AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ

ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್​ನಲ್ಲಿ ನಾಯಿ ಕಾಟ ತಡೆಗೆ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್ ಮತ್ತು ಕಬ್ಬನ್​ಪಾರ್ಕ್​ನಲ್ಲಿ ನಾಯಿಕಾಟ
TV9 Web
| Edited By: |

Updated on: Dec 09, 2021 | 7:22 PM

Share

ಬೆಂಗಳೂರು: ಕಬ್ಬನ್​ಪಾರ್ಕ್​ಗೆ ನಾಯಿಗಳ ಪ್ರವೇಶದ ಬಗ್ಗೆ ಹೈಕೋರ್ಟ್​ ವಿಭಾಗೀಯಪೀಠ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಬೀದಿನಾಯಿ ಮತ್ತು ಸಾಕುನಾಯಿಗಳ ಮಲ ವಿಸರ್ಜನೆ ಕಬ್ಬನ್​ಪಾರ್ಕ್​ನಲ್ಲಿ ದೊಡ್ಡ ಸಮಸ್ಯೆಯಾಗಿದೆ. ವಿದೇಶಗಳಲ್ಲಿ ನಾಯಿಗಳ ಮಲವನ್ನು ಮಾಲೀಕರೇ ಶುಚಿಗೊಳಿಸುತ್ತಾರೆ. ಆದರೆ ಇಲ್ಲಿ ವಿದ್ಯಾವಂತರೇ ನಾಯಿಗಳನ್ನು ಮಲವಿಸರ್ಜನೆಗೆ ಕರೆತರುತ್ತಾರೆ. ಇದನ್ನು ತಡೆಯಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅಭಿಪ್ರಾಯಪಟ್ಟರು.

ಕಬ್ಬನ್​ಪಾರ್ಕ್ ಉದ್ಯಾನವನದಲ್ಲಿ ಬೀದಿನಾಯಿಗಳ ಹಾವಳಿಯಿಂದ ಆಗುತ್ತಿರುವ ತೊಂದರೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನಾಯಿಮಾಲೀಕರ ವರ್ತನೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಾಕುನಾಯಿಗಳನ್ನು ಉದ್ಯಾನದೊಳಗೆ ಕರೆತರುವ ಕೆಲ ಮಾಲೀಕರು ಮಲ-ಮೂತ್ರ ವಿಸರ್ಜನೆ ಮಾಡಿಸುತ್ತಿದ್ದಾರೆ. ಸಾಕುನಾಯಿಗಳನ್ನು ನೋಡಿ ಬೀದಿನಾಯಿಗಳೂ ಕಬ್ಬನ್​ಪಾರ್ಕ್​ಗೆ ನುಗ್ಗುತ್ತಿವೆ. ಪಾರ್ಕ್​ನಲ್ಲಿ ನಾಯಿಗಳ ಪ್ರವೇಶಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಅಗತ್ಯಕ್ರಮ ತೆಗೆದುಕೊಳ್ಳಬೇಕು. ಜರುಗಿಸಿದ ಕ್ರಮದ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಬೇಕು ಎಂದು ಸಿಜೆ ರಿತುರಾಜ್ ಅವಸ್ತಿ ಸೂಚಿಸಿದರು.

ನಾಯಿಗಳು ಕಬ್ಬನ್​ಪಾರ್ಕ್​ನಲ್ಲಿ ಮುಕ್ತವಾಗಿ ಸಂಚರಿಸುತ್ತಿರುವುದರಿಂದ ಜನರಿಗೆ ಓಡಾಡಲು, ಮಕ್ಕಳು ಆಟವಾಡಲು ಕಷ್ಟವಾಗುತ್ತಿದೆ. ಕೆಲವರು ಪಾರ್ಕ್​ನಲ್ಲಿಯೇ ಬೀದಿನಾಯಿಗಳಿಗೆ ಆಹಾರ ಕೊಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಅಂಥವರು ಬಾರದಿದ್ದಾಗ ಹಸಿವಿನಿಂದ ಸಿಟ್ಟಿಗೇಳುವ ನಾಯಿಗಳು ಜನರ ಮೇಲೆ ದಾಳಿ ಮಾಡುತ್ತಿವೆ. ಇಂಥ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಬಿಬಿಎಂಪಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸದಿದ್ದರೆ ಹೈಕೋರ್ಟ್​ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉದ್ಯಾನವನದ ಬಿದಿರು ಮೆಳೆಗಳನ್ನು ಈಗಾಗಲೇ ಸಾಕಷ್ಟು ನಾಯಿಗಳು ತಮ್ಮ ವಾಸಸ್ಥಳ ಮಾಡಿಕೊಂಡಿವೆ. ಈ ನಾಯಿಗಳನ್ನು ಹಿಡಿದು ಹೊರಗೆ ಸಾಗಿಸುವುದು ಮತ್ತು ಮತ್ತೊಮ್ಮೆ ನಾಯಿಗಳು ಉದ್ಯಾನಕ್ಕೆ ಬಾರದಂತೆ ತಡೆಯುವುದು ಸವಾಲಿನ ಕೆಲಸ. ಕಬ್ಬನ್​ಪಾರ್ಕ್​​ನಲ್ಲಿ ನಾಯಿಗಳ ಪ್ರವೇಶ ನಿರ್ಬಂಧಿಸುವ ಆದೇಶ ಜಾರಿಗೊಳಿಸುವುದು ಸಹ ಸುಲಭವಲ್ಲ. ಕಬ್ಬನ್ ಉದ್ಯಾನಕ್ಕೆ ವೆಂಕಟಪ್ಪ ಆರ್ಟ್ ಗ್ಯಾಲರಿ, ಪ್ರೆಸ್​ಕ್ಲಬ್, ಹೈಕೋರ್ಟ್ ಸೇರಿದಂತೆ ಹಲವೆಡೆಗಳಿಂದ ಪ್ರವೇಶಕ್ಕೆ ಅವಕಾಶವಿದೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನೂ ಓದಿ: ನಾಯಿ ವಿಚಾರಕ್ಕೆ ಕಿರಿಕ್, ಬೆಂಗಳೂರಿನ ವ್ಯಕ್ತಿಯ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ ಯುವಕ! ಇದನ್ನೂ ಓದಿ: ಪೊಲೀಸರನ್ನ ನಾಯಿಗೆ ಹೋಲಿಕೆ! ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ