AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ನಡೆಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ, ನ್ಯಾ. ಎನ್.ಎಸ್. ಸಂಜಯ್ ಗೌಡರಿದ್ದ ಪೀಠ ಆದೇಶ ನೀಡಿದೆ.

ಕೊವಿಡ್​ನಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ನಡೆಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jul 28, 2021 | 8:07 PM

Share

ಬೆಂಗಳೂರು: ಕೊರೊನಾ ವೈರಸ್ ಸೋಂಕಿನಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ‌ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಕೊವಿಡ್ ಕಾರಣದಿಂದ ಕಲಿಕೆಯಿಂದ ವಂಚಿತರಾದ ಮಕ್ಕಳ ಬಗ್ಗೆ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದು ಬಿಬಿಎಂಪಿಗೆ ಸೂಚಿಸಲಾಗಿದೆ.

ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಹೀಗೆ ಹೇಳಿದೆ. ಗ್ರಾಮೀಣ ಭಾಗದ 3 ರಿಂದ 6 ವರ್ಷದ ಒಳಗಿನ 1,26,245 ಮಕ್ಕಳು, 6 ರಿಂದ 18 ವರ್ಷದ ಒಳಗಿನ 33,344 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ನಗರಗಳಲ್ಲಿ 6 ರಿಂದ 18 ವರ್ಷದ 8,718 ಮಕ್ಕಳು ಶಾಲೆಗೆ ಹೋಗ್ತಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆಯನ್ನೇ ನಡೆಸಲಾಗಿಲ್ಲ ಎಂದು ಹೈಕೋರ್ಟ್​ಗೆ ಅಮಿಕಸ್ ಕ್ಯೂರಿ ಕೆ.ಎನ್. ಫಣೀಂದ್ರ ಮಾಹಿತಿ ನೀಡಿದ್ದಾರೆ.

ಹೀಗಾಗಿ ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ, ನ್ಯಾ. ಎನ್.ಎಸ್. ಸಂಜಯ್ ಗೌಡರಿದ್ದ ಪೀಠ ಆದೇಶ ನೀಡಿದೆ.

ಕೊವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಂದ‌ ದುಬಾರಿ ಶುಲ್ಕ; ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ ಕೊವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಂದ‌ ದುಬಾರಿ ಶುಲ್ಕ ಹಿನ್ನೆಲೆಯಲ್ಲಿ ದೂರು ಪರಿಹಾರ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಿ ಕೋಟಾದ ಬೆಡ್​ಗಳಿಗೂ ಶುಲ್ಕ ವಸೂಲಿ ಮಾಡಲಾಗಿದೆ. ಹೀಗೆ ಶುಲ್ಕ ವಸೂಲಿ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ಹೈಕೋರ್ಟ್​ಗೆ ವಕೀಲ‌ ಶ್ರೀಧರ್ ಪ್ರಭು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣ ದೂರು ಪರಿಹಾರ ಸಮಿತಿ ರಚನೆಗೆ ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಿ ಎಂದು ಹೇಳಿ, ವಿಶೇಷ ಲಸಿಕಾ ಅಭಿಯಾನ ನಡೆಸಲು ಕೂಡ ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: Covid 19 Updates: ದೇಶದಲ್ಲಿ ಇಂದು ಮತ್ತೆ 40 ಸಾವಿರ ದಾಟಿದ ಕೊರೊನಾ ಕೇಸ್​​; 640 ಮಂದಿ ಸಾವು

Tokyo Olympic: ಒಲಂಪಿಕ್ಸ್ ಆರಂಭವಾದ ಬಳಿಕ ಟೋಕಿಯೊದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಒಂದೇ ದಿನ 3,177 ಜನರಿಗೆ ಸೋಂಕು

(Karnataka High Court directs BBMP to conduct Survey on School Childrens who left School due to Covid19)

Published On - 7:58 pm, Wed, 28 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ