗ ಹಸಿವಿನಿಂದ ಸಿಟ್ಟಿಗೇಳುವ ನಾಯಿಗಳು ಜನರ ಮೇಲೆ ದಾಳಿ ಮಾಡುತ್ತಿವೆ. ಇಂಥ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಬಿಬಿಎಂಪಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸದಿದ್ದರೆ ಹೈಕೋರ್ಟ್​ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉದ್ಯಾನವನದ ಬಿದಿರು ಮೆಳೆಗಳನ್ನು ಈಗಾಗಲೇ ಸಾಕಷ್ಟು ನಾಯಿಗಳು ತಮ್ಮ ವಾಸಸ್ಥಳ ಮಾಡಿಕೊಂಡಿವೆ. ಈ ನಾಯಿಗಳನ್ನು ಹಿಡಿದು ಹೊರಗೆ ಸಾಗಿಸುವುದು ಮತ್ತು ಮತ್ತೊಮ್ಮೆ ನಾಯಿಗಳು ಉದ್ಯಾನಕ್ಕೆ ಬಾರದಂತೆ ತಡೆಯುವುದು ಸವಾಲಿನ ಕೆಲಸ. ಕಬ್ಬನ್​ಪಾರ್ಕ್​​ನಲ್ಲಿ ನಾಯಿಗಳ ಪ್ರವೇಶ ನಿರ್ಬಂಧಿಸುವ ಆದೇಶ ಜಾರಿಗೊಳಿಸುವುದು ಸಹ ಸುಲಭವಲ್ಲ. ಕಬ್ಬನ್ ಉದ್ಯಾನಕ್ಕೆ ವೆಂಕಟಪ್ಪ ಆರ್ಟ್ ಗ್ಯಾಲರಿ, ಪ್ರೆಸ್​ಕ್ಲಬ್, ಹೈಕೋರ್ಟ್ ಸೇರಿದಂತೆ ಹಲವೆಡೆಗಳಿಂದ ಪ್ರವೇಶಕ್ಕೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನೂ ಓದಿ: ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ! ಇದನ್ನೂ ಓದಿ: ಪೊಲೀಸರನ್ನ ನಾಯಿಗೆ ಹೋಲಿಕೆ! ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ