AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಪ್ರಕರಣ; ಕೆಲ ವಕೀಲರ ವಿರುದ್ಧ ಸಿಐಡಿ ತನಿಖೆ, ಎಫ್ಎಸ್ಎಲ್ ಪರಿಶೀಲನೆಗೆ ಹೈಕೋರ್ಟ್ ಅಸ್ತು

ಒಂದೇ ತಿಂಗಳಲ್ಲಿ ಆ ನಕಲಿ ಮಾಲೀಕರು, ನಕಲಿ ಬಾಡಿಗೆದಾರರೊಂದಿಗೆ ರಾಜಿ ಸಂಧಾನ ಮಾಡಿಕೊಂಡು ಕೇಸನ್ನು ಇತ್ಯರ್ಥ ಪಡಿಸಿಕೊಂಡು ಇದಕ್ಕೆ ಕೋರ್ಟ್ ಡಿಕ್ರಿ ಪಡೆದಿದ್ದರು.

ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಪ್ರಕರಣ; ಕೆಲ ವಕೀಲರ ವಿರುದ್ಧ ಸಿಐಡಿ ತನಿಖೆ, ಎಫ್ಎಸ್ಎಲ್ ಪರಿಶೀಲನೆಗೆ ಹೈಕೋರ್ಟ್ ಅಸ್ತು
ಹೈಕೋರ್ಟ್
Follow us
TV9 Web
| Updated By: sandhya thejappa

Updated on:Nov 16, 2021 | 3:01 PM

ಬೆಂಗಳೂರು: ಕೋರ್ಟ್ ದಾಖಲೆಗಳನ್ನೇ ತಿರುಚಿ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಖಾಸಗಿ ಆಸ್ತಿ ಕಬಳಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಹೈಕೋರ್ಟ್ ಅನುಮತಿ ನೀಡಿದೆ. ಕಳೆದ ವರ್ಷವಷ್ಟೇ ರಿಟ್ ಅರ್ಜಿಯೊಂದರ ವಿಚಾರಣೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು. ಶಾ ಹರಿಲಾಲ್ ಭಿಕಾಬಾಯಿ ಕಂಪನಿಗೆ ಸೇರಿದ ಆಸ್ತಿಯನ್ನು ಮಾಲೀಕರ ಗಮನಕ್ಕೇ ಬರದೆ ಕೆಲ ವ್ಯಕ್ತಿಗಳು ಕಬಳಿಸಲು ಸಂಚು ರೂಪಿಸಿದ್ದರು. ನಕಲಿ ದಾಖಲೆ ಸೃಷ್ಟಿಸಿದ್ದಲ್ಲದೇ ಕೆಲ ನಕಲಿ ವ್ಯಕ್ತಿಗಳನ್ನು ಕಟ್ಟಡದ ಬಾಡಿಗೆದಾರರೆಂದು ಹೆಸರಿಸಿ ಯಶವಂತಪುರದ 5600 ಚದರಡಿ ಜಾಗದಿಂದ ಅವರನ್ನು ಖಾಲಿ ಮಾಡಿಸಲು ಕೋರ್ಟ್ನಲ್ಲಿ 2018 ರಲ್ಲಿ ಕೇಸ್ ದಾಖಲಿಸಲಾಗಿತ್ತು.

ನಂತರ ಒಂದೇ ತಿಂಗಳಲ್ಲಿ ಆ ನಕಲಿ ಮಾಲೀಕರು, ನಕಲಿ ಬಾಡಿಗೆದಾರರೊಂದಿಗೆ ರಾಜಿ ಸಂಧಾನ ಮಾಡಿಕೊಂಡು ಕೇಸನ್ನು ಇತ್ಯರ್ಥ ಪಡಿಸಿಕೊಂಡು ಇದಕ್ಕೆ ಕೋರ್ಟ್ ಡಿಕ್ರಿ ಪಡೆದಿದ್ದರು. ನಂತರ ಈ ಡಿಕ್ರಿ ಬಳಸಿ ಮೂಲ ಮಾಲೀಕರನ್ನೇ ಸ್ವಾಧೀನದಿಂದ ಹೊರಹಾಕಲು ಯತ್ನಿಸಿದ್ದರು. ಈ ವಿಚಾರ ಗಮನಕ್ಕೆ ಬಂದ ಕೂಡಲೇ ಗಾಭರಿಯಾದ ಮೂಲ ಮಾಲೀಕರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದ ಹೈಕೋರ್ಟ್ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಘಟನೆಯ ಬಗ್ಗೆ ಸಿಐಡಿ ತನಿಖೆಗೆ ನಿರ್ದೇಶನ ನೀಡಿದ್ದರು. ಪ್ರಕರಣದ ಗಂಭೀರತೆ ಪರಿಗಣಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಸಿಐಡಿ ತನಿಖೆ ವೇಳೆ ಈ ಅಕ್ರಮದಲ್ಲಿ ಕೆಲವು ವಕೀಲರೂ ಪಾಲ್ಗೊಂಡಿದ್ದು ಪತ್ತೆಯಾಗಿತ್ತು.

ಅಲ್ಲದೇ ಬೆಂಗಳೂರಿನ ಜಯನಗರ ಸೇರಿ ಹಲವೆಡೆ ಇಂಥದ್ದೇ ಅಕ್ರಮ ಎಸಗಿರುವುದು ಕಂಡು ಬಂದಿದೆ. ಕೋರ್ಟ್ಗಳಲ್ಲಿ ದಾಖಲಾದ 71 ಪ್ರಕರಣ ಸೇರಿದಂತೆ ಒಟ್ಟು 118 ಇಂತಹ ಪ್ರಕರಣ ನಡೆದಿರುವುದು ಸಿಐಡಿ ತನಿಖೆ ವೇಳೆ ಪತ್ತೆಯಾಗಿದೆ. ಹೈಕೋರ್ಟ್ ಪ್ರಕರಣದ ತನಿಖಾಧಿಕಾರಿಗಳಿಗೆ ಸಹಕರಿಸುವಂತೆ ಕಂದಾಯಾಧಿಕಾರಿಗಳಿಗೆ ಸೂಚನೆ ನೀಡಿದೆ. ಬೆಂಗಳೂರಿನ ಲಘು ವ್ಯಾಜ್ಯಗಳ ನ್ಯಾಯಾಲಯ ಕೂಡಾ ದಾಖಲೆಗಳನ್ನು ಸಿಐಡಿಗೆ ರವಾನಿಸಿದೆ.

ನೋಟರಿ ದಾಖಲೆಗಳನ್ನೂ ಬಳಸಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕೆಲ ವಕೀಲರು, ಕೆಲ ನೋಟರಿಗಳು ಶಾಮೀಲಾಗಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಂದೆ ಇಂತಹ ಘಟನೆ ಮರುಕಳಿಸದಂತೆ ತಡೆಯಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅನ್ನೂ ಪ್ರತಿವಾದಿಯಾಗಿಸಿದೆ. ಕೋರ್ಟ್ಗೆ ಸಲಹೆ ನೀಡಲು ವಕೀಲ ಶ್ರೀಧರ್ ಪ್ರಭುರನ್ನು ಅಮೈಕಸ್ ಕ್ಯೂರಿಯಾಗಿ ನೇಮಿಸಿತ್ತು. ಇಂದು ಕೋರ್ಟ್ಗೆ ಹೇಳಿಕೆ ನೀಡಿದ ಅಮೈಕಸ್ ಕ್ಯೂರಿ ನೋಟರಿ ದಾಖಲೆಗಳನ್ನೂ ಡಿಜಿಟಲೀಕರಣ ಮಾಡುವ ಅಗತ್ಯವಿದೆ. ನೋಟರಿ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಅಂತಿಮ ಆದೇಶದ ವೇಳೆ ಈ ಬಗ್ಗೆ ಪರಿಗಣಿಸುವುದಾಗಿ ಹೇಳಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ರವರಿದ್ದ ವಿಭಾಗೀಯ ಪೀಠ ಸದ್ಯ ಜಮೀನಿನ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಅನುಮತಿ ನೀಡಿದೆ. ತನಿಖೆ ಪ್ರಗತಿ ವರದಿ ಸಲ್ಲಿಸಲು ಸಿಐಡಿ ಪೊಲೀಸರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ

ಯಾದಗಿರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ! 52 ಲಕ್ಷ ರೂ. ಮೌಲ್ಯದ ಮರಳು ಜಪ್ತಿ

ಮಧ್ಯರಾತ್ರಿ ಹಸುವನ್ನು ರಕ್ಷಿಸಿದ ಪಂಜಾಬ್ ಮುಖ್ಯಮಂತ್ರಿ; ಸಾಮಾಜಿಕ ಮಾಧ್ಯಮದಲ್ಲಿ ಚನ್ನಿ ಕಾರ್ಯಕ್ಕೆ  ಶ್ಲಾಘನೆ

Published On - 3:00 pm, Tue, 16 November 21

ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ