AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಕರ್ನಾಟಕ ಸರ್ಕಾರದ ಮೇಲ್ಮನವಿ ವಜಾ: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿಗೆ ರಿಲೀಫ್
ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Dec 29, 2021 | 11:07 PM

Share

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಹೈಕೋರ್ಟ್​ನಲ್ಲಿ ತಾಂತ್ರಿಕ ಕಾರಣದಿಂದ ರಿಲೀಫ್ ಸಿಕ್ಕಿದೆ. ಸಿಐಡಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿಲ್ಲ, ಸರ್ಕಾರ ಈ ಬಗ್ಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಠಾಣೆಯ ಅಧಿಕಾರವಿಲ್ಲ. ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಪ್ರಕರಣ ಕೈಬಿಟ್ಟಿದ್ದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾ ಮಾಡಿದೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಮತ್ತು ಪ್ರೇಮಲತಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ರಾಘವೇಶ್ವರ ಭಾರತಿ ಸ್ವಾಮೀಜಿ 2011ರಿಂದ 2014ರ ನಡುವೆ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಗಿರಿನಗರ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನಗರದ ನ್ಯಾಯಾಲಯಕ್ಕೆ ರಾಘವೇಶ್ವರ ಭಾರತಿ ಮತ್ತು ಇತರ 7 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. 1340 ಪುಟಗಳ ಚಾರ್ಜ್​ಶೀಟ್​ನಲ್ಲಿ 151 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಅಧೀನ ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಆರೋಪಮುಕ್ತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮತ್ತು ದೂರುದಾರರು ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್​ಗೆ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ಸಹ ಈ ಪ್ರಕರಣದಲ್ಲಿ ಸ್ವಾಮೀಜಿಗೆ ರಿಲೀಫ್ ನೀಡಿದೆ. ತಮ್ಮ ವಿರುದ್ಧ ಆರೋಪ ಮಾಡಿದ್ದ ಗಾಯಕಿ ಪ್ರೇಮಲತಾ ಹಾಗೂ ಅವರ ಪತಿ ದಿವಾಕರ್ ಅವರ ವಿರುದ್ಧ ಸ್ವಾಮೀಜಿ ಸಹ ಬ್ಲಾಕ್​ಮೇಲ್ ಆರೋಪ ಹೊರಿಸಿ, ಹೊನ್ನಾವರ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ಬಿದ್ದುಹೋಗಿತ್ತು.

ಇದನ್ನೂ ಓದಿ: ಅಪ್ರಾಪ್ರ ಬಾಲಕಿ ಮೇಲೆ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು, 95 ಸಾವಿರ ದಂಡ ಇದನ್ನೂ ಓದಿ: ‘ಜನಪ್ರತಿನಿಧಿಗಳೇ ಎಚ್ಚರವಿರಲಿ’ ; ‘ಒಮ್ಮೆ ಹೆಣ್ತನ ಅನುಭವಿಸಿ, ಆಮೇಲೆ ಅತ್ಯಾಚಾರದ ಆನಂದವನ್ನು ಹಂಚಿಕೊಳ್ಳುವಿರಂತೆ’

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?