AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ

ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಆದೇಶಿಸಿದೆ.

ನಿಯಮಬಾಹಿರವಾಗಿ ಪ್ರವೇಶ: 10 ವಿದ್ಯಾರ್ಥಿಗಳಿಗೆ ಪರಿಹಾರ ನೀಡುವಂತೆ ಮದರ್ ಮೇರಿ ನರ್ಸಿಂಗ್ ಕಾಲೇಜಿಗೆ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: Rakesh Nayak Manchi|

Updated on:Jul 03, 2023 | 10:29 PM

Share

ಬೆಂಗಳೂರು: ನಿಯಮಬಾಹಿರವಾಗಿ ಪ್ರವೇಶ ನೀಡಿದ ಹಿನ್ನೆಲೆ 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಕಲಬುರಗಿ ಜಿಲ್ಲೆಯ ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ (Mother Mary Nursing College) ಆದೇಶಿಸಿದೆ. ಪ್ರವೇಶದ ಅವಧಿ ಮುಗಿದ ಮೇಲೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ನ್ಯಾ.ಸೂರಜ್ ಗೋವಿಂದರಾಜ್​ ಅವರಿದ್ದ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ.

ವಿದ್ಯಾರ್ಥಿಗಳನ್ನು ಮದರ್ ಮೇರಿ ನರ್ಸಿಂಗ್ ಕಾಲೇಜ್​ಗೆ ಸೇರಿಸುವ ಕೊನೆಯ ದಿನಾಂಕ 2022ರ ಏಪ್ರಿಲ್ 7 ಆಗಿತ್ತು. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದೆ ಮುಕ್ತಾಯದ ನಂತರ ನಕಲಿ ಪ್ರವೇಶ ದಾಖಲು ಮಾಡಿ ದಾಖಲಾತಿ ಆಗಿದೆ ಎಂದು ಸೂಚಿಸಿಲಾಗಿತ್ತು. ಅಲ್ಲದೆ, ದಾಖಲೆಗಳನ್ನು ಅಪ್​ಲೋಡ್ ಮಾಡದೆ ನಕಲಿ ದಾಖಲಾತಿ ರಿಜಿಸ್ಟರ್​ ಹೆಸರಿನಲ್ಲಿ ಶುಲ್ಕು ವಸೂಲಿ ಮಾಡಲಾಗಿತ್ತು. ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆ ಮೂಲಕ ಬಿಎಸ್​ಸಿ ನರ್ಸಿಂಗ್ ವ್ಯಾಸಾಂಗದ ಕನಸು ಹೊತ್ತುಕೊಂಡಿರುವ ವಿದ್ಯಾರ್ಥಿಗಳ ಬಾಳಲ್ಲಿ ಮದರ್ ಮೇರಿ ನರ್ಸಿಂಗ್ ಕಾಲೇಜು ಚೆಲ್ಲಾಟ ಆಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 3 July 23

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು