AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ

ಅತ್ಯಂತ ಹೆಚ್ಚು ವಾಹನ ದಟ್ಟನೆ ಹೊಂದಿರುವ ದೇಶದ ನಗರಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಕೂಡ ಒಂದು. ನಗರದಲ್ಲಿ ವಾಹನ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಸಲಹೆ ನೀಡಿದ್ದು, ಶಾಲಾ ಕಾಲೇಜು, ಕಂಪನಿ, ಕೈಗಾರಿಕೆಗಳ ಪ್ರತಿನಿಧಿಗಳಂದಿಗೆ ಚರ್ಚಿಸುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ತಪ್ಪಿಸಲು ಮೆಟ್ರೊ ವಿಸ್ತರಣೆಗೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಬೆಂಗಳೂರು ವಾಹನ ದಟ್ಟಣೆ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲಹೆ ನೀಡಿದ ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: Rakesh Nayak Manchi|

Updated on: Sep 12, 2023 | 9:00 PM

Share

ಬೆಂಗಳೂರು, ಸೆ.12: ನಗರದಲ್ಲಿ ವಾಹನ ದಟ್ಟಣೆಯನ್ನು (Bengaluru Traffic) ತಪ್ಪಿಸಲು ಮೆಟ್ರೋ (Bengaluru Metro) ವಿಸ್ತರಣೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ (Karnataka High Court) ಸಲಹೆ ನೀಡಿದೆ. ಅಲ್ಲದೆ, ಆರು ವಾರಗಳಲ್ಲಿ ಪ್ರಗತಿ ವರದಿ, ಅನುಪಾಲನಾ ವರದಿ ಸಲ್ಲಿಸಲು ನಿರ್ದೇಶನ ನೀಡಿದೆ.

ವಾಹನ ದಟ್ಟಣೆ ಸಂಬಂಧ ಶಾಲಾ ಕಾಲೇಜುಗಳು,‌ ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಿದ ನ್ಯಾ. ಪ್ರಸನ್ನ ಬಿ.ವರಾಳೆ,‌ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ ಪ್ರತಿನಿಧಿಗಳ ಸಭೆ ಕರೆದು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಅಲ್ಲದೆ, ನಗರದಲ್ಲಿ ಮೆಟ್ರೋ ಸಂಚಾರ ನಿಯಂತ್ರಣದಲ್ಲಿ ಮೆಟ್ರೋ ರೈಲು ಪ್ರಮುಖ ಪಾತ್ರವಹಿಸುತ್ತಿದೆ. ಹೀಗಾಗಿ ಮೆಟ್ರೊ ರೈಲು ಮಾರ್ಗ ವಿಸ್ತರಣೆ ಸೇರಿದಂತೆ ಪ್ರಮುಖ ಕ್ರಮಗಳನ್ನು ಕೈಗೊಳ್ಳುವಂತೆ ಪೀಠ ಸೂಚನೆ ನೀಡಿದೆ.

ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳ ನೇಮಕ ಖಾಯಂ

ಕರ್ನಾಟಕ ಹೈಕೋರ್ಟ್​ನ ಇಬ್ಬರು ನ್ಯಾಯಮೂರ್ತಿಗಳಾದ ನ್ಯಾ.ಅನಂತ್ ರಾಮನಾಥ ಹೆಗಡೆ, ನ್ಯಾ.ಕೆ.ಎಸ್.ಹೇಮಲೇಖ ಅವರ ನೇಮಕವನ್ನು ಖಾಯಂಗೊಳಿಸಲಾಗಿದೆ. ಅಲ್ಲದೆ, ಒಂದು ವರ್ಷದ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸಿದ್ದಯ್ಯ ರಾಚಯ್ಯ ಅವರನ್ನು ಮುಂದುವರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!