AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದ ಹೈಕೋರ್ಟ್

ಜೀವನಾಶಮ ಅರ್ಜಿಗಳನ್ನು 60 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ ಕೆಲವು ಪ್ರಕರಣಗಳಲ್ಲಿ ಅರ್ಜಿಗಳು ವರ್ಷಗಳಿಂದ ಬಾಕಿ ಇವೆ. ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ ಎಂದು ಹೈಕೋರ್ಟ್ ಹೇಳಿದೆ.

ಜೀವನಾಂಶ ಕೋರಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: Rakesh Nayak Manchi|

Updated on: Feb 10, 2023 | 6:30 PM

Share

ಬೆಂಗಳೂರು: ಕೌಟುಂಬಿಕ ಕಲಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೀವನಾಂಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಕೆಲವೊಂದು ಅರ್ಜಿಗಳು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಮನಿಸಿದ ಹೈಕೋರ್ಟ್ (Karnataka High Court), ಇಂತಹ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. 60 ದಿನಗಳಲ್ಲಿ ಅರ್ಜಿಗಳನ್ನು ಇತ್ಯರ್ಥಪಡಿಸಬೇಕೆಂದು ನಿಯಮವಿದೆ. ಆದರೆ ಕೆಲವು ಪ್ರಕರಣಗಳು ವರ್ಷಗಳಿಂದ ಬಾಕಿ ಉಳಿದಿದ್ದು, ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.

ಜೀವನಾಂಶ ಕೋರಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 24ರಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೀಗೆ ಸಲ್ಲಿಕೆಯಾದ ಅರ್ಜಿಗಳನ್ನು 60 ದಿನಗಳಲ್ಲಿ ಇತ್ಯರ್ಥ ಮಾಡಬೇಕು ಎಂಬ ನಿಯಮಿ ಇದೆ. ಆದರೆ ಕೆಲ ಪ್ರಕರಣಗಳಲ್ಲಿ ಅರ್ಜಿಗಳು ವರ್ಷಗಳಿಂದ ಬಾಕಿಯಿವೆ. ಅರ್ಹ ಪತ್ನಿಗೆ‌ ಜೀವನಾಂಶ ಸಿಗಲೆಂದು ಕಾಲಮಿತಿ ನಿಗದಿ ಮಾಡಿದೆ. ವಿಳಂಬದಿಂದಾಗಿ‌ ಜೀವನಾಂಶ ಕೋರಿದ ಅರ್ಜಿಗಳ ಉದ್ದೇಶವೇ ನಿರರ್ಥಕವಾಗಲಿವೆ. ಅರ್ಜಿ ಸಲ್ಲಿಸಿದ ತಕ್ಷಣ ಪತಿಗೆ ನೋಟಿಸ್ ನೀಡಬೇಕು ಎಂದು ಪೀಠ ಆದೇಶಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ತನಿಖೆಗೆ ಮಧ್ಯಂತರ ತಡೆ

ಅಲ್ಲದೆ, ಅರ್ಜಿ ಸಲ್ಲಿಸಿದ ಕೂಡಲೇ ಪತಿಗೆ ನೋಟಿಸ್ ನೀಡಿ ಎರಡು ತಿಂಗಳ ಒಳಗೆ ಪತಿ, ಪತ್ನಿ ತಮ್ಮ ಆಸ್ತಿ, ಹೊಣೆಗಾರಿಕೆ ವಿವರ ಸಲ್ಲಿಸಬೇಕು. ಅದಾದ ನಾಲ್ಕು ತಿಂಗಳೊಳಗೆ ಜೀವನಾಂಶ ಕುರಿತು ಆದೇಶ ನೀಡಬೇಕು. ಒಟ್ಟಾರೆಯಾಗಿ ಆರು ತಿಂಗಳಲ್ಲಿ ಜೀವನಾಂಶ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು. ಅದಕ್ಕೂ ವಿಳಂಬವಾದರೆ ಲಿಖಿತ ಕಾರಣಗಳನ್ನು ನೀಡಬೇಕು ಎಂದು ವಿಚಾರಣಾ ನ್ಯಾಯಾಲಯಗಳಿಗೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಿರ್ದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ